<p><strong>ಮಳವಳ್ಳಿ:</strong> ಆಡಳಿತ ವಿಚಾರ, ಯಾವ ಕಾನೂನು ಇರಬೇಕು, ಹೇಗೆ ಬದುಕಬೇಕು, ಬದುಕಿಗೆ ಸಂವಿಧಾನ ಹೇಗೆ ಇರಬೇಕು ಎಂಬುವುದನ್ನು ಅರ್ಥಪೂರ್ಣವಾಗಿ ಕೊಟ್ಟ ಗೌರವ ಡಾ.ಬಿ.ಆರ್.ಅಂಬೇಡ್ಕರ್ ಅವರಿಗೆ ಸಲ್ಲುತ್ತದೆ ಎಂದು ಶಾಸಕ ಪಿ.ಎಂ.ನರೇಂದ್ರಸ್ವಾಮಿ ತಿಳಿಸಿದರು.</p>.<p>ಪಟ್ಟಣದ ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಬುಧವಾರ ತಾಲ್ಲೂಕು ಆಡಳಿತದ ಆಯೋಜಿಸಿದ ಸಂವಿಧಾನ ದಿನಾಚರಣೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.</p>.<p>ಡಾ.ಬಿ.ಆರ್.ಅಂಬೇಡ್ಕರ್ ಅವರು ಸಂವಿಧಾನದಲ್ಲಿ ಜಾತಿ, ಧರ್ಮ ಮತ್ತು ಲಿಂಗಭೇದವಿಲ್ಲದೇ ಎಲ್ಲರಿಗೂ ಒಂದೇ ಮತ ಎಂಬುವುದನ್ನು ಕೊಟ್ಟು ಜನರಿಂದಲೇ ಜನಪ್ರತಿನಿಧಿಯನ್ನು ಆಯ್ಕೆ ಮಾಡುವ ವಿಧಾನವನ್ನು ಜಾರಿ ಮಾಡಿ ಸಮಾನತೆ ಕಲ್ಪಿಸಿದ್ದಾರೆ ಎಂದು ಹೇಳಿದರು.<br /> <br /> ಸಾಹಿತಿ ಪ್ರೊ.ರಂಗಸ್ವಾಮಿ ಮಾತನಾಡಿ, ‘ಸಂವಿಧಾನದಲ್ಲಿರುವ ವಿಷಯಗಳನ್ನು ಪ್ರತಿಯೊಬ್ಬರು ಓದಿ ಅರ್ಥಮಾಡಿಕೊಳ್ಳಬೇಕಿದೆ. ಹುಟ್ಟಿನಿಂದ ಸಾಯುವವರೆಗೂ ಸಂವಿಧಾನದಲ್ಲಿಯೇ ಬದುಕಬೇಕಾಗಿರುವುದರಿಂದ ಸಂವಿಧಾನದ ಅರಿವು ಮುಖ್ಯವಾಗಿದೆ’ ಎಂದು ಹೇಳಿದರು.</p>.<p>ತಹಶೀಲ್ದಾರ್ ಎಸ್.ವಿ.ಲೊಕೇಶ್, ತಾ.ಪಂ.ಇಒ ಎಚ್.ಜಿ.ಶ್ರೀನಿವಾಸ್, ಪುರಸಭೆ ಮುಖ್ಯಾಧಿಕಾರಿ ಎಂ.ಸಿ.ನಾಗರತ್ನ, ಕ್ಷೇತ್ರ ಶಿಕ್ಷಣಾಧಿಕಾರಿ ವಿ.ಇ.ಉಮಾ, ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯ ತಾಲ್ಲೂಕು ಅಧ್ಯಕ್ಷ ಪಿ.ಮಾದೇಶ್, ಟಿಎಪಿಸಿಎಂಎಸ್ ಅಧ್ಯಕ್ಷ ಎಂ.ಲಿಂಗರಾಜು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ದೊಡ್ಡಯ್ಯ, ಮುಖಂಡರಾದ ಪುಟ್ಟಸ್ವಾಮಿ, ಸಂತೋಷ್, ಕಸಾಪ ಎಲ್.ಚೇತನ್ಕುಮಾರ್ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಳವಳ್ಳಿ:</strong> ಆಡಳಿತ ವಿಚಾರ, ಯಾವ ಕಾನೂನು ಇರಬೇಕು, ಹೇಗೆ ಬದುಕಬೇಕು, ಬದುಕಿಗೆ ಸಂವಿಧಾನ ಹೇಗೆ ಇರಬೇಕು ಎಂಬುವುದನ್ನು ಅರ್ಥಪೂರ್ಣವಾಗಿ ಕೊಟ್ಟ ಗೌರವ ಡಾ.ಬಿ.ಆರ್.ಅಂಬೇಡ್ಕರ್ ಅವರಿಗೆ ಸಲ್ಲುತ್ತದೆ ಎಂದು ಶಾಸಕ ಪಿ.ಎಂ.ನರೇಂದ್ರಸ್ವಾಮಿ ತಿಳಿಸಿದರು.</p>.<p>ಪಟ್ಟಣದ ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಬುಧವಾರ ತಾಲ್ಲೂಕು ಆಡಳಿತದ ಆಯೋಜಿಸಿದ ಸಂವಿಧಾನ ದಿನಾಚರಣೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.</p>.<p>ಡಾ.ಬಿ.ಆರ್.ಅಂಬೇಡ್ಕರ್ ಅವರು ಸಂವಿಧಾನದಲ್ಲಿ ಜಾತಿ, ಧರ್ಮ ಮತ್ತು ಲಿಂಗಭೇದವಿಲ್ಲದೇ ಎಲ್ಲರಿಗೂ ಒಂದೇ ಮತ ಎಂಬುವುದನ್ನು ಕೊಟ್ಟು ಜನರಿಂದಲೇ ಜನಪ್ರತಿನಿಧಿಯನ್ನು ಆಯ್ಕೆ ಮಾಡುವ ವಿಧಾನವನ್ನು ಜಾರಿ ಮಾಡಿ ಸಮಾನತೆ ಕಲ್ಪಿಸಿದ್ದಾರೆ ಎಂದು ಹೇಳಿದರು.<br /> <br /> ಸಾಹಿತಿ ಪ್ರೊ.ರಂಗಸ್ವಾಮಿ ಮಾತನಾಡಿ, ‘ಸಂವಿಧಾನದಲ್ಲಿರುವ ವಿಷಯಗಳನ್ನು ಪ್ರತಿಯೊಬ್ಬರು ಓದಿ ಅರ್ಥಮಾಡಿಕೊಳ್ಳಬೇಕಿದೆ. ಹುಟ್ಟಿನಿಂದ ಸಾಯುವವರೆಗೂ ಸಂವಿಧಾನದಲ್ಲಿಯೇ ಬದುಕಬೇಕಾಗಿರುವುದರಿಂದ ಸಂವಿಧಾನದ ಅರಿವು ಮುಖ್ಯವಾಗಿದೆ’ ಎಂದು ಹೇಳಿದರು.</p>.<p>ತಹಶೀಲ್ದಾರ್ ಎಸ್.ವಿ.ಲೊಕೇಶ್, ತಾ.ಪಂ.ಇಒ ಎಚ್.ಜಿ.ಶ್ರೀನಿವಾಸ್, ಪುರಸಭೆ ಮುಖ್ಯಾಧಿಕಾರಿ ಎಂ.ಸಿ.ನಾಗರತ್ನ, ಕ್ಷೇತ್ರ ಶಿಕ್ಷಣಾಧಿಕಾರಿ ವಿ.ಇ.ಉಮಾ, ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯ ತಾಲ್ಲೂಕು ಅಧ್ಯಕ್ಷ ಪಿ.ಮಾದೇಶ್, ಟಿಎಪಿಸಿಎಂಎಸ್ ಅಧ್ಯಕ್ಷ ಎಂ.ಲಿಂಗರಾಜು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ದೊಡ್ಡಯ್ಯ, ಮುಖಂಡರಾದ ಪುಟ್ಟಸ್ವಾಮಿ, ಸಂತೋಷ್, ಕಸಾಪ ಎಲ್.ಚೇತನ್ಕುಮಾರ್ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>