<p><strong>ಮಂಡ್ಯ:</strong> ಸಿಎಲ್–7 ಸನ್ನದು ಮಂಜೂರಾತಿಗಾಗಿ ಅರ್ಜಿದಾರರಿಗೆ ₹60 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ ಜಿಲ್ಲೆಯ ಅಬಕಾರಿ ಉಪ ಆಯುಕ್ತ ಆರ್.ನಾಗಶಯನ ಅವರನ್ನು ಅಮಾನತುಗೊಳಿಸಿ ಸರ್ಕಾರ ಆದೇಶಿಸಿದೆ. </p><p>ಭ್ರಷ್ಟಾಚಾರ ಆರೋಪದ ಮೇರೆಗೆ ಅಬಕಾರಿ ಸಚಿವರ ರಾಜೀನಾಮೆಗೆ ವಿರೋಧ ಪಕ್ಷದ ಮುಖಂಡರು ಒತ್ತಾಯಿಸುತ್ತಿರುವ ಸಂದರ್ಭದಲ್ಲೇ ಅಬಕಾರಿ ಉಪ ಆಯುಕ್ತರ ಅಮಾನತು ಆದೇಶ ವ್ಯಾಪಕ ಚರ್ಚೆಗೆ ಗ್ರಾಸವಾಗಿದೆ. </p><p>2025ರ ಆಗಸ್ಟ್ ತಿಂಗಳಲ್ಲಿ ಸುಂದರ್ ಎಂಬುವವರಿಗೆ ಲಂಚಕ್ಕೆ ಬೇಡಿಕೆ ಇಟ್ಟಿದ್ದ ನಾಗಶಯನ ಅವರ ಧ್ವನಿಯೆಂದು ಹೇಳಲಾದ ಆಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿತ್ತು. ಶಿಸ್ತುಕ್ರಮ ಜರುಗಿಸುವ ಸಂಬಂಧ ಅಬಕಾರಿ ಆಯುಕ್ತರ ಕಚೇರಿಯಿಂದ ಕಾರಣ ಕೇಳಿ ನೋಟಿಸ್ ನೀಡಲಾಗಿತ್ತು. </p><p>ಆರೋಪಿತ ಅಧಿಕಾರಿ ನೀಡಿದ ಸಮಜಾಯಿಷಿ ಪರಿಶೀಲಿಸಲಾಗಿ, ಲಂಚಕ್ಕೆ ಬೇಡಿಕೆ ಇಟ್ಟಿರುವ ಆರೋಪವು ಮೇಲ್ನೋಟಕ್ಕೆ ಕಂಡುಬಂದಿರುವುದರಿಂದ ಅಮಾನತುಗೊಳಿಸಲಾಗಿದೆ ಎಂದು ಆದೇಶ ಪತ್ರದಲ್ಲಿ ತಿಳಿಸಲಾಗಿದೆ. </p><p>ಅಮಾನತ್ತಿನ ಅವಧಿಯಲ್ಲಿ ನಾಗಶಯನ ಅವರನ್ನು ಬೆಳಗಾವಿ ದಕ್ಷಿಣ, ಬೆಳಗಾವಿ ಜಿಲ್ಲೆಗೆ ವರ್ಗಾಯಿಸಿ ಆದೇಶಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಡ್ಯ:</strong> ಸಿಎಲ್–7 ಸನ್ನದು ಮಂಜೂರಾತಿಗಾಗಿ ಅರ್ಜಿದಾರರಿಗೆ ₹60 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ ಜಿಲ್ಲೆಯ ಅಬಕಾರಿ ಉಪ ಆಯುಕ್ತ ಆರ್.ನಾಗಶಯನ ಅವರನ್ನು ಅಮಾನತುಗೊಳಿಸಿ ಸರ್ಕಾರ ಆದೇಶಿಸಿದೆ. </p><p>ಭ್ರಷ್ಟಾಚಾರ ಆರೋಪದ ಮೇರೆಗೆ ಅಬಕಾರಿ ಸಚಿವರ ರಾಜೀನಾಮೆಗೆ ವಿರೋಧ ಪಕ್ಷದ ಮುಖಂಡರು ಒತ್ತಾಯಿಸುತ್ತಿರುವ ಸಂದರ್ಭದಲ್ಲೇ ಅಬಕಾರಿ ಉಪ ಆಯುಕ್ತರ ಅಮಾನತು ಆದೇಶ ವ್ಯಾಪಕ ಚರ್ಚೆಗೆ ಗ್ರಾಸವಾಗಿದೆ. </p><p>2025ರ ಆಗಸ್ಟ್ ತಿಂಗಳಲ್ಲಿ ಸುಂದರ್ ಎಂಬುವವರಿಗೆ ಲಂಚಕ್ಕೆ ಬೇಡಿಕೆ ಇಟ್ಟಿದ್ದ ನಾಗಶಯನ ಅವರ ಧ್ವನಿಯೆಂದು ಹೇಳಲಾದ ಆಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿತ್ತು. ಶಿಸ್ತುಕ್ರಮ ಜರುಗಿಸುವ ಸಂಬಂಧ ಅಬಕಾರಿ ಆಯುಕ್ತರ ಕಚೇರಿಯಿಂದ ಕಾರಣ ಕೇಳಿ ನೋಟಿಸ್ ನೀಡಲಾಗಿತ್ತು. </p><p>ಆರೋಪಿತ ಅಧಿಕಾರಿ ನೀಡಿದ ಸಮಜಾಯಿಷಿ ಪರಿಶೀಲಿಸಲಾಗಿ, ಲಂಚಕ್ಕೆ ಬೇಡಿಕೆ ಇಟ್ಟಿರುವ ಆರೋಪವು ಮೇಲ್ನೋಟಕ್ಕೆ ಕಂಡುಬಂದಿರುವುದರಿಂದ ಅಮಾನತುಗೊಳಿಸಲಾಗಿದೆ ಎಂದು ಆದೇಶ ಪತ್ರದಲ್ಲಿ ತಿಳಿಸಲಾಗಿದೆ. </p><p>ಅಮಾನತ್ತಿನ ಅವಧಿಯಲ್ಲಿ ನಾಗಶಯನ ಅವರನ್ನು ಬೆಳಗಾವಿ ದಕ್ಷಿಣ, ಬೆಳಗಾವಿ ಜಿಲ್ಲೆಗೆ ವರ್ಗಾಯಿಸಿ ಆದೇಶಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>