<p><strong>ಮಂಡ್ಯ:</strong> ‘ನಿವೇಶನ ರಹಿತರಿಗೆ ನಿವೇಶನ ಕೊಡಿಸುವುದು ಸರ್ಕಾರ, ಸ್ಥಳೀಯ ಗ್ರಾಮ ಪಂಚಾಯಿತಿ ಮತ್ತು ಶಾಸಕನ ಕರ್ತವ್ಯವಾಗಿದೆ’ ಎಂದು ಶಾಸಕ ಪಿ.ರವಿಕುಮಾರ್ ಹೇಳಿದರು.</p>.<p>ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ , ಹಲ್ಲೆಗೆರೆ ಗ್ರಾಮ ಪಂಚಾಯಿತಿ ಕಾರ್ಯಾಲಯದ ವತಿಯಿಂದ ಬಸರಾಳು ಹೋಬಳಿಯ ತಂಗಳಗೆರೆಯಲ್ಲಿ ಭಾನುವಾರ ನಡೆದ ರವಿ ಗೂಡು- ಪಿ. ರವಿಕುಮಾರ್ ಗೌಡ ಆಶ್ರಯ ಬಡಾವಣೆ ನಿರ್ಮಾಣ ಶಿಲಾನ್ಯಾಸ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.</p>.<p>ಅರ್ಹರಿಗೆ ನಿವೇಶನ ನೀಡಲು ಇಂದು ಶಿಲಾನ್ಯಾಸ ಮಾಡಲಾಗಿದೆ. ಸರ್ಕಾರಿ ಜಾಗ ಕೇವಲ ಒಬ್ಬರದಲ್ಲ ಅದು ಎಲ್ಲರ ಜಾಗ. ರೈತರು ತಮ್ಮ ಗದ್ದೆಗಳಲ್ಲಿ ರಸ್ತೆ 5-10 ಅಡಿ ಜಾಗ ಬಿಟ್ಟರೆ ಉತ್ತಮ ರಸ್ತೆ ಕಲ್ಪಿಸಬಹುದು. ಕೃಷಿ ಉತ್ಪನ್ನಗಳನ್ನು ಮಾರುಕಟ್ಟೆಗೆ ಸರಾಗವಾಗಿ ಸಾಗಣೆ ಮಾಡಬಹುದು ಎಂದು ತಿಳಿಸಿದರು.</p>.<p>120 ನಿವೇಶನಗಳನ್ನು ಈ ಜಾಗದಲ್ಲಿ ನೀಡಲಾಗುವುದು ಈಗಾಗಲೇ 80 ಹಕ್ಕುಪತ್ರಗಳನ್ನು ಸಿದ್ಧವಿವೆ. ಬಾಕಿ ಇರುವ ನಿವೇಶನಗಳಿಗೆ ಅಗತ್ಯ ದಾಖಲೆಗಳನ್ನು ನೀಡಿ ನಂತರ ನಾನೇ ನಿಮ್ಮ ಮನೆ ಬಾಗಿಲಿಗೆ ಬಂದು ಹಕ್ಕು ಪತ್ರಗಳನ್ನು ವಿತರಿಸುತ್ತೇನೆ ಎಂದು ಹೇಳಿದರು.</p>.<p>ಈ ಬಾರಿ ಬೂದನೂರು ಉತ್ಸವದಲ್ಲಿ 50 ಹಕ್ಕು ಪತ್ರಗಳನ್ನು ನೀಡಲು ಸಿದ್ಧತೆ ಮಾಡಲಾಗಿದೆ. ಹುಲಿವಾನದಲ್ಲಿ 8 ಎಕರೆ ಜಾಗವನ್ನು ಗುರುತಿಸಿ 550 ಮಂದಿಗೆ ನಿವೇಶನ ನೀಡಲು ಸಿದ್ಧತೆ ನಡೆಸಲಾಗಿದೆ. ಬಸರಾಳಲ್ಲಿ 2 ಎಕರೆ ಜಾಗ ಗುರುತಿಸಿದ್ದು, ಬಡವರಿಗೆ 3 ತಿಂಗಳೊಳಗಾಗಿ ನಿವೇಶನ ಹಂಚಿಕೆ ಮಾಡಲಾಗುವುದು ಎಂದು ತಿಳಿಸಿದರು.</p>.<p>ಮುಖಂಡರಾದ ಸಿ.ತ್ಯಾಗರಾಜು, ಚಿಕ್ಕಬಳ್ಳಿ ಕೃಷ್ಣ, ತಹಶೀಲ್ದಾರ್ ವಿಶ್ವನಾಥ್, ತಾಲ್ಲೂಕು ಪಂಚಾಯಿತಿ ಇಒ ಲೋಕೇಶ್ಮೂರ್ತಿ, ಸಿ.ಎಂ. ದ್ಯಾವಪ್ಪ, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪ್ರೇಮಮ್ಮ, ಉಪಾಧ್ಯಕ್ಷೆ ಭಾಗ್ಯಮ್ಮ, ಸದಸ್ಯರು, ಕಾಂಗ್ರೆಸ್ ಮುಖಂಡರು ಹಾಜರಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಡ್ಯ:</strong> ‘ನಿವೇಶನ ರಹಿತರಿಗೆ ನಿವೇಶನ ಕೊಡಿಸುವುದು ಸರ್ಕಾರ, ಸ್ಥಳೀಯ ಗ್ರಾಮ ಪಂಚಾಯಿತಿ ಮತ್ತು ಶಾಸಕನ ಕರ್ತವ್ಯವಾಗಿದೆ’ ಎಂದು ಶಾಸಕ ಪಿ.ರವಿಕುಮಾರ್ ಹೇಳಿದರು.</p>.<p>ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ , ಹಲ್ಲೆಗೆರೆ ಗ್ರಾಮ ಪಂಚಾಯಿತಿ ಕಾರ್ಯಾಲಯದ ವತಿಯಿಂದ ಬಸರಾಳು ಹೋಬಳಿಯ ತಂಗಳಗೆರೆಯಲ್ಲಿ ಭಾನುವಾರ ನಡೆದ ರವಿ ಗೂಡು- ಪಿ. ರವಿಕುಮಾರ್ ಗೌಡ ಆಶ್ರಯ ಬಡಾವಣೆ ನಿರ್ಮಾಣ ಶಿಲಾನ್ಯಾಸ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.</p>.<p>ಅರ್ಹರಿಗೆ ನಿವೇಶನ ನೀಡಲು ಇಂದು ಶಿಲಾನ್ಯಾಸ ಮಾಡಲಾಗಿದೆ. ಸರ್ಕಾರಿ ಜಾಗ ಕೇವಲ ಒಬ್ಬರದಲ್ಲ ಅದು ಎಲ್ಲರ ಜಾಗ. ರೈತರು ತಮ್ಮ ಗದ್ದೆಗಳಲ್ಲಿ ರಸ್ತೆ 5-10 ಅಡಿ ಜಾಗ ಬಿಟ್ಟರೆ ಉತ್ತಮ ರಸ್ತೆ ಕಲ್ಪಿಸಬಹುದು. ಕೃಷಿ ಉತ್ಪನ್ನಗಳನ್ನು ಮಾರುಕಟ್ಟೆಗೆ ಸರಾಗವಾಗಿ ಸಾಗಣೆ ಮಾಡಬಹುದು ಎಂದು ತಿಳಿಸಿದರು.</p>.<p>120 ನಿವೇಶನಗಳನ್ನು ಈ ಜಾಗದಲ್ಲಿ ನೀಡಲಾಗುವುದು ಈಗಾಗಲೇ 80 ಹಕ್ಕುಪತ್ರಗಳನ್ನು ಸಿದ್ಧವಿವೆ. ಬಾಕಿ ಇರುವ ನಿವೇಶನಗಳಿಗೆ ಅಗತ್ಯ ದಾಖಲೆಗಳನ್ನು ನೀಡಿ ನಂತರ ನಾನೇ ನಿಮ್ಮ ಮನೆ ಬಾಗಿಲಿಗೆ ಬಂದು ಹಕ್ಕು ಪತ್ರಗಳನ್ನು ವಿತರಿಸುತ್ತೇನೆ ಎಂದು ಹೇಳಿದರು.</p>.<p>ಈ ಬಾರಿ ಬೂದನೂರು ಉತ್ಸವದಲ್ಲಿ 50 ಹಕ್ಕು ಪತ್ರಗಳನ್ನು ನೀಡಲು ಸಿದ್ಧತೆ ಮಾಡಲಾಗಿದೆ. ಹುಲಿವಾನದಲ್ಲಿ 8 ಎಕರೆ ಜಾಗವನ್ನು ಗುರುತಿಸಿ 550 ಮಂದಿಗೆ ನಿವೇಶನ ನೀಡಲು ಸಿದ್ಧತೆ ನಡೆಸಲಾಗಿದೆ. ಬಸರಾಳಲ್ಲಿ 2 ಎಕರೆ ಜಾಗ ಗುರುತಿಸಿದ್ದು, ಬಡವರಿಗೆ 3 ತಿಂಗಳೊಳಗಾಗಿ ನಿವೇಶನ ಹಂಚಿಕೆ ಮಾಡಲಾಗುವುದು ಎಂದು ತಿಳಿಸಿದರು.</p>.<p>ಮುಖಂಡರಾದ ಸಿ.ತ್ಯಾಗರಾಜು, ಚಿಕ್ಕಬಳ್ಳಿ ಕೃಷ್ಣ, ತಹಶೀಲ್ದಾರ್ ವಿಶ್ವನಾಥ್, ತಾಲ್ಲೂಕು ಪಂಚಾಯಿತಿ ಇಒ ಲೋಕೇಶ್ಮೂರ್ತಿ, ಸಿ.ಎಂ. ದ್ಯಾವಪ್ಪ, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪ್ರೇಮಮ್ಮ, ಉಪಾಧ್ಯಕ್ಷೆ ಭಾಗ್ಯಮ್ಮ, ಸದಸ್ಯರು, ಕಾಂಗ್ರೆಸ್ ಮುಖಂಡರು ಹಾಜರಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>