<p><strong>ಶ್ರೀರಂಗಪಟ್ಟಣ:</strong> ‘ಕಾವೇರಿ ನದಿಯಲ್ಲಿ ಪ್ರವಾಹ ಮತ್ತಷ್ಟು ಹೆಚ್ಚಿದರೆ ಅಗತ್ಯ ಇರುವ ಕಡೆ ಪರಿಹಾರ ಕೇಂದ್ರ ತೆರೆಯಲು ಸಿದ್ಧತೆ ಮಾಡಿಕೊಳ್ಳಬೇಕು’ ಎಂದು ಜಿಲ್ಲಾಧಿಕಾರಿ ಡಾ.ಎಂ.ವಿ. ವೆಂಕಟೇಶ್ ಸ್ಥಳೀಯ ಅಧಿಕಾರಿಗಳಿಗೆ ಸೂಚಿಸಿದರು.</p>.<p>ತಾಲ್ಲೂಕಿನ ಗೌತಮ ಕ್ಷೇತ್ರ ದ್ವೀಪ, ವೆಲ್ಲೆಸ್ಲಿ ಸೇತುವೆ, ಕಾವೇರಿಪುರ ಹಾಗೂ ನಿಮಿಷಾಂಬಾ ದೇವಾಲಯ ಬಳಿಗೆ ಸೋಮವಾರ ಭೇಟಿ ನೀಡಿ, ಪ್ರವಾಹ ಪರಿಸ್ಥಿತಿ ವೀಕ್ಷಿಸಿ ಅವರು ಮಾತನಾಡಿದರು.</p>.<p>‘ನಡುಗಡ್ಡೆಯಲ್ಲಿರುವಗೌತಮ ಕ್ಷೇತ್ರದ ಗಜಾನನ ಸ್ವಾಮೀಜಿ ಸುರಕ್ಷಿತವಾಗಿದ್ದಾರೆ. ನದಿ ತೀರದ ಜನರು ಹಾಗೂ ಮೀನುಗಾರರು ನೀರಿಗೆ ಇಳಿಯದಂತೆ ನೋಡಿಕೊಳ್ಳಬೇಕು. ಪ್ರವಾಹ ಹೆಚ್ಚಿದರೆ ಅವರನ್ನು ತಕ್ಷಣ ಸ್ಥಳಾಂತರಿಸಬೇಕು. ದೋಣಿ, ಈಜುಗಾರರು ಸದಾ ಸಿದ್ಧರಿರಬೇಕು’ ಎಂದು ತಿಳಿಸಿದರು.</p>.<p>‘ತಾಲ್ಲೂಕಿನ ಬಲಮುರಿ, ದೊಡ್ಡಪಾಳ್ಯ, ಚಿಕ್ಕಪಾಳ್ಯ, ಮಹದೇವಪುರ ಇತರೆಡೆ ನದಿ ತೀರದಲ್ಲಿ ಇರುವ ಜನರ ಬಗ್ಗೆ ನಿಗಾ ವಹಿಸಲಾಗಿದೆ. ಸ್ಥಳೀಯ ಸರ್ಕಾರಿ ಶಾಲೆಗಳಲ್ಲಿ ಪರಿಹಾರ ಕೇಂದ್ರ ತೆರೆಯಲು ಸಿದ್ದತೆ ಮಾಡಿಕೊಳ್ಳಲಾಗಿದೆ. ಬಿಸಿಯೂಟದ ಅಡುಗೆಯವರನ್ನು ಸನ್ನದ್ಧರಾಗಿ ಇರಿಸುವಂತೆ ಬಿಇಒಗೆ ತಿಳಿಸಲಾಗಿದೆ’ ಎಂದು ತಹಶೀಲ್ದಾರ್ ಎಂ.ವಿ. ರೂಪಾ ಹೇಳಿದರು.</p>.<p>ಉಪ ವಿಭಾಗಾಧಿಕಾರಿ ಬಿ.ಸಿ. ಶಿವಾನಂದಮೂರ್ತಿ, ಪುರಸಭೆ ಮುಖ್ಯಾಧಿಕಾರು ಕೃಷ್ಣ, ಕಂದಾಯ ನಿರೀಕ್ಷಕ ಜಯಕುಮಾರ್ ಇತರರು ಜತೆಗಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶ್ರೀರಂಗಪಟ್ಟಣ:</strong> ‘ಕಾವೇರಿ ನದಿಯಲ್ಲಿ ಪ್ರವಾಹ ಮತ್ತಷ್ಟು ಹೆಚ್ಚಿದರೆ ಅಗತ್ಯ ಇರುವ ಕಡೆ ಪರಿಹಾರ ಕೇಂದ್ರ ತೆರೆಯಲು ಸಿದ್ಧತೆ ಮಾಡಿಕೊಳ್ಳಬೇಕು’ ಎಂದು ಜಿಲ್ಲಾಧಿಕಾರಿ ಡಾ.ಎಂ.ವಿ. ವೆಂಕಟೇಶ್ ಸ್ಥಳೀಯ ಅಧಿಕಾರಿಗಳಿಗೆ ಸೂಚಿಸಿದರು.</p>.<p>ತಾಲ್ಲೂಕಿನ ಗೌತಮ ಕ್ಷೇತ್ರ ದ್ವೀಪ, ವೆಲ್ಲೆಸ್ಲಿ ಸೇತುವೆ, ಕಾವೇರಿಪುರ ಹಾಗೂ ನಿಮಿಷಾಂಬಾ ದೇವಾಲಯ ಬಳಿಗೆ ಸೋಮವಾರ ಭೇಟಿ ನೀಡಿ, ಪ್ರವಾಹ ಪರಿಸ್ಥಿತಿ ವೀಕ್ಷಿಸಿ ಅವರು ಮಾತನಾಡಿದರು.</p>.<p>‘ನಡುಗಡ್ಡೆಯಲ್ಲಿರುವಗೌತಮ ಕ್ಷೇತ್ರದ ಗಜಾನನ ಸ್ವಾಮೀಜಿ ಸುರಕ್ಷಿತವಾಗಿದ್ದಾರೆ. ನದಿ ತೀರದ ಜನರು ಹಾಗೂ ಮೀನುಗಾರರು ನೀರಿಗೆ ಇಳಿಯದಂತೆ ನೋಡಿಕೊಳ್ಳಬೇಕು. ಪ್ರವಾಹ ಹೆಚ್ಚಿದರೆ ಅವರನ್ನು ತಕ್ಷಣ ಸ್ಥಳಾಂತರಿಸಬೇಕು. ದೋಣಿ, ಈಜುಗಾರರು ಸದಾ ಸಿದ್ಧರಿರಬೇಕು’ ಎಂದು ತಿಳಿಸಿದರು.</p>.<p>‘ತಾಲ್ಲೂಕಿನ ಬಲಮುರಿ, ದೊಡ್ಡಪಾಳ್ಯ, ಚಿಕ್ಕಪಾಳ್ಯ, ಮಹದೇವಪುರ ಇತರೆಡೆ ನದಿ ತೀರದಲ್ಲಿ ಇರುವ ಜನರ ಬಗ್ಗೆ ನಿಗಾ ವಹಿಸಲಾಗಿದೆ. ಸ್ಥಳೀಯ ಸರ್ಕಾರಿ ಶಾಲೆಗಳಲ್ಲಿ ಪರಿಹಾರ ಕೇಂದ್ರ ತೆರೆಯಲು ಸಿದ್ದತೆ ಮಾಡಿಕೊಳ್ಳಲಾಗಿದೆ. ಬಿಸಿಯೂಟದ ಅಡುಗೆಯವರನ್ನು ಸನ್ನದ್ಧರಾಗಿ ಇರಿಸುವಂತೆ ಬಿಇಒಗೆ ತಿಳಿಸಲಾಗಿದೆ’ ಎಂದು ತಹಶೀಲ್ದಾರ್ ಎಂ.ವಿ. ರೂಪಾ ಹೇಳಿದರು.</p>.<p>ಉಪ ವಿಭಾಗಾಧಿಕಾರಿ ಬಿ.ಸಿ. ಶಿವಾನಂದಮೂರ್ತಿ, ಪುರಸಭೆ ಮುಖ್ಯಾಧಿಕಾರು ಕೃಷ್ಣ, ಕಂದಾಯ ನಿರೀಕ್ಷಕ ಜಯಕುಮಾರ್ ಇತರರು ಜತೆಗಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>