<p><strong>ಶ್ರೀರಂಗಪಟ್ಟಣ:</strong> ಕೆಆರ್ಎಸ್ ಜಲಾಶಯಕ್ಕೆ ಒಳಹರಿವು ಹೆಚ್ಚಾಗಿದ್ದು, ಅಣೆಕಟ್ಟೆಯ ನೀರಿನ ಮಟ್ಟ 120 ಅಡಿ ಗಡಿ ದಾಟಿದೆ. ನದಿಗೆ ಹರಿಸುವ ನೀರಿನ ಪ್ರಮಾಣ 1 ಲಕ್ಷ ಕ್ಯುಸೆಕ್ ದಾಟುವ ಸಾಧ್ಯತೆ ಇದ್ದು, ನದಿ ಪಾತ್ರದ ಜನರಿಗೆ ಪ್ರವಾಹ ಭೀತಿ ಎದುರಾಗಿದೆ.</p>.<p>ನದಿ ದಡದ ಗದ್ದೆಗಳು, ಕಟ್ಟಡಗಳು ಈಗಾಗಲೇ ಜಲಾವೃತವಾಗಿವೆ. ನಿಮಿಷಾಂಬಾ ದೇವಾಲಯದ ಮೆಟ್ಟಿಲುಗಳವರೆಗೂ ನೀರು ಬಂದಿದೆ. ಕಾವೇರಿ ನದಿಯಲ್ಲಿ ನೀರಿನ ಸೆಳೆತ ಜೋರಾಗಿದ್ದು, ಪ್ರವಾಹ ಭೀತಿ ಎದುರಾಗಿದೆ. ನದಿ ತೀರದ ವಾಸಿಗಳು ನದಿಗೆ ಇಳಿಯಬಾರದು ಎಂದು ತಹಶೀಲ್ದಾರ್ ಎಂ.ವಿ. ರೂಪಾ ಭಾನುವಾರ ಸೂಚಿಸಿದರು.</p>.<p>ಪಟ್ಟಣದ ವೆಲ್ಲೆಸ್ಲಿ ಸೇತುವೆ, ಕಾವೇರಿಪುರ, ಗಂಜಾಂ ನಿಮಿಷಾಂಬ ದೇವಾಲಯ ಇತರೆಡೆ ತಗ್ಗು ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.</p>.<p>‘ಕೆಆರ್ಎಸ್ ಜಲಾಶಯಕ್ಕೆ ಒಳ ಹರಿವು ಹೆಚ್ಚಾದರೆ ನದಿಯ ಮಟ್ಟ ಮತ್ತಷ್ಟು ಹೆಚ್ಚಲಿದೆ. ಹಾಗಾದರೆ ನದಿ ಅಂಚಿನಲ್ಲಿರುವವರು ಸುರಕ್ಷಿತ ಸ್ಥಳಕ್ಕೆ ತೆರಳಬೇಕು. ಸ್ಥಳೀಯ ಮುಖಂಡರು ಜನರಿಗೆ ತಿಳಿ ಹೇಳಬೇಕು’ ಎಂದರು.</p>.<p>‘ಸದ್ಯದ ಪರಿಸ್ಥಿತಿಯಲ್ಲಿ ಕೃಷಿ ಜಮೀನಿಗೆ ಅಲ್ಲಲ್ಲಿ ನೀರು ಹರಿದಿರುವುದನ್ನು ಬಿಟ್ಟರೆ ಬೇರೆ ಸಮಸ್ಯೆ ಉಂಟಾಗಿಲ್ಲ. ಮನೆ ಇತರೆ ಆಸ್ತಿಪಾಸ್ತಿ ನಷ್ಟವಾಗಿಲ್ಲ. ಎಲ್ಲಿಯಾದರೂ ನಷ್ಟ ಆಗಿದ್ದರೆ ವರದಿ ನೀಡುವಂತೆ ಕಂದಾಯ ಇಲಾಖೆ ಸಿಬ್ಬಂದಿಗೆ ಸೂಚಿಸಿದ್ದೇನೆ’ ಎಂದರು. ಪುರಸಭೆ ಮುಖ್ಯಾಧಿಕಾರಿ ಕೃಷ್ಣ ಜತೆಗಿದ್ದರು.</p>.<p>ನದಿ ತೀರದಲ್ಲಿ ಜನದಟ್ಟಣೆ: ಕೆಆರ್ಎಸ್ ಜಲಾಶಯದಿಂದ ಕಾವೇರಿ ನದಿಗೆ 75 ಸಾವಿರ ಕ್ಯುಸೆಕ್ ನೀರು ಹರಿಸುತ್ತಿದ್ದು, ಮೈದುಂಬಿ ಹರಿಯುತ್ತಿರುವ ನದಿಯನ್ನು ಜನರು<br />ಕಣ್ತುಂಬಿಕೊಂಡರು.</p>.<p>ಒಂದು ವರ್ಷದ ಬಳಿಕ ಉಕ್ಕಿ ಹರಿಯುತ್ತಿರುವ ನದಿಯನ್ನು ಕಂಡು ಬೆಂಗಳೂರು– ಮೈಸೂರು ಹೆದ್ದಾರಿಯಲ್ಲಿ ಸಂಚರಿಸುವವರು ಪಟ್ಟಣದ ಹೊಸ ಸೇತುವೆ ಮೇಲೆ ನಿಂತು ಬೆರಗಿನಿಂದ ನೋಡುತ್ತಿದ್ದಾರೆ.</p>.<p>ನದಿ ತೀರದಲ್ಲಿ ನಿಂತು ಸೆಲ್ಫಿ ಕ್ಲಿಕ್ಕಿಸಿಕೊಳ್ಳುವ ದೃಶ್ಯ ಸಾಮಾನ್ಯವಾಗಿದೆ. ಮೈದುಂಬಿ ಹರಿಯುತ್ತಿರುವ ನದಿ ನೋಡಲು ಗ್ರಾಮೀಣ ಪ್ರದೇಶದ ಜನರು ತಂಡ ತಂಡವಾಗಿ<br />ಧಾವಿಸುತ್ತಿದ್ದಾರೆ.</p>.<p>ಪಟ್ಟಣದ ಸಾಯಿಬಾಬಾ ಅಶ್ರಮ, ಪಶ್ಚಿಮ ವಾಹಿನಿ ಬಳಿ ಕೂಡ ಜನರು ಕಾವೇರಿ ನದಿಯ ಸೊಬಗನ್ನು ಕಣ್ತುಂಬಿಕೊಳ್ಳುತ್ತಿದ್ದಾರೆ. ಪಾನಿಪೂರಿ, ಚುರುಮುರಿ ಮತ್ತು ಹಣ್ಣು ಮಾರುವ ಸಂಚಾರಿ ಅಂಗಡಿಗಳು ನದಿ ತೀರದಲ್ಲಿ ತಲೆ ಎತ್ತಿವೆ.</p>.<p>ಸೇತುವೆಗಳ ಮೇಲೆ ಜನರು ತಮ್ಮ ವಾಹನಗಳನ್ನು ನಿಲ್ಲಿಸುತ್ತಿದ್ದು, ಇತರೆ ವಾಹನಗಳ ಸಂಚಾರಕ್ಕೆ ತೊಂದರೆಯಾಯಿತು. ಪೊಲೀಸರನ್ನು ನಿಯೋಜಿಸಿ, ಜನ ದಟ್ಟಣೆ ಕಡಿಮೆ ಮಾಡಬೇಕು ಎಂದು ಸ್ಥಳೀಯರು ಒತ್ತಾಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶ್ರೀರಂಗಪಟ್ಟಣ:</strong> ಕೆಆರ್ಎಸ್ ಜಲಾಶಯಕ್ಕೆ ಒಳಹರಿವು ಹೆಚ್ಚಾಗಿದ್ದು, ಅಣೆಕಟ್ಟೆಯ ನೀರಿನ ಮಟ್ಟ 120 ಅಡಿ ಗಡಿ ದಾಟಿದೆ. ನದಿಗೆ ಹರಿಸುವ ನೀರಿನ ಪ್ರಮಾಣ 1 ಲಕ್ಷ ಕ್ಯುಸೆಕ್ ದಾಟುವ ಸಾಧ್ಯತೆ ಇದ್ದು, ನದಿ ಪಾತ್ರದ ಜನರಿಗೆ ಪ್ರವಾಹ ಭೀತಿ ಎದುರಾಗಿದೆ.</p>.<p>ನದಿ ದಡದ ಗದ್ದೆಗಳು, ಕಟ್ಟಡಗಳು ಈಗಾಗಲೇ ಜಲಾವೃತವಾಗಿವೆ. ನಿಮಿಷಾಂಬಾ ದೇವಾಲಯದ ಮೆಟ್ಟಿಲುಗಳವರೆಗೂ ನೀರು ಬಂದಿದೆ. ಕಾವೇರಿ ನದಿಯಲ್ಲಿ ನೀರಿನ ಸೆಳೆತ ಜೋರಾಗಿದ್ದು, ಪ್ರವಾಹ ಭೀತಿ ಎದುರಾಗಿದೆ. ನದಿ ತೀರದ ವಾಸಿಗಳು ನದಿಗೆ ಇಳಿಯಬಾರದು ಎಂದು ತಹಶೀಲ್ದಾರ್ ಎಂ.ವಿ. ರೂಪಾ ಭಾನುವಾರ ಸೂಚಿಸಿದರು.</p>.<p>ಪಟ್ಟಣದ ವೆಲ್ಲೆಸ್ಲಿ ಸೇತುವೆ, ಕಾವೇರಿಪುರ, ಗಂಜಾಂ ನಿಮಿಷಾಂಬ ದೇವಾಲಯ ಇತರೆಡೆ ತಗ್ಗು ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.</p>.<p>‘ಕೆಆರ್ಎಸ್ ಜಲಾಶಯಕ್ಕೆ ಒಳ ಹರಿವು ಹೆಚ್ಚಾದರೆ ನದಿಯ ಮಟ್ಟ ಮತ್ತಷ್ಟು ಹೆಚ್ಚಲಿದೆ. ಹಾಗಾದರೆ ನದಿ ಅಂಚಿನಲ್ಲಿರುವವರು ಸುರಕ್ಷಿತ ಸ್ಥಳಕ್ಕೆ ತೆರಳಬೇಕು. ಸ್ಥಳೀಯ ಮುಖಂಡರು ಜನರಿಗೆ ತಿಳಿ ಹೇಳಬೇಕು’ ಎಂದರು.</p>.<p>‘ಸದ್ಯದ ಪರಿಸ್ಥಿತಿಯಲ್ಲಿ ಕೃಷಿ ಜಮೀನಿಗೆ ಅಲ್ಲಲ್ಲಿ ನೀರು ಹರಿದಿರುವುದನ್ನು ಬಿಟ್ಟರೆ ಬೇರೆ ಸಮಸ್ಯೆ ಉಂಟಾಗಿಲ್ಲ. ಮನೆ ಇತರೆ ಆಸ್ತಿಪಾಸ್ತಿ ನಷ್ಟವಾಗಿಲ್ಲ. ಎಲ್ಲಿಯಾದರೂ ನಷ್ಟ ಆಗಿದ್ದರೆ ವರದಿ ನೀಡುವಂತೆ ಕಂದಾಯ ಇಲಾಖೆ ಸಿಬ್ಬಂದಿಗೆ ಸೂಚಿಸಿದ್ದೇನೆ’ ಎಂದರು. ಪುರಸಭೆ ಮುಖ್ಯಾಧಿಕಾರಿ ಕೃಷ್ಣ ಜತೆಗಿದ್ದರು.</p>.<p>ನದಿ ತೀರದಲ್ಲಿ ಜನದಟ್ಟಣೆ: ಕೆಆರ್ಎಸ್ ಜಲಾಶಯದಿಂದ ಕಾವೇರಿ ನದಿಗೆ 75 ಸಾವಿರ ಕ್ಯುಸೆಕ್ ನೀರು ಹರಿಸುತ್ತಿದ್ದು, ಮೈದುಂಬಿ ಹರಿಯುತ್ತಿರುವ ನದಿಯನ್ನು ಜನರು<br />ಕಣ್ತುಂಬಿಕೊಂಡರು.</p>.<p>ಒಂದು ವರ್ಷದ ಬಳಿಕ ಉಕ್ಕಿ ಹರಿಯುತ್ತಿರುವ ನದಿಯನ್ನು ಕಂಡು ಬೆಂಗಳೂರು– ಮೈಸೂರು ಹೆದ್ದಾರಿಯಲ್ಲಿ ಸಂಚರಿಸುವವರು ಪಟ್ಟಣದ ಹೊಸ ಸೇತುವೆ ಮೇಲೆ ನಿಂತು ಬೆರಗಿನಿಂದ ನೋಡುತ್ತಿದ್ದಾರೆ.</p>.<p>ನದಿ ತೀರದಲ್ಲಿ ನಿಂತು ಸೆಲ್ಫಿ ಕ್ಲಿಕ್ಕಿಸಿಕೊಳ್ಳುವ ದೃಶ್ಯ ಸಾಮಾನ್ಯವಾಗಿದೆ. ಮೈದುಂಬಿ ಹರಿಯುತ್ತಿರುವ ನದಿ ನೋಡಲು ಗ್ರಾಮೀಣ ಪ್ರದೇಶದ ಜನರು ತಂಡ ತಂಡವಾಗಿ<br />ಧಾವಿಸುತ್ತಿದ್ದಾರೆ.</p>.<p>ಪಟ್ಟಣದ ಸಾಯಿಬಾಬಾ ಅಶ್ರಮ, ಪಶ್ಚಿಮ ವಾಹಿನಿ ಬಳಿ ಕೂಡ ಜನರು ಕಾವೇರಿ ನದಿಯ ಸೊಬಗನ್ನು ಕಣ್ತುಂಬಿಕೊಳ್ಳುತ್ತಿದ್ದಾರೆ. ಪಾನಿಪೂರಿ, ಚುರುಮುರಿ ಮತ್ತು ಹಣ್ಣು ಮಾರುವ ಸಂಚಾರಿ ಅಂಗಡಿಗಳು ನದಿ ತೀರದಲ್ಲಿ ತಲೆ ಎತ್ತಿವೆ.</p>.<p>ಸೇತುವೆಗಳ ಮೇಲೆ ಜನರು ತಮ್ಮ ವಾಹನಗಳನ್ನು ನಿಲ್ಲಿಸುತ್ತಿದ್ದು, ಇತರೆ ವಾಹನಗಳ ಸಂಚಾರಕ್ಕೆ ತೊಂದರೆಯಾಯಿತು. ಪೊಲೀಸರನ್ನು ನಿಯೋಜಿಸಿ, ಜನ ದಟ್ಟಣೆ ಕಡಿಮೆ ಮಾಡಬೇಕು ಎಂದು ಸ್ಥಳೀಯರು ಒತ್ತಾಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>