<p><strong>ಮಂಡ್ಯ: </strong>ರಾಜಸ್ವ ಹಣ ದುರುಪಯೋಗ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ 1ನೇ ಹೆಚ್ಚುವರಿ ಸಿವಿಲ್, ಜೆಎಂಎಫ್ಸಿ ನ್ಯಾಯಾಧೀಶರು ನಾಲ್ವರು ಉಪ ನೋಂದಣಾಧಿಕಾರಿ, ಮೂವರು ಪತ್ರ ಬರಹಗಾರರಿಗೆ ಕ್ರಮವಾಗಿ 4, 5 ವರ್ಷ ಜೈಲು ಶಿಕ್ಷೆ, ₹ 1.25 ಕೋಟಿ ದಂಡ ವಿಧಿಸಿ ಸೋಮವಾರ (ರ್ಮಾಚ್ 29) ತೀರ್ಪು ನೀಡಿದ್ದಾರೆ.</p>.<p>2006ಕ್ಕೂ ಹಿಂದೆ ನಗರದ ಉಪ ನೋಂದಣಾಧಿಕಾರಿ ಕಚೇರಿಯಲ್ಲಿ ಉಪ ನೋಂದಣಾಧಿಕಾರಿಗಳಾಗಿದ್ದ ಎಸ್.ಎನ್.ಪ್ರಭಾ, ಚಲುವರಾಜು, ಪ್ರಭಾರ ಉಪ ನೋಂದಣಾಧಿಕಾರಿಗಳಾಗಿದ್ದ ಲೀಲಾವತಿ, ಸುನಂದಾ ಹಾಗೂ ಪತ್ರ ಬರಹಗಾರರಾಗಿದ್ದ ಬಿ.ಕೆ.ರಾಮರಾವ್, ನರಸಿಂಹಮೂರ್ತಿ, ಚಂದ್ರಶೇಖರ್ ಶಿಕ್ಷೆಗೆ ಒಳಗಾದವರು.</p>.<p>ಒಟ್ಟು 154 ಪ್ರಕರಣಗಳಲ್ಲಿ ಹಣ ದುರುಪಯೋಗವಾಗಿರುವ ಬಗ್ಗೆ 2006ರಲ್ಲಿ ಉಪ ನೋಂದಣಾಧಿಕಾರಿಯಾಗಿದ್ದ ನರಸಿಂಹಯ್ಯ ಪಶ್ಚಿಮ ಠಾಣೆಗೆ ದೂರು ಸಲ್ಲಿಸಿದರು. ಇದರ ಆಧಾರದ ಮೇಲೆ ಎಫ್ಐಆರ್ ದಾಖಲಿಸಲಾಗಿತ್ತು. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶ ರಮೇಶ್ ಎಸ್ ಗಾಣಿಗೇರ್ ತೀರ್ಪು ನೀಡಿದ್ದಾರೆ.</p>.<p>ಎಸ್.ಎನ್.ಪ್ರಭಾ ಸದ್ಯ ಬೆಂಗಳೂರು ಐಜಿಆರ್ (ಇನ್ಸ್ಪೆಕ್ಟರ್ ಜನರಲ್ ಆಫ್ ರಿಜಿಸ್ಟ್ರೇಷನ್) ಕಚೇರಿಯಲ್ಲಿದ್ದಾರೆ. ಚೆಲುವರಾಜು ಶೃಂಗೇರಿ ಉಪ ನೋಂದಣಾಧಿಕಾರಿಯಾಗಿದ್ದಾರೆ. ಲೀಲಾವತಿ ಮದ್ದೂರು ಉಪ ನೋಂದಣಾಧಿಕಾರಿ ಕಚೇರಿಯಲ್ಲಿ ಎಫ್ಡಿಎ, ಸುನಂದಾ ಬೆಂಗಳೂರು ಎಲೆಕ್ಟ್ರಾನಿಕ್ ಸಿಟಿ ಉಪ ನೋಂದಣಾಧಿಕಾರಿ ಕಚೇರಿಯಲ್ಲಿ ಎಫ್ಡಿಎ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.</p>.<p>ಸರ್ಕಾರಿ ಅಭಿಯೋಜಕ ಎಂ.ಜಿ.ಸುರೇಶ್ ಅವರು ಸರ್ಕಾರದ ಪರವಾಗಿ ವಾದ ಮಂಡಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಡ್ಯ: </strong>ರಾಜಸ್ವ ಹಣ ದುರುಪಯೋಗ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ 1ನೇ ಹೆಚ್ಚುವರಿ ಸಿವಿಲ್, ಜೆಎಂಎಫ್ಸಿ ನ್ಯಾಯಾಧೀಶರು ನಾಲ್ವರು ಉಪ ನೋಂದಣಾಧಿಕಾರಿ, ಮೂವರು ಪತ್ರ ಬರಹಗಾರರಿಗೆ ಕ್ರಮವಾಗಿ 4, 5 ವರ್ಷ ಜೈಲು ಶಿಕ್ಷೆ, ₹ 1.25 ಕೋಟಿ ದಂಡ ವಿಧಿಸಿ ಸೋಮವಾರ (ರ್ಮಾಚ್ 29) ತೀರ್ಪು ನೀಡಿದ್ದಾರೆ.</p>.<p>2006ಕ್ಕೂ ಹಿಂದೆ ನಗರದ ಉಪ ನೋಂದಣಾಧಿಕಾರಿ ಕಚೇರಿಯಲ್ಲಿ ಉಪ ನೋಂದಣಾಧಿಕಾರಿಗಳಾಗಿದ್ದ ಎಸ್.ಎನ್.ಪ್ರಭಾ, ಚಲುವರಾಜು, ಪ್ರಭಾರ ಉಪ ನೋಂದಣಾಧಿಕಾರಿಗಳಾಗಿದ್ದ ಲೀಲಾವತಿ, ಸುನಂದಾ ಹಾಗೂ ಪತ್ರ ಬರಹಗಾರರಾಗಿದ್ದ ಬಿ.ಕೆ.ರಾಮರಾವ್, ನರಸಿಂಹಮೂರ್ತಿ, ಚಂದ್ರಶೇಖರ್ ಶಿಕ್ಷೆಗೆ ಒಳಗಾದವರು.</p>.<p>ಒಟ್ಟು 154 ಪ್ರಕರಣಗಳಲ್ಲಿ ಹಣ ದುರುಪಯೋಗವಾಗಿರುವ ಬಗ್ಗೆ 2006ರಲ್ಲಿ ಉಪ ನೋಂದಣಾಧಿಕಾರಿಯಾಗಿದ್ದ ನರಸಿಂಹಯ್ಯ ಪಶ್ಚಿಮ ಠಾಣೆಗೆ ದೂರು ಸಲ್ಲಿಸಿದರು. ಇದರ ಆಧಾರದ ಮೇಲೆ ಎಫ್ಐಆರ್ ದಾಖಲಿಸಲಾಗಿತ್ತು. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶ ರಮೇಶ್ ಎಸ್ ಗಾಣಿಗೇರ್ ತೀರ್ಪು ನೀಡಿದ್ದಾರೆ.</p>.<p>ಎಸ್.ಎನ್.ಪ್ರಭಾ ಸದ್ಯ ಬೆಂಗಳೂರು ಐಜಿಆರ್ (ಇನ್ಸ್ಪೆಕ್ಟರ್ ಜನರಲ್ ಆಫ್ ರಿಜಿಸ್ಟ್ರೇಷನ್) ಕಚೇರಿಯಲ್ಲಿದ್ದಾರೆ. ಚೆಲುವರಾಜು ಶೃಂಗೇರಿ ಉಪ ನೋಂದಣಾಧಿಕಾರಿಯಾಗಿದ್ದಾರೆ. ಲೀಲಾವತಿ ಮದ್ದೂರು ಉಪ ನೋಂದಣಾಧಿಕಾರಿ ಕಚೇರಿಯಲ್ಲಿ ಎಫ್ಡಿಎ, ಸುನಂದಾ ಬೆಂಗಳೂರು ಎಲೆಕ್ಟ್ರಾನಿಕ್ ಸಿಟಿ ಉಪ ನೋಂದಣಾಧಿಕಾರಿ ಕಚೇರಿಯಲ್ಲಿ ಎಫ್ಡಿಎ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.</p>.<p>ಸರ್ಕಾರಿ ಅಭಿಯೋಜಕ ಎಂ.ಜಿ.ಸುರೇಶ್ ಅವರು ಸರ್ಕಾರದ ಪರವಾಗಿ ವಾದ ಮಂಡಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>