<p><strong>ಮಂಡ್ಯ:</strong> ಕಾವೇರಿ ನೀರು ನಿಯಂತ್ರಣ ಪ್ರಾಧಿಕಾರವು ಮತ್ತೆ ತಮಿಳುನಾಡಿಗೆ 998 ಕ್ಯುಸೆಕ್ ನೀರು ಹರಿಸಬೇಕು ಎಂದು ಆದೇಶ ನೀಡುವ ಮೂಲಕ ಜಿಲ್ಲೆಯ ರೈತರಿಗೆ, ಸಾರ್ವಜನಿಕರಿಗೆ ಗಾಯದ ಮೇಲೆ ಬರೆ ಎಳೆದಿದೆ ಎಂದು ಜಿಲ್ಲಾ ರೈತ ಹಿತರಕ್ಷಣಾ ಸಮಿತಿ ಸದಸ್ಯರು ಅಸಮಾಧಾನ ವ್ಯಕ್ತಪಡಿಸಿದರು.</p>.<p>ನಗರದ ಸರ್.ಎಂ.ವಿಶ್ವೇಶ್ವರಯ್ಯ ಪ್ರತಿಮೆ ಎದುರು ನಡೆಯುತ್ತಿರುವ 137ನೇ ದಿನದ ಧರಣಿಯಲ್ಲಿ ಶುಕ್ರವಾರ ಪಾಧಿಕಾರದ ಆದೇಶದ ವಿರುದ್ಧ ಆಕ್ರೋಶ ವ್ಯಕ್ತವಾಯಿತು.</p>.<p>ಪ್ರಾಧಿಕಾರದ ರಾಜ್ಯದ ವಿರುದ್ಧ ನಿರಂತರವಾಗಿ ಆದೇಶ ಮಾಡುತ್ತಿದೆ. ವಾಸ್ತವವಾಗಿ ಅಣೆಕಟ್ಟೆಯಲ್ಲಿ ನೀರಿಲ್ಲ, ಮಳೆಯಿಲ್ಲ, ಬೆಳೆಯಿಲ್ಲ ಎಂಬುದನ್ನೇ ಪ್ರಾಧಿಕಾರ ಮರೆತಿದೆ. ನಮ್ಮ ರಾಜ್ಯದ ಕಾನೂನು ತಂಡ, ರಾಜ್ಯ ಸರ್ಕಾರ ಈ ನಿಟ್ಟಿನಲ್ಲಿ ವೈಫಲ್ಯ ಕಾಣುತ್ತಿದೆ. ನೀರು ನಿರ್ವಹಣಾ ಸಮಿತಿ ಹಾಗೂ ಕಾವೇರಿ ನದಿ ನೀರಿನ ಪ್ರಾಧಿಕಾರ ಎರಡೂ ಸತ್ತು ಹೋಗಿವೆ ಎಂದು ಆರೋಪಿಸಿದರು.</p>.<p>ಕಳೆದ ವರ್ಷ ಚುನಾವಣೆಗೂ ಮುನ್ನ ಸಾವಿರಾರು ಜನರನ್ನು ಸೇರಿಸಿಕೊಂಡು ಮೇಕೆದಾಟು ಯೋಜನೆ ಜಾರಿಗಾಗಿ ಪಾದಯಾತ್ರೆ ಮಾಡಿದರು. ಈಗ ಅವರೇ ಅಧಿಕಾರದಲ್ಲಿದ್ದರೂ ಯೋಜನೆಯನ್ನು ಮರೆತಿದ್ದಾರೆ. ನಿರಂತರವಾಗಿ ಕೆಆರ್ಎಸ್ ನೀರು ತಮಿಳುನಾಡಿಗೆ ಹರಿದು ಹೋಗುತ್ತಿದ್ದರೂ ಅವರು ಬಾಯಿ ಬಿಡುತ್ತಿಲ್ಲ ಎಂದು ಆರೋಪಿಸಿದರು.</p>.<p>ಸಮಿತಿಯ ಪದಾಧಿಕಾರಿಗಳಾದ ಸುನಂದಾ ಜಯರಾಂ, ಕೆ.ಬೋರಯ್ಯ, ಎಸ್.ನಾರಾಯಣ್, ನಾಗರಾಜು, ನಾಗೇಂದ್ರ, ಲಕ್ಷ್ಮಮ್ಮ ಗೆಜ್ಜಲಗೆರೆ, ಹುರುಗಲವಾಡಿ ರಾಮಯ್ಯ, ಮಂಜುಳಾ, ಜವರಪ್ಪ, ಬೋರಲಿಂಗಯ್ಯ, ಫಯಾಜ್, ಜಯಸ್ವಾಮಿ, ಮಲ್ಲೇಶ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಡ್ಯ:</strong> ಕಾವೇರಿ ನೀರು ನಿಯಂತ್ರಣ ಪ್ರಾಧಿಕಾರವು ಮತ್ತೆ ತಮಿಳುನಾಡಿಗೆ 998 ಕ್ಯುಸೆಕ್ ನೀರು ಹರಿಸಬೇಕು ಎಂದು ಆದೇಶ ನೀಡುವ ಮೂಲಕ ಜಿಲ್ಲೆಯ ರೈತರಿಗೆ, ಸಾರ್ವಜನಿಕರಿಗೆ ಗಾಯದ ಮೇಲೆ ಬರೆ ಎಳೆದಿದೆ ಎಂದು ಜಿಲ್ಲಾ ರೈತ ಹಿತರಕ್ಷಣಾ ಸಮಿತಿ ಸದಸ್ಯರು ಅಸಮಾಧಾನ ವ್ಯಕ್ತಪಡಿಸಿದರು.</p>.<p>ನಗರದ ಸರ್.ಎಂ.ವಿಶ್ವೇಶ್ವರಯ್ಯ ಪ್ರತಿಮೆ ಎದುರು ನಡೆಯುತ್ತಿರುವ 137ನೇ ದಿನದ ಧರಣಿಯಲ್ಲಿ ಶುಕ್ರವಾರ ಪಾಧಿಕಾರದ ಆದೇಶದ ವಿರುದ್ಧ ಆಕ್ರೋಶ ವ್ಯಕ್ತವಾಯಿತು.</p>.<p>ಪ್ರಾಧಿಕಾರದ ರಾಜ್ಯದ ವಿರುದ್ಧ ನಿರಂತರವಾಗಿ ಆದೇಶ ಮಾಡುತ್ತಿದೆ. ವಾಸ್ತವವಾಗಿ ಅಣೆಕಟ್ಟೆಯಲ್ಲಿ ನೀರಿಲ್ಲ, ಮಳೆಯಿಲ್ಲ, ಬೆಳೆಯಿಲ್ಲ ಎಂಬುದನ್ನೇ ಪ್ರಾಧಿಕಾರ ಮರೆತಿದೆ. ನಮ್ಮ ರಾಜ್ಯದ ಕಾನೂನು ತಂಡ, ರಾಜ್ಯ ಸರ್ಕಾರ ಈ ನಿಟ್ಟಿನಲ್ಲಿ ವೈಫಲ್ಯ ಕಾಣುತ್ತಿದೆ. ನೀರು ನಿರ್ವಹಣಾ ಸಮಿತಿ ಹಾಗೂ ಕಾವೇರಿ ನದಿ ನೀರಿನ ಪ್ರಾಧಿಕಾರ ಎರಡೂ ಸತ್ತು ಹೋಗಿವೆ ಎಂದು ಆರೋಪಿಸಿದರು.</p>.<p>ಕಳೆದ ವರ್ಷ ಚುನಾವಣೆಗೂ ಮುನ್ನ ಸಾವಿರಾರು ಜನರನ್ನು ಸೇರಿಸಿಕೊಂಡು ಮೇಕೆದಾಟು ಯೋಜನೆ ಜಾರಿಗಾಗಿ ಪಾದಯಾತ್ರೆ ಮಾಡಿದರು. ಈಗ ಅವರೇ ಅಧಿಕಾರದಲ್ಲಿದ್ದರೂ ಯೋಜನೆಯನ್ನು ಮರೆತಿದ್ದಾರೆ. ನಿರಂತರವಾಗಿ ಕೆಆರ್ಎಸ್ ನೀರು ತಮಿಳುನಾಡಿಗೆ ಹರಿದು ಹೋಗುತ್ತಿದ್ದರೂ ಅವರು ಬಾಯಿ ಬಿಡುತ್ತಿಲ್ಲ ಎಂದು ಆರೋಪಿಸಿದರು.</p>.<p>ಸಮಿತಿಯ ಪದಾಧಿಕಾರಿಗಳಾದ ಸುನಂದಾ ಜಯರಾಂ, ಕೆ.ಬೋರಯ್ಯ, ಎಸ್.ನಾರಾಯಣ್, ನಾಗರಾಜು, ನಾಗೇಂದ್ರ, ಲಕ್ಷ್ಮಮ್ಮ ಗೆಜ್ಜಲಗೆರೆ, ಹುರುಗಲವಾಡಿ ರಾಮಯ್ಯ, ಮಂಜುಳಾ, ಜವರಪ್ಪ, ಬೋರಲಿಂಗಯ್ಯ, ಫಯಾಜ್, ಜಯಸ್ವಾಮಿ, ಮಲ್ಲೇಶ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>