ಸ್ಫೋಟಕ ವಸ್ತುಗಳ ಪತ್ತೆಗಾಗಿ ಕಳೆದ ಮೂರು ದಿನಗಳ ಕಾಲ ಸ್ಫೋಟಕ ಮತ್ತು ನಿಷ್ಕ್ರೀಯ ದಳದ ಅಧಿಕಾರಿಗಳ ತಂಡವು ಶೋಧ ನಡೆಸಿ, ಸ್ಫೋಟಕ ವಸ್ತುಗಳನ್ನು ಪತ್ತೆ ಹಚ್ಚಿ ಕಾರ್ಯಾಚರಣೆಯನ್ನು ಮುಕ್ತಾಯಗೊಳಿಸಿದ್ದರು. ಬೇಬಿಬೆಟ್ಟ ಗಣಿಗಾರಿಕೆ ಪ್ರದೇಶದ ಚಿನಕುರಳಿ, ಹೊನಗಾನಹಳ್ಳಿ, ರಾಗಿಮುದ್ದನಹಳ್ಳಿ, ಶಿಂಡಭೋಗನಹಳ್ಳಿ ವ್ಯಾಪ್ತಿಯ ಕ್ವಾರಿ ಮತ್ತು ಕ್ರಷರ್ಗಳಲ್ಲಿ ನಿರಂತರ ಶೋಧ ಕಾರ್ಯ ನಡೆಸಿದ್ದರು. ಆದರೆ, ಶೋಧ ಕಾರ್ಯದಲ್ಲಿ ಮೊದಲನೇ ದಿನ ಹಲವು ಸ್ಫೋಟಕಗಳು ಪತ್ತೆಯಾಗಿದ್ದವು. ಎರಡನೇ ದಿನ ಮತ್ತು ಮೂರನೇ ದಿನ ಸ್ಫೋಟಕಗಳು ನಿರೀಕ್ಷಿತ ಮಟ್ಟದಲ್ಲಿ ಪತ್ತೆಯಾಗಿರಲಿಲ್ಲ. ಹೀಗಾಗಿ ಬೆಂಗಳೂರು, ಮೈಸೂರು, ಹಾಸನ ಮತ್ತು ಮಂಡ್ಯದಿಂದ ಬಂದಿದ್ದ ಸ್ಫೋಟಕ ಪತ್ತೆ ದಳ ವಾಪಾಸಾಗಿತ್ತು.