ರೈತಹಿತರಕ್ಷಣಾ ಸಮಿತಿ ಅಧ್ಯಕ್ಷ ಜಿ.ಮಾದೇಗೌಡ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲು

ಮಂಡ್ಯ: ರೈತಹಿತರಕ್ಷಣಾ ಸಮಿತಿ ಅಧ್ಯಕ್ಷ, ಮಾಜಿ ಸಂಸದ ಜಿ.ಮಾದೇಗೌಡ ಅವರು ಅನಾರೋಗ್ಯದಿಂದ ಬಳಲುತ್ತಿದ್ದು ಬೆಂಗಳೂರಿನ ವಿಕ್ರಂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
94 ವರ್ಷ ವಯಸ್ಸಿನ ಜಿ.ಮಾದೇಗೌಡರು ಶ್ವಾಸಕೋಶ ಸಮಸ್ಯೆಯಿಂದ ಬಳಲುತ್ತಿದ್ದು ಐಸಿಯುನಲ್ಲಿ ಚಿಕಿತ್ಸೆ ಪಡೆಯತ್ತಿದ್ದಾರೆ. ಭಾನುವಾರ ಬಿಜೆಪಿ ಮುಖಂಡ ಎಸ್.ಎಂ.ಕೃಷ್ಣ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು.
ಮಾದೇಗೌಡರು ಕಾವೇರಿ ಹೋರಾಟದಲ್ಲಿ ಮುಂಚೂಣಿ ನಾಯಕರಾಗಿದ್ದರು. 1962ರಿಂದ ಕಿರುಗಾವಲು ವಿಧಾನಸಭಾ ಕ್ಷೇತ್ರದಿಂದ ಸತತ 6 ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು. ಕಿರುಗಾವಲು ಕ್ಷೇತ್ರ ಮಳವಳ್ಳಿ ಕ್ಷೇತ್ರದೊಂದಿಗೆ ಸೇರಿಕೊಂಡ ನಂತರ ಮಂಡ್ಯಕ್ಕೆ ಬಂದರು. 1989, 1995ರಲ್ಲಿ 2 ಬಾರಿ ಲೋಕಸಭಾ ಸದಸ್ಯರಾಗಿದ್ದರು. 1980–83ರವರೆಗೆ ಗುಂಡೂರಾವ್ ಸಂಪುಟದಲ್ಲಿ ಗಣಿ ಮತ್ತು ಭೂವಿಜ್ಞಾನ ಇಲಾಖೆ ಸಚಿವರಾಗಿದ್ದರು.
‘ತಂದೆ ವಯೋಸಹಜ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದು ಗುಣಮುಖರಾಗಿ ಬರುತ್ತಾರೆ ಎಂಬ ವಿಶ್ವಾಸವಿದೆ’ ಎಂದು ಮಾದೇಗೌಡರ ಪುತ್ರ, ಕಾಂಗ್ರೆಸ್ ಮುಖಂಡ ಮಧು ಮಾದೇಗೌಡ ತಿಳಿಸಿದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.