ರಾಯ್ ಪ್ರಕರಣ ವರದಿಯಾಗುತ್ತಿದ್ದಂತೆ, ಇಂಡಿಗೊ ವಿಮಾನದಲ್ಲಿ ಸೊಳ್ಳೆ ಕಾಟದ ಕುರಿತು ಪ್ರಯಾಣಿಕರು ಸಾಕಷ್ಟು ಟ್ವೀಟ್ ಮಾಡಿದ್ದರು. ಸಂಸ್ಥೆ ಪ್ರಯಾಣಿಕರ ಕ್ಷಮೆ ಕೋರಿತ್ತು. ಪ್ರಯಾಣದ ವೇಳೆ ಕ್ರಿಮಿನಾಶಕಗಳನ್ನು ಸಿಂಪಡಿಸುವುದಕ್ಕೆ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ (ಎನ್ಜಿಟಿ) ನಿಷೇಧ ಹೇರಿದೆ. ಈ ನಿಯಮವನ್ನು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಲಾಗಿದೆ ಎಂದೂ ಸಂಸ್ಥೆ ಹೇಳಿದೆ.