ಮಠದ ಪೀಠಾಧ್ಯಕ್ಷ ನಿರ್ಮಲಾನಂದನಾಥ ಸ್ವಾಮೀಜಿ ಅಡ್ಡಪಲ್ಲಕ್ಕಿಯಲ್ಲಿ ಬಂದು ಪೂಜೆ ಸಲ್ಲಿಸಿದ ನಂತರ ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಿ ರಥೋತ್ಸವಕ್ಕೆ ಚಾಲನೆ ನೀಡಿದರು. ಬ್ರಾಹ್ಮಿ ಮುಹೂರ್ತದಲ್ಲಿ ಸ್ವಾಮೀಜಿಯ ಅಡ್ಡಪಲ್ಲಕ್ಕಿ ಉತ್ಸವವು ರಥದ ಬೀದಿಯಲ್ಲಿ ಮುಂದೆ ಸಾಗುತ್ತಿದ್ದಂತೆ, ಭಕ್ತರು ಗಂಗಾಧರೇಶ್ವರ ಸ್ವಾಮಿ ರಥವನ್ನು ರಥದ ಬೀದಿಯಲ್ಲಿ ಎಳೆಯುತ್ತಾ ಮುಂದೆ ಸಾಗಿದರು.