<p><strong>ಮಂಡ್ಯ</strong>: ತಾಲ್ಲೂಕಿನ ಬಿ.ಹೊಸೂರು ಗ್ರಾಮದ ರೈತ ಎಚ್.ಸಿದ್ದಯ್ಯ ಅವರಿಗೆ ಸೇರಿದ ಕಬ್ಬಿನ ಗದ್ದೆಗೆ ವಿದ್ಯುತ್ ಶಾರ್ಟ್ ಸರ್ಕಿಟ್ನಿಂದ ಬೆಂಕಿ ತಗುಲಿ ಎರಡು ಎಕರೆಗೂ ಹೆಚ್ಚು ಬೆಳೆ ಭಸ್ಮವಾಗಿರುವ ಘಟನೆ ಗುರುವಾರ ನಡೆದಿದೆ.</p>.<p>ಸಾಲ ಮಾಡಿ ತಮ್ಮ ಜಮೀನಿನಲ್ಲಿ ಕಬ್ಬು ಬೆಳೆದಿದ್ದರು, ಈಗಾಗಲೇ ಕಟಾವಿಗೆ ಬಂದಿತ್ತು. ಕಬ್ಬು ಕಟಾವು ಮಾಡುವ ಕೆಲಸಗಾರರಿಗೆ ಮುಂಗಡ ಹಣ ನೀಡಲಾಗಿತ್ತು. ನಾಗಮಂಗಲ ಮುಖ್ಯ ವಿದ್ಯುತ್ ಘಟಕಕ್ಕೆ ಸಂಪರ್ಕಿಸುವ ವಿದ್ಯುತ್ ತಂತಿ ಈ ಭಾಗದಲ್ಲಿ ಹಾದು ಹೋಗಿದ್ದು ಶಾರ್ಟ್ ಸರ್ಕಿಟ್ನಿಂದ ಬೆಂಕಿ ಹೊತ್ತಿಕೊಂಡಿದೆ.</p>.<p>ಬೆಂಕಿಯ ಕೆನ್ನಾಲಿಗೆಗೆ ಲಕ್ಷಾಂತರ ರೂಪಾಯಿ ಮೌಲ್ಯದ ಕಬ್ಬು ಸುಟ್ಟು ಹೋಗಿದ್ದು ರೈತ ಕಂಗಾಲಾಗಿದ್ಧಾರೆ. ಸುಟ್ಟು ಹೋದ ಕಬ್ಬಿನ ಬೆಳೆಗೆ ಸೂಕ್ತ ಪರಿಹಾರ ನೀಡಬೇಕು ಎಂದು ಸಿದ್ದಯ್ಯ ಅವರ ಮಕ್ಕಳಾದ ನಾಗರಾಜು ಮತ್ತು ಶಿವಸ್ವಾಮಿ ಅವರು ಮನವಿ ಮಾಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಡ್ಯ</strong>: ತಾಲ್ಲೂಕಿನ ಬಿ.ಹೊಸೂರು ಗ್ರಾಮದ ರೈತ ಎಚ್.ಸಿದ್ದಯ್ಯ ಅವರಿಗೆ ಸೇರಿದ ಕಬ್ಬಿನ ಗದ್ದೆಗೆ ವಿದ್ಯುತ್ ಶಾರ್ಟ್ ಸರ್ಕಿಟ್ನಿಂದ ಬೆಂಕಿ ತಗುಲಿ ಎರಡು ಎಕರೆಗೂ ಹೆಚ್ಚು ಬೆಳೆ ಭಸ್ಮವಾಗಿರುವ ಘಟನೆ ಗುರುವಾರ ನಡೆದಿದೆ.</p>.<p>ಸಾಲ ಮಾಡಿ ತಮ್ಮ ಜಮೀನಿನಲ್ಲಿ ಕಬ್ಬು ಬೆಳೆದಿದ್ದರು, ಈಗಾಗಲೇ ಕಟಾವಿಗೆ ಬಂದಿತ್ತು. ಕಬ್ಬು ಕಟಾವು ಮಾಡುವ ಕೆಲಸಗಾರರಿಗೆ ಮುಂಗಡ ಹಣ ನೀಡಲಾಗಿತ್ತು. ನಾಗಮಂಗಲ ಮುಖ್ಯ ವಿದ್ಯುತ್ ಘಟಕಕ್ಕೆ ಸಂಪರ್ಕಿಸುವ ವಿದ್ಯುತ್ ತಂತಿ ಈ ಭಾಗದಲ್ಲಿ ಹಾದು ಹೋಗಿದ್ದು ಶಾರ್ಟ್ ಸರ್ಕಿಟ್ನಿಂದ ಬೆಂಕಿ ಹೊತ್ತಿಕೊಂಡಿದೆ.</p>.<p>ಬೆಂಕಿಯ ಕೆನ್ನಾಲಿಗೆಗೆ ಲಕ್ಷಾಂತರ ರೂಪಾಯಿ ಮೌಲ್ಯದ ಕಬ್ಬು ಸುಟ್ಟು ಹೋಗಿದ್ದು ರೈತ ಕಂಗಾಲಾಗಿದ್ಧಾರೆ. ಸುಟ್ಟು ಹೋದ ಕಬ್ಬಿನ ಬೆಳೆಗೆ ಸೂಕ್ತ ಪರಿಹಾರ ನೀಡಬೇಕು ಎಂದು ಸಿದ್ದಯ್ಯ ಅವರ ಮಕ್ಕಳಾದ ನಾಗರಾಜು ಮತ್ತು ಶಿವಸ್ವಾಮಿ ಅವರು ಮನವಿ ಮಾಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>