‘ಕಾವೇರಿ ನಿರಾವರಿ ನಿಗಮ, ಗಣಿ ಮತ್ತು ಭೂವಿಜ್ಞಾನ ಇಲಾಖೆ, ಅರಣ್ಯ ಇಲಾಖೆ, ಕಂದಾಯ, ಕಾರ್ಮಿಕ, ಸಾರಿಗೆ ಇಲಾಖೆಗಳ ಸಭೆ ಕರೆಯುವಂತೆ ಜಿಲ್ಲಾಧಿಕಾರಿಗೆ ಮನವಿ ಮಾಡಲಾಗಿತ್ತು. ಮುಖ್ಯಮಂತ್ರಿ ಹಾಗೂ ಸಚಿವರಿಗೂ ಮನವಿ ಮಾಡಲಾಗಿತ್ತು. ಸರ್ಕಾರ ಹಾಗೂ ಜಿಲ್ಲಾಡಳಿತದಿಂದ ಯಾವುದೇ ಸ್ಪಂದನೆ ಬಾರದ ಕಾರಣ ಬಂದ್ ನಡೆಸಲು ನಿರ್ಧರಿಸಲಾಗಿದೆ’ ಎಂದರು.