ಸೋಮವಾರ ಮಧ್ಯಾಹ್ನ ಗ್ರಾಮದ ಹೊರವಲಯಲ್ಲಿರುವ ತೆಂಗಿನತೋಟದಲ್ಲಿ 13 ಕುರಿಗಳನ್ನು ಮೇಯಿಸುತ್ತಿದ್ದಾಗ ಚಿರತೆಯು ಏಕಾಏಕಿ ನುಗ್ಗಿ ಕುರಿಗಳ ಮೇಲೆ ದಾಳಿ ನಡೆಸಿದೆ. 2 ಕುರಿಗಳ ಕುತ್ತಿಗೆಯನ್ನು ಸೀಳಿ, ಇನ್ನೆರಡು ಕುರಿಗಳಿಗೆ ಹೊಟ್ಟೆಯನ್ನು ಬಗೆದು ಸಾಯಿಸಿದೆ. ಚಿರತೆ ದಾಳಿಯ ಮಾಹಿತಿ ತಿಳಿದು ಸ್ಥಳಕ್ಕೆ ಅರಣ್ಯ ಇಲಾಖೆಯ ಅಧಿಕಾರಿ ಮಂಜುನಾಥ್ ನೇತೃತ್ವದ ಸಿಬ್ಬಂದಿ ಭೇಟಿ ಪರಿಶೀಲನೆ ನಡೆಸಿ ಮರಣೋತ್ತರ ಪರೀಕ್ಷೆ ಮಾಡಿಸಿದ್ದಾರೆ.