ಮುತ್ತತ್ತಿ ಅರಣ್ಯ ಪ್ರದೇಶದಿಂದ ಆಹಾರ ಅರಸಿ ಬಂದ 10 ವರ್ಷದ ಗಂಡಾನೆ ಜಮೀನಿನ ತಂತಿ ಬೇಲಿಗೆ ಸಂಪರ್ಕ ನೀಡಿದ್ದ ವಿದ್ಯುತ್ಗೆ ಸಿಲುಕಿ ಸ್ಥಳದಲ್ಲೇ ಮೃತಪಟ್ಟಿದೆ. ರೈತ ಶಿವಲಿಂಗೇಗೌಡರ ಮಗ ಎಸ್. ಕಿರಣ್ , ತಮ್ಮ ಜಮೀನಿಗೆ ದಾಳಿ ಇಡುತ್ತಿದ್ದ ಹಂದಿಗಳನ್ನು ತಡೆಯಲು ಜಮೀನಿನ ಸುತ್ತಲೂ ಬೇಲಿ ಹಾಕಿಸಿ ವಿದ್ಯುತ್ ಸಂಪರ್ಕ ನೀಡಿದ್ದರು.