‘ಹಿಂದೆಯೂ ಅವರು ಹಲವು ಬಾರಿ ಮಹಿಳೆಯರ ಬಗ್ಗೆ ಅಗೌರವದಿಂದ ಮಾತನಾಡಿದ್ದಾರೆ. ಸುಮಲತಾ ವಿರುದ್ಧ ಕೆಟ್ಟದಾಗಿ ಮಾತನಾಡಿದ ಕಾರಣದಿಂದ ಅವರ ಪುತ್ರ ಸೋಲಬೇಕಾಯಿತು. ಬೆಳಗಾವಿಯ ರೈತ ಮಹಿಳೆಯನ್ನು ‘ಇಷ್ಟು ದಿನ ಎಲ್ಲಿ ಮಲಗಿದ್ದೆಯಮ್ಮ’ ಎಂದು ಪ್ರಶ್ನಿಸಿದ್ದರು. ಇದು ಅವರ ಮನಸ್ಥಿತಿಯನ್ನು ತೋರಿಸುತ್ತದೆ. ಕೂಡಲೇ ಅವರು ಕ್ಷಮೆ ಯಾಚಿಸಬೇಕು’ ಎಂದು ಒತ್ತಾಯಿಸಿದರು.