<p><strong>ಹಲಗೂರು</strong>: ಸಮೀಪದ ಅಗಸನಪುರ ಹೊರವಲಯದಲ್ಲಿ ಮೇಯಲು ಹೋಗಿದ್ದಾಗ ವಿದ್ಯುತ್ ಸ್ಪರ್ಶಿಸಿದ ಪರಿಣಾಮ ನಾಲ್ಕು ಕುರಿಗಳು ಸ್ಥಳದಲ್ಲೇ ಸಾವಿಗೀಡಾದ ಘಟನೆ ಶುಕ್ರವಾರ ನಡೆದಿದೆ.</p>.<p>ಕೋಡಿಪುರ ಗ್ರಾಮದ ಬಸವೇಗೌಡ ಅವರ ಪುತ್ರ ಸಿದ್ದರಾಮು ಅವರು ಕುರಿ ಮೇಯಿಸಲು ಹೋದ ಸಂದರ್ಭ ದುರ್ಘಟನೆ ಸಂಭವಿಸಿದೆ.</p>.<p>ಹಾಡ್ಲಿ ವೃತ್ತದ ಚೆಸ್ಕಾಂ ಜೂನಿಯರ್ ಎಂಜಿನಿಯರ್ ಮಧುಸೂಧನ್ ಸ್ಥಳಕ್ಕೆ ಭೇಟಿ ನೀಡಿ ಕೆ.ಪಿ.ಟಿ.ಸಿ.ಎಲ್ ವತಿಯಿಂದ ಸಂತ್ರಸ್ತರಿಗೆ ಪರಿಹಾರ ಕೊಡಿಸುವುದಾಗಿ ಭರವಸೆ ನೀಡಿದರು.</p>.<p>ಪಶು ವೈದ್ಯಾಧಿಕಾರಿ ಡಾ.ಸಂದೇಶ್ ಮರಣೋತ್ತರ ಪರೀಕ್ಷೆ ನಡೆಸಿದರು. ಎಎಸ್ಐ ರಮೇಶ್ ಮತ್ತು ಕಾನ್ಸ್ಟೆಬಲ್ ಗೋವರ್ಧನ್ ಸ್ಥಳ ಪರಿಶೀಲನೆ ನಡೆಸಿದರು.</p>.<p>‘₹1 ಲಕ್ಷಕ್ಕೂ ಹೆಚ್ಚು ನಷ್ಟ ಉಂಟಾಗಿದೆ. ಸೆಸ್ಕ್ ಅಧಿಕಾರಿಗಳು ಶೀಘ್ರ ಸೂಕ್ತ ಪರಿಹಾರ ನೀಡಬೇಕು’ ಎಂದು ಸಿದ್ದರಾಮು ಮನವಿ ಮಾಡಿಕೊಂಡರು.</p>.<p>ಹಲಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಲಗೂರು</strong>: ಸಮೀಪದ ಅಗಸನಪುರ ಹೊರವಲಯದಲ್ಲಿ ಮೇಯಲು ಹೋಗಿದ್ದಾಗ ವಿದ್ಯುತ್ ಸ್ಪರ್ಶಿಸಿದ ಪರಿಣಾಮ ನಾಲ್ಕು ಕುರಿಗಳು ಸ್ಥಳದಲ್ಲೇ ಸಾವಿಗೀಡಾದ ಘಟನೆ ಶುಕ್ರವಾರ ನಡೆದಿದೆ.</p>.<p>ಕೋಡಿಪುರ ಗ್ರಾಮದ ಬಸವೇಗೌಡ ಅವರ ಪುತ್ರ ಸಿದ್ದರಾಮು ಅವರು ಕುರಿ ಮೇಯಿಸಲು ಹೋದ ಸಂದರ್ಭ ದುರ್ಘಟನೆ ಸಂಭವಿಸಿದೆ.</p>.<p>ಹಾಡ್ಲಿ ವೃತ್ತದ ಚೆಸ್ಕಾಂ ಜೂನಿಯರ್ ಎಂಜಿನಿಯರ್ ಮಧುಸೂಧನ್ ಸ್ಥಳಕ್ಕೆ ಭೇಟಿ ನೀಡಿ ಕೆ.ಪಿ.ಟಿ.ಸಿ.ಎಲ್ ವತಿಯಿಂದ ಸಂತ್ರಸ್ತರಿಗೆ ಪರಿಹಾರ ಕೊಡಿಸುವುದಾಗಿ ಭರವಸೆ ನೀಡಿದರು.</p>.<p>ಪಶು ವೈದ್ಯಾಧಿಕಾರಿ ಡಾ.ಸಂದೇಶ್ ಮರಣೋತ್ತರ ಪರೀಕ್ಷೆ ನಡೆಸಿದರು. ಎಎಸ್ಐ ರಮೇಶ್ ಮತ್ತು ಕಾನ್ಸ್ಟೆಬಲ್ ಗೋವರ್ಧನ್ ಸ್ಥಳ ಪರಿಶೀಲನೆ ನಡೆಸಿದರು.</p>.<p>‘₹1 ಲಕ್ಷಕ್ಕೂ ಹೆಚ್ಚು ನಷ್ಟ ಉಂಟಾಗಿದೆ. ಸೆಸ್ಕ್ ಅಧಿಕಾರಿಗಳು ಶೀಘ್ರ ಸೂಕ್ತ ಪರಿಹಾರ ನೀಡಬೇಕು’ ಎಂದು ಸಿದ್ದರಾಮು ಮನವಿ ಮಾಡಿಕೊಂಡರು.</p>.<p>ಹಲಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>