‘ಸಂಸದರಾಗಿ ಆಯ್ಕೆಯಾದ ನಂತರ ನೀವು ಜಿಲ್ಲೆಯಲ್ಲಿ ಒಂದು ಚರಂಡಿಯನ್ನೂ ಮಾಡಿಸಿಲ್ಲ. ಮೈಸೂರು ಸಂಸದರು ಮಂಡ್ಯಕ್ಕೆ ಬಂದು ಬೆಂಗಳೂರು–ಮೈಸೂರು ದಶಪಥ ಕಾಮಗಾರಿ ಮಾಡಿಸುತ್ತಿದ್ದಾರೆ, ನೀವೇನು ಮಾಡಿದ್ದೀರಿ’ ಎಂದು ಪ್ರಶ್ನಿಸಿದರು. ಇದಕ್ಕೆ ಶಾಸಕರಾದ ಸುರೇಶ್ಗೌಡ, ಎಂ.ಶ್ರೀನಿವಾಸ್, ಸಿ.ಎಸ್.ಪುಟ್ಟರಾಜು ಧ್ವನಿಗೂಡಿಸಿದರು.