<p><strong>ಕೊಪ್ಪ</strong>: ‘ಗ್ರಾಮೀಣ ಭಾಗದ ಜನರು ಬಡವರ ಸಂಜೀವಿನಿಯಾದ ನರೇಗಾ ಯೋಜನೆಯನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕು’ ಎಂದು ನರೇಗಾ ತಾಲ್ಲೂಕು ಸಾಮಾಜಿಕ ಲೆಕ್ಕ ಪರಿಶೋಧನಾ ಸಂಯೋಜಕಿ ಸೀಮಾ ಹೇಳಿದರು.</p>.<p>ಸಮೀಪದ ನಿಲುವಾಗಿಲು ಗ್ರಾಮ ಪಂಚಾಯಿತಿ ಆವರಣದಲ್ಲಿ ಗುರುವಾರ ಆಯೋಜಿಸಿದ್ದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯ ಸಾಮಾಜಿಕ ಲೆಕ್ಕ ಪರಿಶೋಧನಾ ಗ್ರಾಮ ಸಭೆಯಲ್ಲಿ ಮಾತನಾಡಿದ ಅವರು, ನಿಲುವಾಗಿಲು ಗ್ರಾ.ಪಂ. ವ್ಯಾಪ್ತಿಯ 62 ಕುಟುಂಬಗಳು ನಿರುದ್ಯೋಗ ಭತ್ಯೆಗೆ ಅರ್ಹವಾಗಿವೆ’ ಎಂದು ಹೇಳಿದರು.</p>.<p>‘ನರೇಗಾ ಯೋಜನೆಯ ಸಾಮಗ್ರಿ ವೆಚ್ಚದ ₹ 52 ಸಾವಿರ ತೆರಿಗೆಯನ್ನು ಸರ್ಕಾರಕ್ಕೆ ಪಾವತಿಸಿಲ್ಲ. ನಿಯಮಾನುಸಾರವಾಗಿ ಕೆಲವೆಡೆ ಕೊಟ್ಟಿಗೆಗಳು ನಿರ್ಮಾಣವಾಗದಿದ್ದರೂ ಬಿಲ್ ಪಾವತಿಯಾಗಿದೆ. ಕೆಲವು ಕಾಮಗಾರಿಗಳ ಅನುಷ್ಠಾನದ ಕಡತಗಳನ್ನು ಒದಗಿಸಿಲ್ಲ’ ಎಂದರು.</p>.<p>ಕಾರ್ಯದರ್ಶಿ ನಾಗರಾಜು ಮಾತನಾಡಿ, ‘15 ದಿನದೊಳಗೆ ತೆರಿಗೆಯನ್ನು ಸರ್ಕಾರಕ್ಕೆ ಪಾವತಿಸುವ ವ್ಯವಸ್ಥೆ ಮಾಡಲಾಗುವುದು. ಮುಂದಿನ ದಿನಗಳಲ್ಲಿ ಪರಿಣಾಮಕಾರಿಯಾಗಿ ನರೇಗಾವನ್ನು ಲೋಪವಾಗದಂತೆ ಅನುಷ್ಠಾನಗೊಳಿಸಲಾಗುವುದು’ ಎಂದು ಹೇಳಿದರು.</p>.<p>ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಮಹದೇವ್ ಅಧ್ಯಕ್ಷತೆ ವಹಿಸಿದ್ದರು.</p>.<p>ನರೇಗಾ ಎಂಜಿನಿಯರ್ ಅಮೃತ್, ಸಾರ್ವಜನಿಕ ಮತ್ತು ಸಂಪರ್ಕ ವಿಭಾಗದ ಸಂಯೋಜಕಿ ಮೇಘನಾ, ತಾಲ್ಲೂಕು ಬಿಸಿಎಂ ಅಧಿಕಾರಿ ಎನ್. ಮಂಜುನಾಥ್ ನಾಯ್ಡು ಸೇರಿದಂತೆ ಇತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊಪ್ಪ</strong>: ‘ಗ್ರಾಮೀಣ ಭಾಗದ ಜನರು ಬಡವರ ಸಂಜೀವಿನಿಯಾದ ನರೇಗಾ ಯೋಜನೆಯನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕು’ ಎಂದು ನರೇಗಾ ತಾಲ್ಲೂಕು ಸಾಮಾಜಿಕ ಲೆಕ್ಕ ಪರಿಶೋಧನಾ ಸಂಯೋಜಕಿ ಸೀಮಾ ಹೇಳಿದರು.</p>.<p>ಸಮೀಪದ ನಿಲುವಾಗಿಲು ಗ್ರಾಮ ಪಂಚಾಯಿತಿ ಆವರಣದಲ್ಲಿ ಗುರುವಾರ ಆಯೋಜಿಸಿದ್ದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯ ಸಾಮಾಜಿಕ ಲೆಕ್ಕ ಪರಿಶೋಧನಾ ಗ್ರಾಮ ಸಭೆಯಲ್ಲಿ ಮಾತನಾಡಿದ ಅವರು, ನಿಲುವಾಗಿಲು ಗ್ರಾ.ಪಂ. ವ್ಯಾಪ್ತಿಯ 62 ಕುಟುಂಬಗಳು ನಿರುದ್ಯೋಗ ಭತ್ಯೆಗೆ ಅರ್ಹವಾಗಿವೆ’ ಎಂದು ಹೇಳಿದರು.</p>.<p>‘ನರೇಗಾ ಯೋಜನೆಯ ಸಾಮಗ್ರಿ ವೆಚ್ಚದ ₹ 52 ಸಾವಿರ ತೆರಿಗೆಯನ್ನು ಸರ್ಕಾರಕ್ಕೆ ಪಾವತಿಸಿಲ್ಲ. ನಿಯಮಾನುಸಾರವಾಗಿ ಕೆಲವೆಡೆ ಕೊಟ್ಟಿಗೆಗಳು ನಿರ್ಮಾಣವಾಗದಿದ್ದರೂ ಬಿಲ್ ಪಾವತಿಯಾಗಿದೆ. ಕೆಲವು ಕಾಮಗಾರಿಗಳ ಅನುಷ್ಠಾನದ ಕಡತಗಳನ್ನು ಒದಗಿಸಿಲ್ಲ’ ಎಂದರು.</p>.<p>ಕಾರ್ಯದರ್ಶಿ ನಾಗರಾಜು ಮಾತನಾಡಿ, ‘15 ದಿನದೊಳಗೆ ತೆರಿಗೆಯನ್ನು ಸರ್ಕಾರಕ್ಕೆ ಪಾವತಿಸುವ ವ್ಯವಸ್ಥೆ ಮಾಡಲಾಗುವುದು. ಮುಂದಿನ ದಿನಗಳಲ್ಲಿ ಪರಿಣಾಮಕಾರಿಯಾಗಿ ನರೇಗಾವನ್ನು ಲೋಪವಾಗದಂತೆ ಅನುಷ್ಠಾನಗೊಳಿಸಲಾಗುವುದು’ ಎಂದು ಹೇಳಿದರು.</p>.<p>ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಮಹದೇವ್ ಅಧ್ಯಕ್ಷತೆ ವಹಿಸಿದ್ದರು.</p>.<p>ನರೇಗಾ ಎಂಜಿನಿಯರ್ ಅಮೃತ್, ಸಾರ್ವಜನಿಕ ಮತ್ತು ಸಂಪರ್ಕ ವಿಭಾಗದ ಸಂಯೋಜಕಿ ಮೇಘನಾ, ತಾಲ್ಲೂಕು ಬಿಸಿಎಂ ಅಧಿಕಾರಿ ಎನ್. ಮಂಜುನಾಥ್ ನಾಯ್ಡು ಸೇರಿದಂತೆ ಇತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>