ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಾರ್ಟ್‌ ಸರ್ಕಿಟ್‌: 2 ಎಕರೆ ಕಬ್ಬು ಭಸ್ಮ

Last Updated 12 ಜನವರಿ 2023, 14:21 IST
ಅಕ್ಷರ ಗಾತ್ರ

ಮಂಡ್ಯ: ತಾಲ್ಲೂಕಿನ ಬಿ.ಹೊಸೂರು ಗ್ರಾಮದ ರೈತ ಎಚ್‌.ಸಿದ್ದಯ್ಯ ಅವರಿಗೆ ಸೇರಿದ ಕಬ್ಬಿನ ಗದ್ದೆಗೆ ವಿದ್ಯುತ್‌ ಶಾರ್ಟ್‌ ಸರ್ಕಿಟ್‌ನಿಂದ ಬೆಂಕಿ ತಗುಲಿ ಎರಡು ಎಕರೆಗೂ ಹೆಚ್ಚು ಬೆಳೆ ಭಸ್ಮವಾಗಿರುವ ಘಟನೆ ಗುರುವಾರ ನಡೆದಿದೆ.

ಸಾಲ ಮಾಡಿ ತಮ್ಮ ಜಮೀನಿನಲ್ಲಿ ಕಬ್ಬು ಬೆಳೆದಿದ್ದರು, ಈಗಾಗಲೇ ಕಟಾವಿಗೆ ಬಂದಿತ್ತು. ಕಬ್ಬು ಕಟಾವು ಮಾಡುವ ಕೆಲಸಗಾರರಿಗೆ ಮುಂಗಡ ಹಣ ನೀಡಲಾಗಿತ್ತು. ನಾಗಮಂಗಲ ಮುಖ್ಯ ವಿದ್ಯುತ್ ಘಟಕಕ್ಕೆ ಸಂಪರ್ಕಿಸುವ ವಿದ್ಯುತ್‌ ತಂತಿ ಈ ಭಾಗದಲ್ಲಿ ಹಾದು ಹೋಗಿದ್ದು ಶಾರ್ಟ್‌ ಸರ್ಕಿಟ್‌ನಿಂದ ಬೆಂಕಿ ಹೊತ್ತಿಕೊಂಡಿದೆ.

ಬೆಂಕಿಯ ಕೆನ್ನಾಲಿಗೆಗೆ ಲಕ್ಷಾಂತರ ರೂಪಾಯಿ ಮೌಲ್ಯದ ಕಬ್ಬು ಸುಟ್ಟು ಹೋಗಿದ್ದು ರೈತ ಕಂಗಾಲಾಗಿದ್ಧಾರೆ. ಸುಟ್ಟು ಹೋದ ಕಬ್ಬಿನ ಬೆಳೆಗೆ ಸೂಕ್ತ ಪರಿಹಾರ ನೀಡಬೇಕು ಎಂದು ಸಿದ್ದಯ್ಯ ಅವರ ಮಕ್ಕಳಾದ ನಾಗರಾಜು ಮತ್ತು ಶಿವಸ್ವಾಮಿ ಅವರು ಮನವಿ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT