<p><strong>ಮಂಡ್ಯ:</strong> ಏಕರೂಪ ಶಿಕ್ಷಣ ಜಾರಿಗೆ ಆಗ್ರಹಿಸಿ ಜಿಲ್ಲೆಯಾದ್ಯಂತ ಏ.11ರಿಂದ ಸುಮಾರು 60 ದಿನ 1,295 ಕಿ.ಮೀ. ಪಾದಯಾತ್ರೆ ಹಮ್ಮಿಕೊಂಡಿದ್ದೇವೆ ಎಂದು ರೈತ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಇಂಡುವಾಳು ಚಂದ್ರಶೇಖರ್ ಹೇಳಿದರು.</p><p>ಸರ್ಕಾರಿ ಶಾಲೆಯಲ್ಲಿ ಗುಣಮಟ್ಟದ ಶಿಕ್ಷಣ ಮತ್ತು ಮೂಲಸೌಕರ್ಯಕ್ಕಾಗಿ ರಾಜ್ಯ ರೈತ ಸಂಘ, ರಾಜ್ಯ ಎಸ್ಡಿಎಂಸಿ ಸಂಘದ ನೇತೃತ್ವದಲ್ಲಿ ಹಮ್ಮಿಕೊಂಡಿರುವ ಪಾದಯಾತ್ರೆಗೆ ವಿವಿಧ ಕನ್ನಡಪರ ಸಂಘಟನೆಗಳು ಬೆಂಬಲ ನೀಡುತ್ತಿವೆ ಎಂದು ಪತ್ರಿಕಾಗೋಷ್ಠಿಯಲ್ಲಿ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು.</p><p>‘ಸಾವಿರ ಪೈಸೆ ಕೊಟ್ಟು ಸಾವಿರ ಹೆಜ್ಜೆ ಹಾಕಿ’ ಘೋಷವಾಕ್ಯದೊಂದಿಗೆ ಪಾದಯಾತ್ರೆ ನಡೆಸಲಾಗುತ್ತಿದೆ. ಜಿಲ್ಲೆಯ 233 ಗ್ರಾ.ಪಂ. ಮಟ್ಟದಲ್ಲಿ ಪಾದಯಾತ್ರೆ ಮಾಡಲಾಗುವುದು. ಒಟ್ಟಾರೆ 1000ಕ್ಕೂ ಸರ್ಕಾರಿ ಶಾಲೆಗಳನ್ನು ಭೇಟಿ ಮಾಡಿ, ಜನಜಾಗೃತಿ ಮೂಡಿಸಿ, ಶಿಕ್ಷಣ ಇಲಾಖೆಯನ್ನು ಬಡಿದೇಳಿಸಲಾಗುವುದು ಎಂದು ವಿವರಿಸಿದರು.</p><p>‘ಲಕ್ಷಾಂತರ ರೂಪಾಯಿ ಸಂಬಳ ತೆಗೆದುಕೊಂಡು ತಮ್ಮ ಮಕ್ಕಳನ್ನು ಖಾಸಗಿ ಶಾಲೆಗೆ ಸೇರಿಸಿ, ಪಾಠಕ್ಕಿಂತ ರಾಜಕೀಯವನ್ನೇ ಹೆಚ್ಚಾಗಿ ಮಾಡುತ್ತಿರುವ ಶಿಕ್ಷಕರ ಸಂಘದ ಪದಾಧಿಕಾರಿಗಳನ್ನು ಆಯಾಯ ಶಾಲೆಯ ಗೇಟಿಗೆ ಕಟ್ಟುವಂತೆ ಅಲ್ಲಿನ ಎಸ್ಡಿಎಂಸಿ ಸಂಘಕ್ಕೆ ಸೂಚನೆ ನೀಡಲಾಗುವುದು’ ಎಂದು ಆಕ್ರೋಶ ವ್ಯಕ್ತಪಡಿಸಿದರು.</p><p>ಸರ್ಕಾರಿ ಶಾಲೆಗಳಲ್ಲಿಯೇ ಗುಣಮಟ್ಟದ ಶಿಕ್ಷಣ ನೀಡುವಂತೆ ಒತ್ತಾಯಿಸಲು ಮುಂದಾಗಬೇಕು. ಜಿಲ್ಲೆಯ ವಿದ್ಯಾರ್ಥಿಗಳು, ಕೆಲಸ ಹುಡುಕುವ ಪದವೀಧರ ಯುವ ಮಿತ್ರರು, ನಿವೃತ್ತ ನೌಕರರು ಮನೆಯಲ್ಲಿ ಕೂರುವ ಬದಲು ಐತಿಹಾಸಿಕ ಪಾದಯಾತ್ರೆಯಲ್ಲಿ ಭಾಗವಹಿಸಿ ಎಂದು ಮನವಿ ಮಾಡಿದರು.</p><p>ಸಂಘದ ಜಿಲ್ಲಾ ಘಟಕದ ಉಪಾಧ್ಯಕ್ಷ ಶಿವಳ್ಳಿ ಚಂದ್ರಶೇಖರ್, ಸಂಚಾಲಕ ಸಂತೋಷ್ಗೌಡ, ತಾಲ್ಲೂಕು ಘಟಕದ ಅಧ್ಯಕ್ಷ ಪುಟ್ಟಸ್ವಾಮಿಗೌಡ, ಮುಖಂಡರಾದ ತೇಜು ಕೋಡಿಶೆಟ್ಟಿಪುರ, ಧನುಷ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಡ್ಯ:</strong> ಏಕರೂಪ ಶಿಕ್ಷಣ ಜಾರಿಗೆ ಆಗ್ರಹಿಸಿ ಜಿಲ್ಲೆಯಾದ್ಯಂತ ಏ.11ರಿಂದ ಸುಮಾರು 60 ದಿನ 1,295 ಕಿ.ಮೀ. ಪಾದಯಾತ್ರೆ ಹಮ್ಮಿಕೊಂಡಿದ್ದೇವೆ ಎಂದು ರೈತ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಇಂಡುವಾಳು ಚಂದ್ರಶೇಖರ್ ಹೇಳಿದರು.</p><p>ಸರ್ಕಾರಿ ಶಾಲೆಯಲ್ಲಿ ಗುಣಮಟ್ಟದ ಶಿಕ್ಷಣ ಮತ್ತು ಮೂಲಸೌಕರ್ಯಕ್ಕಾಗಿ ರಾಜ್ಯ ರೈತ ಸಂಘ, ರಾಜ್ಯ ಎಸ್ಡಿಎಂಸಿ ಸಂಘದ ನೇತೃತ್ವದಲ್ಲಿ ಹಮ್ಮಿಕೊಂಡಿರುವ ಪಾದಯಾತ್ರೆಗೆ ವಿವಿಧ ಕನ್ನಡಪರ ಸಂಘಟನೆಗಳು ಬೆಂಬಲ ನೀಡುತ್ತಿವೆ ಎಂದು ಪತ್ರಿಕಾಗೋಷ್ಠಿಯಲ್ಲಿ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು.</p><p>‘ಸಾವಿರ ಪೈಸೆ ಕೊಟ್ಟು ಸಾವಿರ ಹೆಜ್ಜೆ ಹಾಕಿ’ ಘೋಷವಾಕ್ಯದೊಂದಿಗೆ ಪಾದಯಾತ್ರೆ ನಡೆಸಲಾಗುತ್ತಿದೆ. ಜಿಲ್ಲೆಯ 233 ಗ್ರಾ.ಪಂ. ಮಟ್ಟದಲ್ಲಿ ಪಾದಯಾತ್ರೆ ಮಾಡಲಾಗುವುದು. ಒಟ್ಟಾರೆ 1000ಕ್ಕೂ ಸರ್ಕಾರಿ ಶಾಲೆಗಳನ್ನು ಭೇಟಿ ಮಾಡಿ, ಜನಜಾಗೃತಿ ಮೂಡಿಸಿ, ಶಿಕ್ಷಣ ಇಲಾಖೆಯನ್ನು ಬಡಿದೇಳಿಸಲಾಗುವುದು ಎಂದು ವಿವರಿಸಿದರು.</p><p>‘ಲಕ್ಷಾಂತರ ರೂಪಾಯಿ ಸಂಬಳ ತೆಗೆದುಕೊಂಡು ತಮ್ಮ ಮಕ್ಕಳನ್ನು ಖಾಸಗಿ ಶಾಲೆಗೆ ಸೇರಿಸಿ, ಪಾಠಕ್ಕಿಂತ ರಾಜಕೀಯವನ್ನೇ ಹೆಚ್ಚಾಗಿ ಮಾಡುತ್ತಿರುವ ಶಿಕ್ಷಕರ ಸಂಘದ ಪದಾಧಿಕಾರಿಗಳನ್ನು ಆಯಾಯ ಶಾಲೆಯ ಗೇಟಿಗೆ ಕಟ್ಟುವಂತೆ ಅಲ್ಲಿನ ಎಸ್ಡಿಎಂಸಿ ಸಂಘಕ್ಕೆ ಸೂಚನೆ ನೀಡಲಾಗುವುದು’ ಎಂದು ಆಕ್ರೋಶ ವ್ಯಕ್ತಪಡಿಸಿದರು.</p><p>ಸರ್ಕಾರಿ ಶಾಲೆಗಳಲ್ಲಿಯೇ ಗುಣಮಟ್ಟದ ಶಿಕ್ಷಣ ನೀಡುವಂತೆ ಒತ್ತಾಯಿಸಲು ಮುಂದಾಗಬೇಕು. ಜಿಲ್ಲೆಯ ವಿದ್ಯಾರ್ಥಿಗಳು, ಕೆಲಸ ಹುಡುಕುವ ಪದವೀಧರ ಯುವ ಮಿತ್ರರು, ನಿವೃತ್ತ ನೌಕರರು ಮನೆಯಲ್ಲಿ ಕೂರುವ ಬದಲು ಐತಿಹಾಸಿಕ ಪಾದಯಾತ್ರೆಯಲ್ಲಿ ಭಾಗವಹಿಸಿ ಎಂದು ಮನವಿ ಮಾಡಿದರು.</p><p>ಸಂಘದ ಜಿಲ್ಲಾ ಘಟಕದ ಉಪಾಧ್ಯಕ್ಷ ಶಿವಳ್ಳಿ ಚಂದ್ರಶೇಖರ್, ಸಂಚಾಲಕ ಸಂತೋಷ್ಗೌಡ, ತಾಲ್ಲೂಕು ಘಟಕದ ಅಧ್ಯಕ್ಷ ಪುಟ್ಟಸ್ವಾಮಿಗೌಡ, ಮುಖಂಡರಾದ ತೇಜು ಕೋಡಿಶೆಟ್ಟಿಪುರ, ಧನುಷ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>