<p><strong>ನಾಗಮಂಗಲ:</strong> ಕೆಲ ದಿನಗಳ ಹಿಂದೆ ತಾಲ್ಲೂಕಿನ ಲಾಳನಕೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಿದರಿಕೆರೆ ಗ್ರಾಮದಲ್ಲಿ ಪಂಚಾಯಿತಿ ಸದಸ್ಯ ಸ್ಥಾನಕ್ಕೆ ಬಹಿರಂಗವಾಗಿ ಹರಾಜು ಪ್ರಕ್ರಿಯೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ಚುನಾವಣಾ ನೀತಿ ಸಂಹಿತೆ<br />ಉಲ್ಲಂಘನೆ ಆಧಾರದಲ್ಲಿ ಗ್ರಾಮದ ಸುಮಾರು 10 ಮಂದಿಯ ವಿರುದ್ಧ ಬಿಂಡಿಗನವಿಲೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p>ತಾಲ್ಲೂಕಿನ ಲಾಳನಕೆರೆ ಗ್ರಾಮ ಪಂಚಾಯಿತಿಯ ಬಿದರಿಕೆರೆ ಗ್ರಾಮಕ್ಕೆ ತಹಶೀಲ್ದಾರ್ ಕುಂಞಿ ಅಹಮದ್ ಭೇಟಿ ನೀಡಿ ಘಟನೆಯ ಮಾಹಿತಿ ಪಡೆದರು. ಅಲ್ಲದೆ, ಚುನಾವಣಾ ಕರ್ತವ್ಯದಲ್ಲಿರುವ ಅಧಿಕಾರಿಗಳಿಗೆ ಘಟನೆಯ ಸಂಬಂಧ ಅಗತ್ಯ ಕ್ರಮಕೈಗೊಳ್ಳುವಂತೆ ಸೂಚಿಸಿದರು. ಗ್ರಾಮದ ಜನರಿಗೆ ಚುನಾವಣೆಯ ಮಹತ್ವದ ಕುರಿತು ಜಾಗೃತಿ ಮೂಡಿಸಿದರು.</p>.<p>ಸದಸ್ಯ ಸ್ಥಾನದ ಬಹಿರಂಗ ಹರಾಜು ಪ್ರಕ್ರಿಯೆ ಕಾನೂನು ಬಾಹಿರವಾಗಿದ್ದು, ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆಯಾಗುತ್ತದೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಇಂಥ ಕ್ರಮ ಸರಿಯಲ್ಲ ಎಂದರು.</p>.<p>ಗ್ರಾಮಸ್ಥರು ನ್ಯಾಯಸಮ್ಮತವಾದ ಚುನಾವಣೆ ನಡೆಸಲು ಸಹಕರಿಸಬೇಕು. ಗ್ರಾಮದಲ್ಲಿರುವ ವಿದ್ಯಾವಂತರು ಗ್ರಾಮದ ಜನರಿಗೆ ಚುನಾವಣೆ ಮತ್ತು ಪ್ರಜಾಪ್ರಭುತ್ವ ವ್ಯವಸ್ಥೆಯ ಬಗ್ಗೆ<br />ಅರಿವು ಮೂಡಿಸುವ ಕೆಲಸ ಮಾಡಬೇಕು ಎಂದು ಅವರು ಸೂಚನೆ ನೀಡಿದರು.</p>.<p>ಗ್ರಾಮಸ್ಥ ಸಂತೋಷ್, ‘ಸಂವಿಧಾನಾತ್ಮಕ ಹಕ್ಕನ್ನು ಕೆಲವರು ತಮ್ಮ ಅನುಕೂಲಕ್ಕೆ ತಕ್ಕಂತೆ ಬಳಕೆ ಮಾಡುತ್ತಿದ್ದಾರೆ. ಅಲ್ಲದೆ, ರಾಜಕೀಯ ತಂತ್ರಗಳೂ ಕಾರ್ಯನಿರ್ವಹಿಸುತ್ತಿದ್ದು, ಆಣೆ ಪ್ರಮಾಣ ಮಾಡಿಸುವ ಮಟ್ಟಕ್ಕೂ ತಲುಪುವ ಅಪಾಯ ಎದುರಾಗಿದೆ. ಅದನ್ನು ವಿರೋಧಿಸುವ ಮೂಲಕ ಚುನಾವಣೆಗೆ ಸ್ಪರ್ಧಿಸುತ್ತೇನೆ’ ಎಂದು ಅವರು ಹೇಳಿದರು.</p>.<p>‘ಪ್ರಜಾವಾಣಿ’ ಪತ್ರಿಕೆಯೊಂದಿಗೆ ಮಾತನಾಡಿದ ಗ್ರಾಮಸ್ಥರೊಬ್ಬರು ದೇವಾಲಯದ ಅಭಿವೃದ್ಧಿಗಾಗಿ ಗ್ರಾಮಸ್ಥರೆಲ್ಲರೂ ಒಗ್ಗಟ್ಟಿನಿಂದ ಈ ಕ್ರಮ ಕೈಗೊಂಡಿದ್ದು, ಇದು ಕಾನೂನು ಬಾಹಿರ ಎಂದು ತಿಳಿದ ಮೇಲೆ ಕೈಬಿಟ್ಟು ಚುನಾವಣೆಗೆ ಹೋಗುತ್ತಿದ್ದೇವೆ ಎಂದರು.</p>.<p>ಚುನಾವಣಾಧಿಕಾರಿ ಶಿವರಾಜು, ಸಹಾಯಕ ಚುನಾವಣಾಧಿಕಾರಿ ರಮೇಶ್, ಪಿಡಿಒ ಸುರೇಶ್, ಆರ್ಐ ಮುರಳೀಧರ್, ಗ್ರಾಮ ಲೆಕ್ಕಿಗ ನಿಂಗಪ್ಪ ಸುರಪುರ ಮತ್ತು ಗ್ರಾಮಸ್ಥರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನಾಗಮಂಗಲ:</strong> ಕೆಲ ದಿನಗಳ ಹಿಂದೆ ತಾಲ್ಲೂಕಿನ ಲಾಳನಕೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಿದರಿಕೆರೆ ಗ್ರಾಮದಲ್ಲಿ ಪಂಚಾಯಿತಿ ಸದಸ್ಯ ಸ್ಥಾನಕ್ಕೆ ಬಹಿರಂಗವಾಗಿ ಹರಾಜು ಪ್ರಕ್ರಿಯೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ಚುನಾವಣಾ ನೀತಿ ಸಂಹಿತೆ<br />ಉಲ್ಲಂಘನೆ ಆಧಾರದಲ್ಲಿ ಗ್ರಾಮದ ಸುಮಾರು 10 ಮಂದಿಯ ವಿರುದ್ಧ ಬಿಂಡಿಗನವಿಲೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p>ತಾಲ್ಲೂಕಿನ ಲಾಳನಕೆರೆ ಗ್ರಾಮ ಪಂಚಾಯಿತಿಯ ಬಿದರಿಕೆರೆ ಗ್ರಾಮಕ್ಕೆ ತಹಶೀಲ್ದಾರ್ ಕುಂಞಿ ಅಹಮದ್ ಭೇಟಿ ನೀಡಿ ಘಟನೆಯ ಮಾಹಿತಿ ಪಡೆದರು. ಅಲ್ಲದೆ, ಚುನಾವಣಾ ಕರ್ತವ್ಯದಲ್ಲಿರುವ ಅಧಿಕಾರಿಗಳಿಗೆ ಘಟನೆಯ ಸಂಬಂಧ ಅಗತ್ಯ ಕ್ರಮಕೈಗೊಳ್ಳುವಂತೆ ಸೂಚಿಸಿದರು. ಗ್ರಾಮದ ಜನರಿಗೆ ಚುನಾವಣೆಯ ಮಹತ್ವದ ಕುರಿತು ಜಾಗೃತಿ ಮೂಡಿಸಿದರು.</p>.<p>ಸದಸ್ಯ ಸ್ಥಾನದ ಬಹಿರಂಗ ಹರಾಜು ಪ್ರಕ್ರಿಯೆ ಕಾನೂನು ಬಾಹಿರವಾಗಿದ್ದು, ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆಯಾಗುತ್ತದೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಇಂಥ ಕ್ರಮ ಸರಿಯಲ್ಲ ಎಂದರು.</p>.<p>ಗ್ರಾಮಸ್ಥರು ನ್ಯಾಯಸಮ್ಮತವಾದ ಚುನಾವಣೆ ನಡೆಸಲು ಸಹಕರಿಸಬೇಕು. ಗ್ರಾಮದಲ್ಲಿರುವ ವಿದ್ಯಾವಂತರು ಗ್ರಾಮದ ಜನರಿಗೆ ಚುನಾವಣೆ ಮತ್ತು ಪ್ರಜಾಪ್ರಭುತ್ವ ವ್ಯವಸ್ಥೆಯ ಬಗ್ಗೆ<br />ಅರಿವು ಮೂಡಿಸುವ ಕೆಲಸ ಮಾಡಬೇಕು ಎಂದು ಅವರು ಸೂಚನೆ ನೀಡಿದರು.</p>.<p>ಗ್ರಾಮಸ್ಥ ಸಂತೋಷ್, ‘ಸಂವಿಧಾನಾತ್ಮಕ ಹಕ್ಕನ್ನು ಕೆಲವರು ತಮ್ಮ ಅನುಕೂಲಕ್ಕೆ ತಕ್ಕಂತೆ ಬಳಕೆ ಮಾಡುತ್ತಿದ್ದಾರೆ. ಅಲ್ಲದೆ, ರಾಜಕೀಯ ತಂತ್ರಗಳೂ ಕಾರ್ಯನಿರ್ವಹಿಸುತ್ತಿದ್ದು, ಆಣೆ ಪ್ರಮಾಣ ಮಾಡಿಸುವ ಮಟ್ಟಕ್ಕೂ ತಲುಪುವ ಅಪಾಯ ಎದುರಾಗಿದೆ. ಅದನ್ನು ವಿರೋಧಿಸುವ ಮೂಲಕ ಚುನಾವಣೆಗೆ ಸ್ಪರ್ಧಿಸುತ್ತೇನೆ’ ಎಂದು ಅವರು ಹೇಳಿದರು.</p>.<p>‘ಪ್ರಜಾವಾಣಿ’ ಪತ್ರಿಕೆಯೊಂದಿಗೆ ಮಾತನಾಡಿದ ಗ್ರಾಮಸ್ಥರೊಬ್ಬರು ದೇವಾಲಯದ ಅಭಿವೃದ್ಧಿಗಾಗಿ ಗ್ರಾಮಸ್ಥರೆಲ್ಲರೂ ಒಗ್ಗಟ್ಟಿನಿಂದ ಈ ಕ್ರಮ ಕೈಗೊಂಡಿದ್ದು, ಇದು ಕಾನೂನು ಬಾಹಿರ ಎಂದು ತಿಳಿದ ಮೇಲೆ ಕೈಬಿಟ್ಟು ಚುನಾವಣೆಗೆ ಹೋಗುತ್ತಿದ್ದೇವೆ ಎಂದರು.</p>.<p>ಚುನಾವಣಾಧಿಕಾರಿ ಶಿವರಾಜು, ಸಹಾಯಕ ಚುನಾವಣಾಧಿಕಾರಿ ರಮೇಶ್, ಪಿಡಿಒ ಸುರೇಶ್, ಆರ್ಐ ಮುರಳೀಧರ್, ಗ್ರಾಮ ಲೆಕ್ಕಿಗ ನಿಂಗಪ್ಪ ಸುರಪುರ ಮತ್ತು ಗ್ರಾಮಸ್ಥರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>