ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಳವಳ್ಳಿಯಲ್ಲಿ ಬೆಂಕಿ ಅವಘಡ: 20 ಕುರಿ ಸಜೀವ ದಹನ

Last Updated 10 ಸೆಪ್ಟೆಂಬರ್ 2021, 6:52 IST
ಅಕ್ಷರ ಗಾತ್ರ

ಮಳವಳ್ಳಿ: ಕುರಿಗಳನ್ನು ಕೂಡಿ ಹಾಕಿದ್ದ ಗುಡಿಸಲಿಗೆ ಆಕಸ್ಮಿಕವಾಗಿ ಬೆಂಕಿ ಬಿದ್ದು 20 ಕುರಿಗಳು ಸಜೀವ ದಹನವಾಗಿರುವ ಘಟನೆ ತಾಲ್ಲೂಕಿನ ಮಾಗನಹಳ್ಳಿ ಗ್ರಾಮದಲ್ಲಿ ತಡರಾತ್ರಿ ನಡೆದಿದೆ.

ಗ್ರಾಮದ ಸಿದ್ದಪ್ಪ ಎಂಬುವರಿಗೆ ಸೇರಿದ ಕುರಿಗಳನ್ನು ಗುಡಿಸಲಿನ ಕೊಟ್ಟಿಗೆಯಲ್ಲಿ ಕಟ್ಟಿಹಾಕಿದ್ದರು. ಗುರುವಾರ ಮಧ್ಯರಾತ್ರಿ ಗುಡಿಸಲಿಗೆ ಆಕಸ್ಮಿಕವಾಗಿ ಬೆಂಕಿ ಬಿದ್ದು 20 ಕುರಿಗಳು ಸಜೀವ ದಹನವಾಗಿವೆ.

ಲಕ್ಷಾಂತರ ರೂಪಾಯಿ ಸಾಲ ಮಾಡಿ ಕುರಿಗಳನ್ನು ಸಾಕಿದ್ದರು. ಆಕಸ್ಮಿಕ ಬೆಂಕಿ ಬಿದ್ದು ಎಲ್ಲವೂ ಸುಟ್ಟುಹೋಗಿದ್ದು, ಇದ್ದರಿಂದ ಸಾಕಷ್ಟು ನಷ್ಟವಾಗಿದ್ದು, ತಾಲ್ಲೂಕು ಆಡಳಿತ ಸಂಬಂಧ ಅಧಿಕಾರಿಗಳು ಸೂಕ್ತ ಪರಿಹಾರ ನೀಡಬೇಕು ಎಂದು ಮಾಲೀಕ ಸಿದ್ದಪ್ಪ ತಮ್ಮ ಆಳಲು ತೋಡಿಕೊಂಡಿದ್ದಾರೆ.

ಘಟನಾ ಸ್ಥಳಕ್ಕೆ ಕಿರುಗಾವಲು ಪೊಲೀಸ್ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಈ ಸಂಬಂಧ ಕಿರುಗಾವಲು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT