<p><strong>ಮಳವಳ್ಳಿ:</strong> ಪಟ್ಟಣದಲ್ಲಿ ನಡೆಯುತ್ತಿರುವ ಸುತ್ತೂರು ಶಿವರಾತ್ರೀಶ್ವರ ಶಿವಯೋಗಿಯವರ 1066ನೇ ಜಯಂತ್ಯುತ್ಸದ 6ನೇ ದಿನವಾದ ಭಾನುವಾರ ಆದಿಜಗದ್ಗುರುಗಳ ಬೆಳ್ಳಿ ಪಲ್ಲಕ್ಕಿ ಉತ್ಸವ ಹಾಗೂ ಸದ್ಭಾವನಾ ಬೃಹತ್ ಮೆರವಣಿಗೆಗೆ ಸುತ್ತೂರು ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಸಾನ್ನಿಧ್ಯದಲ್ಲಿ ಚಾಲನೆ ನೀಡಲಾಯಿತು.</p>.<p>ಕನಕಪುರ ದೇಗುಲ ಮಠದ ಚನ್ನಬಸವ ಸ್ವಾಮೀಜಿ, ವಾಟಾಳು ಸೂರ್ಯ ಸಿಂಹಾಸನ ಮಠದ ಸಿದ್ದಲಿಂಗ ಶಿವಾಚಾರ್ಯ ಸ್ವಾಮೀಜಿ ಉತ್ಸವದಲ್ಲಿ ನಂದಿ ಕಂಭಗಳಿಗೆ ಹಾಗೂ ಆದಿಜಗದ್ಗುರುಗಳ ಉತ್ಸವ ಮೂರ್ತಿಗೆ ಪೂಜೆ ಸಲ್ಲಿಸಿದರು.</p>.<p>ಮೆರವಣಿಗೆಯಲ್ಲಿ ಶ್ರೀಮಠದ ಸಕಲ ಬಿರುದಾವಳಿಗಳು, ಪೂರ್ಣಕುಂಭ, ಮಂಗಳವಾದ್ಯ, ಜಾನಪದ ಕಲಾ ತಂಡಗಳೊಂದಿಗೆ ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ಸಾಗಿತು. ಜಯಂತ್ಯುತ್ಸವದಲ್ಲಿ ಶಾಂತಿ, ಸೌಹಾರ್ದ, ಸಾಮರಸ್ಯ ಸಾರುವ ಮೂಲಕ ಹೊಸ ಇತಿಹಾಸವನ್ನು ಸೃಷ್ಟಿಸಿತು.</p>.<p>ಉತ್ಸವ ಮೂರ್ತಿಯ ಬೆಳ್ಳಿ ಪಲ್ಲಕ್ಕಿ ಮೆರವಣಿಗೆಯಲ್ಲಿ ಸುತ್ತೂರು ಗುರು ಪರಂಪರೆಯ ಸಂಪ್ರದಾಯಬದ್ಧ ಆಚರಣೆಗಳು ಮೇಳೈಸಿದವು. ಮೆರವಣಿಗೆಯಲ್ಲಿ ಹರಗುರು ಚರಮೂರ್ತಿಗಳು, ಸರ್ವ ಜನಾಂಗದ ನೂರಾರು ಜನರು, ವಿದ್ಯಾಪೀಠದ ಅಧಿಕಾರಿಗಳು, ಜಯಂತಿ ಮಹೋತ್ಸವದ ಸಮಿತಿಯ ಪದಾಧಿಕಾರಿಗಳು ಸೇರಿ ನೂರಾರು ಮಹಿಳೆಯರು ಪಾಲ್ಗೊಂಡಿದ್ದರು.</p>.<p>ಶಾಂತಿ ಕಾಲೇಜು ಮುಂಭಾಗದ ಅನುಭವ ಮಂಟಪದಿಂದ ಹೊರಟ ಮೆರವಣಿಗೆಯು ಪಟ್ಟಣದ ಡಾ.ರಾಜ್ ಕುಮಾರ್ ರಸ್ತೆಯ ಮೂಲಕ ಅನಂತ್ ರಾಂ ವೃತ್ತ, ಕುಪ್ಪಸ್ವಾಮಿ ಅಯ್ಯಂಗಾರ್ ವೃತ್ತ, ಸುಲ್ತಾನ್ ರಸ್ತೆ, ಅನಿತಾ ಕಾನ್ವೆಂಟ್ ರಸ್ತೆಯ ಮೂಲಕ ಜಯಂತ್ಯುತ್ಸವದ ವೇದಿಕೆ ಬಳಿ ಆಗಮಿಸಿತು.</p>.<p>ಜಿಲ್ಲಾಧಿಕಾರಿ ಕುಮಾರ, ವಿಧಾನ ಪರಿಷತ್ ಮಾಜಿ ಉಪಸಭಾಪತಿ ಮರಿತಿಬ್ಬೇಗೌಡ, ಮಾಜಿ ಶಾಸಕರಾದ ಕೆ.ಅನ್ನದಾನಿ, ಬಾಲರಾಜ್ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಳವಳ್ಳಿ:</strong> ಪಟ್ಟಣದಲ್ಲಿ ನಡೆಯುತ್ತಿರುವ ಸುತ್ತೂರು ಶಿವರಾತ್ರೀಶ್ವರ ಶಿವಯೋಗಿಯವರ 1066ನೇ ಜಯಂತ್ಯುತ್ಸದ 6ನೇ ದಿನವಾದ ಭಾನುವಾರ ಆದಿಜಗದ್ಗುರುಗಳ ಬೆಳ್ಳಿ ಪಲ್ಲಕ್ಕಿ ಉತ್ಸವ ಹಾಗೂ ಸದ್ಭಾವನಾ ಬೃಹತ್ ಮೆರವಣಿಗೆಗೆ ಸುತ್ತೂರು ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಸಾನ್ನಿಧ್ಯದಲ್ಲಿ ಚಾಲನೆ ನೀಡಲಾಯಿತು.</p>.<p>ಕನಕಪುರ ದೇಗುಲ ಮಠದ ಚನ್ನಬಸವ ಸ್ವಾಮೀಜಿ, ವಾಟಾಳು ಸೂರ್ಯ ಸಿಂಹಾಸನ ಮಠದ ಸಿದ್ದಲಿಂಗ ಶಿವಾಚಾರ್ಯ ಸ್ವಾಮೀಜಿ ಉತ್ಸವದಲ್ಲಿ ನಂದಿ ಕಂಭಗಳಿಗೆ ಹಾಗೂ ಆದಿಜಗದ್ಗುರುಗಳ ಉತ್ಸವ ಮೂರ್ತಿಗೆ ಪೂಜೆ ಸಲ್ಲಿಸಿದರು.</p>.<p>ಮೆರವಣಿಗೆಯಲ್ಲಿ ಶ್ರೀಮಠದ ಸಕಲ ಬಿರುದಾವಳಿಗಳು, ಪೂರ್ಣಕುಂಭ, ಮಂಗಳವಾದ್ಯ, ಜಾನಪದ ಕಲಾ ತಂಡಗಳೊಂದಿಗೆ ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ಸಾಗಿತು. ಜಯಂತ್ಯುತ್ಸವದಲ್ಲಿ ಶಾಂತಿ, ಸೌಹಾರ್ದ, ಸಾಮರಸ್ಯ ಸಾರುವ ಮೂಲಕ ಹೊಸ ಇತಿಹಾಸವನ್ನು ಸೃಷ್ಟಿಸಿತು.</p>.<p>ಉತ್ಸವ ಮೂರ್ತಿಯ ಬೆಳ್ಳಿ ಪಲ್ಲಕ್ಕಿ ಮೆರವಣಿಗೆಯಲ್ಲಿ ಸುತ್ತೂರು ಗುರು ಪರಂಪರೆಯ ಸಂಪ್ರದಾಯಬದ್ಧ ಆಚರಣೆಗಳು ಮೇಳೈಸಿದವು. ಮೆರವಣಿಗೆಯಲ್ಲಿ ಹರಗುರು ಚರಮೂರ್ತಿಗಳು, ಸರ್ವ ಜನಾಂಗದ ನೂರಾರು ಜನರು, ವಿದ್ಯಾಪೀಠದ ಅಧಿಕಾರಿಗಳು, ಜಯಂತಿ ಮಹೋತ್ಸವದ ಸಮಿತಿಯ ಪದಾಧಿಕಾರಿಗಳು ಸೇರಿ ನೂರಾರು ಮಹಿಳೆಯರು ಪಾಲ್ಗೊಂಡಿದ್ದರು.</p>.<p>ಶಾಂತಿ ಕಾಲೇಜು ಮುಂಭಾಗದ ಅನುಭವ ಮಂಟಪದಿಂದ ಹೊರಟ ಮೆರವಣಿಗೆಯು ಪಟ್ಟಣದ ಡಾ.ರಾಜ್ ಕುಮಾರ್ ರಸ್ತೆಯ ಮೂಲಕ ಅನಂತ್ ರಾಂ ವೃತ್ತ, ಕುಪ್ಪಸ್ವಾಮಿ ಅಯ್ಯಂಗಾರ್ ವೃತ್ತ, ಸುಲ್ತಾನ್ ರಸ್ತೆ, ಅನಿತಾ ಕಾನ್ವೆಂಟ್ ರಸ್ತೆಯ ಮೂಲಕ ಜಯಂತ್ಯುತ್ಸವದ ವೇದಿಕೆ ಬಳಿ ಆಗಮಿಸಿತು.</p>.<p>ಜಿಲ್ಲಾಧಿಕಾರಿ ಕುಮಾರ, ವಿಧಾನ ಪರಿಷತ್ ಮಾಜಿ ಉಪಸಭಾಪತಿ ಮರಿತಿಬ್ಬೇಗೌಡ, ಮಾಜಿ ಶಾಸಕರಾದ ಕೆ.ಅನ್ನದಾನಿ, ಬಾಲರಾಜ್ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>