<p><strong>ಮಂಡ್ಯ</strong>: ಜಿಲ್ಲೆಯ ಶ್ರೀರಂಗಪಟ್ಟಣ ಮತ್ತು ಮಂಡ್ಯ ತಾಲ್ಲೂಕಿನ ಗಡಿಭಾಗದಲ್ಲಿ ಕಳೆದ ಮೂರು ದಿನಗಳಿಂದ ಸಂಚರಿಸುತ್ತಿರುವ ಕಾಡಾನೆಗಳು ಸದ್ಯಕ್ಕೆ ನಗರದಲ್ಲಿ ಕಾಣಿಸಿಕೊಂಡು ಜನರಲ್ಲಿ ಭಯ ಉಂಟು ಮಾಡಿವೆ.</p>.<p>ಶ್ರೀರಂಗಪಟ್ಟಣ ತಾಲ್ಲೂಕಿನ ಕೆಲವು ಗ್ರಾಮಗಳಲ್ಲಿ ಹಾಗೂ ಮಂಡ್ಯ ತಾಲ್ಲೂಕಿನ ಮೊತ್ತಹಳ್ಳಿ ಗ್ರಾಮದಲ್ಲಿ ಕಾಣಿಸಿಕೊಂಡಿದ್ದು, ಸೋಮವಾರ ರಾತ್ರಿಯಿಂದ ನಗರದ ಕಲ್ಲಹಳ್ಳಿಯಲ್ಲಿ ಕಾಣಿಸಿಕೊಂಡಿದ್ದು, ಸದ್ವಿದ್ಯಾ ಶಾಲೆ ಬಳಿಯ ಕಬ್ಬಿನ ಗದ್ದೆಯಲ್ಲಿ ಬೀಡು ಬಿಟ್ಟಿವೆ.</p>.<p>ನಗರದ ಹೊರವಲಯದ ಮಳವಳ್ಳಿ ಸಂಪರ್ಕಿಸುವ ಹನಿಯಂಬಾಡಿ ರಸ್ತೆಯ ಸುತ್ತಮುತ್ತವಿರುವ ಗದ್ದೆ ಬಯಲಿನಲ್ಲಿ ಎರಡು ಆನೆಗಳು ತಿರುಗಾಡುತ್ತಿರುವ ದೃಶ್ಯ ಡ್ರೋಣ್ ಕ್ಯಾಮೆರಾದಲ್ಲಿ ಸೆರೆಯಾಗಿವೆ.</p>.<p>ಮೊದಲು ಕಲ್ಲಹಳ್ಳಿ ವಿವಿ ನಗರ ಭಾಗದಲ್ಲಿ ಕಾಣಿಸಿಕೊಂಡಿರುವ ಆನೆಗಳನ್ನು ನೋಡಿದ ನಾಯಿಗಳು ಬೊಗಳಿವೆ. ಸ್ಥಳೀಯರಿಗೂ ಕಾಣಿಸಿಕೊಂಡಿವೆ. ನಂತರ ನಗರದ ಹೊರವಲಯದ ಕಬ್ಬಿನ ಗದ್ದೆಯಲ್ಲಿರುವುದರಿಂದ ಅತ್ತ ಯಾರೂ ಸುಳಿಯದಂತೆ ಅರಣ್ಯ ಅಧಿಕಾರಿಗಳು ಎಚ್ಚರಿಕೆ ನೀಡಿ ಸ್ಥಳಲ್ಲಿಯೇ ಮೊಕ್ಕಾಂ ಹೂಡಿದ್ದಾರೆ.</p>.<p>ಮಂಗಳವಾರ ರಾತ್ರಿ ವೇಳೆಗೆ ಕಾರ್ಯಾಚರಣೆ ನಡೆಸುವ ಅಧಿಕಾರಿಗಳು ಮುತ್ತತ್ತಿ ಕಾಡಿಗಟ್ಟಲು ಸಿದ್ಧತೆ ಸಿದ್ಧತೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಡ್ಯ</strong>: ಜಿಲ್ಲೆಯ ಶ್ರೀರಂಗಪಟ್ಟಣ ಮತ್ತು ಮಂಡ್ಯ ತಾಲ್ಲೂಕಿನ ಗಡಿಭಾಗದಲ್ಲಿ ಕಳೆದ ಮೂರು ದಿನಗಳಿಂದ ಸಂಚರಿಸುತ್ತಿರುವ ಕಾಡಾನೆಗಳು ಸದ್ಯಕ್ಕೆ ನಗರದಲ್ಲಿ ಕಾಣಿಸಿಕೊಂಡು ಜನರಲ್ಲಿ ಭಯ ಉಂಟು ಮಾಡಿವೆ.</p>.<p>ಶ್ರೀರಂಗಪಟ್ಟಣ ತಾಲ್ಲೂಕಿನ ಕೆಲವು ಗ್ರಾಮಗಳಲ್ಲಿ ಹಾಗೂ ಮಂಡ್ಯ ತಾಲ್ಲೂಕಿನ ಮೊತ್ತಹಳ್ಳಿ ಗ್ರಾಮದಲ್ಲಿ ಕಾಣಿಸಿಕೊಂಡಿದ್ದು, ಸೋಮವಾರ ರಾತ್ರಿಯಿಂದ ನಗರದ ಕಲ್ಲಹಳ್ಳಿಯಲ್ಲಿ ಕಾಣಿಸಿಕೊಂಡಿದ್ದು, ಸದ್ವಿದ್ಯಾ ಶಾಲೆ ಬಳಿಯ ಕಬ್ಬಿನ ಗದ್ದೆಯಲ್ಲಿ ಬೀಡು ಬಿಟ್ಟಿವೆ.</p>.<p>ನಗರದ ಹೊರವಲಯದ ಮಳವಳ್ಳಿ ಸಂಪರ್ಕಿಸುವ ಹನಿಯಂಬಾಡಿ ರಸ್ತೆಯ ಸುತ್ತಮುತ್ತವಿರುವ ಗದ್ದೆ ಬಯಲಿನಲ್ಲಿ ಎರಡು ಆನೆಗಳು ತಿರುಗಾಡುತ್ತಿರುವ ದೃಶ್ಯ ಡ್ರೋಣ್ ಕ್ಯಾಮೆರಾದಲ್ಲಿ ಸೆರೆಯಾಗಿವೆ.</p>.<p>ಮೊದಲು ಕಲ್ಲಹಳ್ಳಿ ವಿವಿ ನಗರ ಭಾಗದಲ್ಲಿ ಕಾಣಿಸಿಕೊಂಡಿರುವ ಆನೆಗಳನ್ನು ನೋಡಿದ ನಾಯಿಗಳು ಬೊಗಳಿವೆ. ಸ್ಥಳೀಯರಿಗೂ ಕಾಣಿಸಿಕೊಂಡಿವೆ. ನಂತರ ನಗರದ ಹೊರವಲಯದ ಕಬ್ಬಿನ ಗದ್ದೆಯಲ್ಲಿರುವುದರಿಂದ ಅತ್ತ ಯಾರೂ ಸುಳಿಯದಂತೆ ಅರಣ್ಯ ಅಧಿಕಾರಿಗಳು ಎಚ್ಚರಿಕೆ ನೀಡಿ ಸ್ಥಳಲ್ಲಿಯೇ ಮೊಕ್ಕಾಂ ಹೂಡಿದ್ದಾರೆ.</p>.<p>ಮಂಗಳವಾರ ರಾತ್ರಿ ವೇಳೆಗೆ ಕಾರ್ಯಾಚರಣೆ ನಡೆಸುವ ಅಧಿಕಾರಿಗಳು ಮುತ್ತತ್ತಿ ಕಾಡಿಗಟ್ಟಲು ಸಿದ್ಧತೆ ಸಿದ್ಧತೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>