ಕಳೆದ ವರ್ಷ ಬೇಸಿಗೆಯಲ್ಲಿ ಜಲಾಶಯದಲ್ಲಿ 114 ಅಡಿಗಳಷ್ಟು ನೀರಿತ್ತು. ನಿಂತಿರುವ ಬೆಳೆ ಉಳಿಸಲು ಹಾಗೂ ಜನ, ಜಾನುವಾರುಗಳಿಗೆ ಕುಡಿಯುವ ಉದ್ದೇಶಕ್ಕೆ ನೀರು ಹರಿಸಲಾಗಿತ್ತು. ಸೋರಿಕೆ ನೀರಿನಿಂದಲೇ ಸಾಕಷ್ಟು ರೈತರು ಭತ್ತ, ರಾಗಿ ಬೆಳೆದುಕೊಂಡಿದ್ದರು. ಕಳೆದ ವರ್ಷಕ್ಕಿಂತ ಈ ಬಾರಿ 8 ಅಡಿ ಹೆಚ್ಚು ನೀರಿನ ಲಭ್ಯತೆ ಇದೆ. ನಾಲೆಗಳಿಗೆಕಟ್ಟು ಪದ್ಧತಿಯಲ್ಲಿ ನೀರು ಹರಿಸಬೇಕು. ಆದಷ್ಟು ಶೀಘ್ರ ನೀರಾವರಿ ಸಲಹಾ ಸಮಿತಿ ಸಭೆ ನಡೆಸಿ ದಿನಾಂಕ ಪ್ರಕಟಿಸಬೇಕು ಎಂದು ರೈತ ಸಂಘದ ತಾಲ್ಲೂಕು ಘಟಕದ ಗೌರವಾಧ್ಯಕ್ಷ ಬಿ.ಎಸ್. ರಮೇಶ್, ಜೆಡಿಎಸ್ ರೈತ ದಳದ ಅಧ್ಯಕ್ಷ ಡಿ.ಎಂ.ರವಿ ಆಗ್ರಹಿಸಿದ್ದಾರೆ.