<p><strong>ಶ್ರೀರಂಗಪಟ್ಟಣ:</strong> ‘ಪಟ್ಟಣದ ಗೋಕುಲ್ ದಾಸ್ ಗಾರ್ಮೆಂಟ್ಸ್ ಕಾರ್ಖಾನೆ ಮಾಲೀಕರು ಕ್ಷೇತ್ರದ ಪ್ರಮುಖ ರಾಜಕಾರಣಿಗಳಿಗೆ ಹಣ ಕೊಟ್ಟು ಬುಕ್ ಮಾಡಿಕೊಂಡಿದ್ದು, ಕಾರ್ಮಿಕರ ಪರ ದನಿ ಎತ್ತದಂತೆ ಮಾಡಿದ್ದಾರೆ’ ಎಂದು ಶಾಸಕ ರವೀಂದ್ರ ಶ್ರೀಕಂಠಯ್ಯ ಗಂಭೀರ ಆರೋಪ ಮಾಡಿದರು.</p>.<p>ಪಟ್ಟಣದಲ್ಲಿ ಗೋಕುಲ್ದಾಸ್ ಗಾರ್ಮೆಂಟ್ಸ್ ಕಾರ್ಖಾನೆ ಕಾರ್ಮಿಕರು ಧರಣಿ ನಡೆಸುತ್ತಿರುವ ಸ್ಥಳಕ್ಕೆ ಮಂಗಳವಾರ ಭೇಟಿ ನೀಡಿದ ಅವರು ಮಾತನಾಡಿದರು.</p>.<p>‘ರಾಜಕಾರಣಿಗಳಿಗೆ ಆಮಿಷ ಒಡ್ಡಿರುವ ಬಗ್ಗೆ ನನ್ನ ಬಳಿ ಮಾಹಿತಿ ಇದೆ. ಎಲ್ಲ ವಿದ್ಯಮಾನಗಳನ್ನು ಗಮನಿ ಸುತ್ತಿದ್ದೇನೆ. ಇನ್ನು ಎರಡು ದಿನಗಳಲ್ಲಿ ಎಲ್ಲವನ್ನೂ ಬಯಲು ಮಾಡುತ್ತೇನೆ’ ಎಂದರು.</p>.<p>‘ಸ್ಥಳೀಯ ರಾಜಕಾರಣಿಗಳ ಜತೆ ಒಳಒಪ್ಪಂದ ಮಾಡಿಕೊಂಡು ಗಾರ್ಮೆಂಟ್ಸ್ ಕಾರ್ಖಾನೆ ಮುಚ್ಚಲು ಎಲ್ಲ ರೀತಿಯ ಸಿದ್ಧತೆ ನಡೆದಿದೆ. ಅದಕ್ಕೆ ಆಸ್ಪದ ನೀಡುವುದಿಲ್ಲ. ಸರ್ಕಾರ ಏನು ಮಾಡುತ್ತದೆ ಎಂಬುದನ್ನು ನೋಡಿಕೊಂಡು ಮುಂದಿನ ತೀರ್ಮಾನ ಕೈಗೊಳ್ಳುತ್ತೇನೆ. ನೀತಿಗೆಟ್ಟ ವ್ಯವಸ್ಥೆಯ ವಿರುದ್ಧ ಜನರ ಜತೆಗೂಡಿ ಹೋರಾಟಕ್ಕೆ ಇಳಿಯಲಿದ್ದೇನೆ. ಕಾರ್ಮಿಕರು ಎದೆಗುಂದದೆ ಹೋರಾಟ ಮುಂದುವರೆಸಬೇಕು’ ಎಂದರು.</p>.<p>ಗಾರ್ಮೆಂಟ್ಸ್ ಅಂಡ್ ಟೆಕ್ಸ್ಟೈಲ್ಸ್ ಯೂನಿಯನ್ ವರ್ಕರ್ಸ್ ಸಂಘಟನಾ ಕಾರ್ಯದರ್ಶಿ ಎಲ್.ಎಸ್. ನವೀನ್ ಕುಮಾರ್ ಮಾತನಾಡಿ, ‘ಆಡಳಿತ ಮಂಡಳಿ ಪ್ರತಿನಿಧಿಗಳು ರಾಜೀನಾಮೆ ಕೊಡುವಂತೆ ಕಾರ್ಮಿಕರ ಮೇಲೆ ಒತ್ತಡ ಹೇರುತ್ತಿದ್ದಾರೆ. 9 ದಿನಗಳಿಂದ ಧರಣಿ ನಡೆಸುತ್ತಿದ್ದ ಮೂವರು ರಾಜೀನಾಮೆ ನೀಡಿದ್ದಾರೆ. ಉಳಿದ ಕಾರ್ಮಿಕರು ಇಂತಹ ತೀರ್ಮಾನ ಕೈಗೊಳ್ಳಬಾರದು. ನ್ಯಾಯ ಸಿಗುವವರೆಗೆ ಹೋರಾಟ ನಿಲ್ಲಿಸಬಾರದು’ ಎಂದರು.</p>.<p><strong>ಶಾಸಕರ ಆಕ್ರೋಶ</strong><br />ಆಡಳಿತ ಮಂಡಳಿಯ ಪ್ರತಿನಿಧಿಗಳನ್ನು ಧರಣಿ ಸ್ಥಳಕ್ಕೆ ಕರೆಸಿದ ರವೀಂದ್ರ ಶ್ರೀಕಂಠಯ್ಯ, ಅವರ ವಿರುದ್ಧ ಕಿಡಿಕಾರಿದರು. ‘ಕಾರ್ಮಿಕರನ್ನು ಹೆದರಿಸುವುದೇಕೆ? ನೀವು ಗೂಂಡಾಗಳಾ...’ ಎಂದು ಗದರಿದರು.</p>.<p>‘ಬೇರೆ ರಾಜಕಾರಣಿಗಳಿಗೆ ದುಡ್ಡಿನ ಆಮಿಷ ಒಡ್ಡುತ್ತೀರಿ. ನನ್ನ ಬಳಿ ನಿಮ್ಮ ಆಟ ನಡೆಯುವುದಿಲ್ಲ. ನೀವು ಏನೇನು ಮಾಡಿದ್ದೀರಿ ಎಲ್ಲವೂ ರೆಕಾರ್ಡ್ ಆಗಿದೆ. ಕಾರ್ಮಿಕರಿಗೆ ರಾಜೀನಾಮೆ ಕೊಡಿ ಎಂದು ಮೇಲಿಂದ ಮೇಲೆ ಒತ್ತಡ ಹೇರುವುದು ಸರಿಯಲ್ಲ’ ಎಂದು ಎಚ್ಚರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶ್ರೀರಂಗಪಟ್ಟಣ:</strong> ‘ಪಟ್ಟಣದ ಗೋಕುಲ್ ದಾಸ್ ಗಾರ್ಮೆಂಟ್ಸ್ ಕಾರ್ಖಾನೆ ಮಾಲೀಕರು ಕ್ಷೇತ್ರದ ಪ್ರಮುಖ ರಾಜಕಾರಣಿಗಳಿಗೆ ಹಣ ಕೊಟ್ಟು ಬುಕ್ ಮಾಡಿಕೊಂಡಿದ್ದು, ಕಾರ್ಮಿಕರ ಪರ ದನಿ ಎತ್ತದಂತೆ ಮಾಡಿದ್ದಾರೆ’ ಎಂದು ಶಾಸಕ ರವೀಂದ್ರ ಶ್ರೀಕಂಠಯ್ಯ ಗಂಭೀರ ಆರೋಪ ಮಾಡಿದರು.</p>.<p>ಪಟ್ಟಣದಲ್ಲಿ ಗೋಕುಲ್ದಾಸ್ ಗಾರ್ಮೆಂಟ್ಸ್ ಕಾರ್ಖಾನೆ ಕಾರ್ಮಿಕರು ಧರಣಿ ನಡೆಸುತ್ತಿರುವ ಸ್ಥಳಕ್ಕೆ ಮಂಗಳವಾರ ಭೇಟಿ ನೀಡಿದ ಅವರು ಮಾತನಾಡಿದರು.</p>.<p>‘ರಾಜಕಾರಣಿಗಳಿಗೆ ಆಮಿಷ ಒಡ್ಡಿರುವ ಬಗ್ಗೆ ನನ್ನ ಬಳಿ ಮಾಹಿತಿ ಇದೆ. ಎಲ್ಲ ವಿದ್ಯಮಾನಗಳನ್ನು ಗಮನಿ ಸುತ್ತಿದ್ದೇನೆ. ಇನ್ನು ಎರಡು ದಿನಗಳಲ್ಲಿ ಎಲ್ಲವನ್ನೂ ಬಯಲು ಮಾಡುತ್ತೇನೆ’ ಎಂದರು.</p>.<p>‘ಸ್ಥಳೀಯ ರಾಜಕಾರಣಿಗಳ ಜತೆ ಒಳಒಪ್ಪಂದ ಮಾಡಿಕೊಂಡು ಗಾರ್ಮೆಂಟ್ಸ್ ಕಾರ್ಖಾನೆ ಮುಚ್ಚಲು ಎಲ್ಲ ರೀತಿಯ ಸಿದ್ಧತೆ ನಡೆದಿದೆ. ಅದಕ್ಕೆ ಆಸ್ಪದ ನೀಡುವುದಿಲ್ಲ. ಸರ್ಕಾರ ಏನು ಮಾಡುತ್ತದೆ ಎಂಬುದನ್ನು ನೋಡಿಕೊಂಡು ಮುಂದಿನ ತೀರ್ಮಾನ ಕೈಗೊಳ್ಳುತ್ತೇನೆ. ನೀತಿಗೆಟ್ಟ ವ್ಯವಸ್ಥೆಯ ವಿರುದ್ಧ ಜನರ ಜತೆಗೂಡಿ ಹೋರಾಟಕ್ಕೆ ಇಳಿಯಲಿದ್ದೇನೆ. ಕಾರ್ಮಿಕರು ಎದೆಗುಂದದೆ ಹೋರಾಟ ಮುಂದುವರೆಸಬೇಕು’ ಎಂದರು.</p>.<p>ಗಾರ್ಮೆಂಟ್ಸ್ ಅಂಡ್ ಟೆಕ್ಸ್ಟೈಲ್ಸ್ ಯೂನಿಯನ್ ವರ್ಕರ್ಸ್ ಸಂಘಟನಾ ಕಾರ್ಯದರ್ಶಿ ಎಲ್.ಎಸ್. ನವೀನ್ ಕುಮಾರ್ ಮಾತನಾಡಿ, ‘ಆಡಳಿತ ಮಂಡಳಿ ಪ್ರತಿನಿಧಿಗಳು ರಾಜೀನಾಮೆ ಕೊಡುವಂತೆ ಕಾರ್ಮಿಕರ ಮೇಲೆ ಒತ್ತಡ ಹೇರುತ್ತಿದ್ದಾರೆ. 9 ದಿನಗಳಿಂದ ಧರಣಿ ನಡೆಸುತ್ತಿದ್ದ ಮೂವರು ರಾಜೀನಾಮೆ ನೀಡಿದ್ದಾರೆ. ಉಳಿದ ಕಾರ್ಮಿಕರು ಇಂತಹ ತೀರ್ಮಾನ ಕೈಗೊಳ್ಳಬಾರದು. ನ್ಯಾಯ ಸಿಗುವವರೆಗೆ ಹೋರಾಟ ನಿಲ್ಲಿಸಬಾರದು’ ಎಂದರು.</p>.<p><strong>ಶಾಸಕರ ಆಕ್ರೋಶ</strong><br />ಆಡಳಿತ ಮಂಡಳಿಯ ಪ್ರತಿನಿಧಿಗಳನ್ನು ಧರಣಿ ಸ್ಥಳಕ್ಕೆ ಕರೆಸಿದ ರವೀಂದ್ರ ಶ್ರೀಕಂಠಯ್ಯ, ಅವರ ವಿರುದ್ಧ ಕಿಡಿಕಾರಿದರು. ‘ಕಾರ್ಮಿಕರನ್ನು ಹೆದರಿಸುವುದೇಕೆ? ನೀವು ಗೂಂಡಾಗಳಾ...’ ಎಂದು ಗದರಿದರು.</p>.<p>‘ಬೇರೆ ರಾಜಕಾರಣಿಗಳಿಗೆ ದುಡ್ಡಿನ ಆಮಿಷ ಒಡ್ಡುತ್ತೀರಿ. ನನ್ನ ಬಳಿ ನಿಮ್ಮ ಆಟ ನಡೆಯುವುದಿಲ್ಲ. ನೀವು ಏನೇನು ಮಾಡಿದ್ದೀರಿ ಎಲ್ಲವೂ ರೆಕಾರ್ಡ್ ಆಗಿದೆ. ಕಾರ್ಮಿಕರಿಗೆ ರಾಜೀನಾಮೆ ಕೊಡಿ ಎಂದು ಮೇಲಿಂದ ಮೇಲೆ ಒತ್ತಡ ಹೇರುವುದು ಸರಿಯಲ್ಲ’ ಎಂದು ಎಚ್ಚರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>