ಗಂಜಾಂ ಪಕ್ಕದಲ್ಲಿ ಹಾದು ಹೋಗುತ್ತಿರುವ ರಾಷ್ಟ್ರೀಯ ಹೆದ್ದಾರಿ– 275 ನಿರ್ಮಾಣ ಕಾಮಗಾರಿ ನಡೆಸುವ ಗುತ್ತಿಗೆ ಕಂಪನಿ ಸಿಬ್ಬಂದಿ, ಸ್ಥಳೀಯರಿಗೆ ಮಾಹಿತಿ ನೀಡದೆ ಕಲ್ಲು ಬಂಡೆಯನ್ನು ಸ್ಫೋಟಿಸಿದ್ದಾರೆ. ಗಂಜಾಂ ಮಾತ್ರವಲ್ಲದೆ ಶ್ರೀರಂಗಪಟ್ಟಣ, ಬಾಬುರಾಯನಕೊಪ್ಪಲು, ಶ್ರೀನಿವಾಸ ಅಗ್ರಹಾರ ಗ್ರಾಮಗಳ ಜನರಿಗೂ ಸದ್ದು ಕೇಳಿದ್ದು, ಜನರು ಭಯಭೀತರಾಗಿದ್ದಾರೆ.