‘ಅಂಬರೀಷ್ ಅವರು ಬದುಕಿದ್ದಾಗಲೇ ಶಾಸಕರು ಮಾತನಾಡಬೇಕಾಗಿತ್ತು. ಅಕ್ರಮ ಗಣಿಗಾರಿಕೆಯನ್ನು ರಕ್ಷಣೆ ಮಾಡಿಕೊಳ್ಳಲು ಅಂಬರೀಷ್ ಅವರನ್ನು ಎಳೆದು ತಂದರೆ ಸುಮ್ಮನಿರುವುದಿಲ್ಲ. ಜಿಲ್ಲೆಯಲ್ಲಿ, ರಾಜ್ಯದಲ್ಲಿ ಅಂಬರೀಷ್ ಅವರಿಗೆ ಅಪಾರ ಅಭಿಮಾನಿಗಳಿದ್ದಾರೆ. ಅವರ ವಿರುದ್ಧ ಮಾತನಾಡಿದರೆ ಅಭಿಮಾನಿಗಳ ಪ್ರತಿಭಟನೆ ಎದುರಿಸಬೇಕಾಗುತ್ತದೆ’ ಎಂದರು.