ಗಾರ್ಮೆಂಟ್ಸ್ ಅಂಡ್ ಟೆಕ್ಸ್ಟೈಲ್ಸ್ ಯೂನಿಯನ್ ವರ್ಕರ್ಸ್ ಸಂಘಟನಾ ಕಾರ್ಯದರ್ಶಿ ಎಲ್.ಎಸ್. ನವೀನ್ ಕುಮಾರ್ ಮಾತನಾಡಿ, ‘ಆಡಳಿತ ಮಂಡಳಿ ಪ್ರತಿನಿಧಿಗಳು ರಾಜೀನಾಮೆ ಕೊಡುವಂತೆ ಕಾರ್ಮಿಕರ ಮೇಲೆ ಒತ್ತಡ ಹೇರುತ್ತಿದ್ದಾರೆ. 9 ದಿನಗಳಿಂದ ಧರಣಿ ನಡೆಸುತ್ತಿದ್ದ ಮೂವರು ರಾಜೀನಾಮೆ ನೀಡಿದ್ದಾರೆ. ಉಳಿದ ಕಾರ್ಮಿಕರು ಇಂತಹ ತೀರ್ಮಾನ ಕೈಗೊಳ್ಳಬಾರದು. ನ್ಯಾಯ ಸಿಗುವವರೆಗೆ ಹೋರಾಟ ನಿಲ್ಲಿಸಬಾರದು’ ಎಂದರು.