ಗ್ರಾಮದ ರೈತರಾದ ಕಾಳೇಗೌಡ, ಚಿಕ್ಕಲಿಂಗಯ್ಯ, ಜಯರಾಮು, ಕೆಂಪೇಗೌಡ, ಚೌಡಯ್ಯ, ಚಂದ್ರಮ್ಮ, ದೇವಿಪುರದ ಮಲ್ಲೇಶ್ ಹಾಗೂ ಮದ್ದೂರು ತಾಲ್ಲೂಕಿನ ಕರಡಕೆರೆ ಗ್ರಾಮಗಳ ರೈತರು ಸೇರಿದಂತೆ ಹಲವರ ಕಬ್ಬಿನ ಗದ್ದೆಗಳು ಸುಟ್ಟು ನಾಶವಾಗಿವೆ. ಭಾನುವಾರ ಸಂಜೆ ಇದ್ದಕ್ಕಿದ್ದಂತೆ ಆಕಸ್ಮಿಕವಾಗಿ ಕಬ್ಬಿನ ಗದ್ದೆಗೆ ಬೆಂಕಿ ಬಿದ್ದು ಸುಮಾರು ಹತ್ತು ಎಕರೆ ಕಬ್ಬು ಬೆಳೆ ಸಂಪೂರ್ಣ ನಾಶವಾಗಿದೆ.