<p><strong>ಮಳವಳ್ಳಿ</strong>: ತಾಲ್ಲೂಕಿನ ಕಿರುಗಾವಲು ಗ್ರಾಮದಲ್ಲಿ ನಡೆದಿದ್ದ ಚಿನ್ನದಂಗಡಿ ದರೋಡೆ ಮತ್ತು ಹೋಟೆಲ್ ಮಾಲೀಕನ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಇ.ಎಸ್.ಕಿರಣ್ (25) ಎಂಬಾತನ ಮೇಲೆ ಹಲಗೂರು ಸಿಪಿಐ ಬಿ.ಎಸ್.ಶ್ರೀಧರ್ ನೇತೃತ್ವದ ತಂಡ ಗುರುವಾರ ಮಧ್ಯರಾತ್ರಿ ಗುಂಡು ಹಾರಿಸಿ ಬಂಧಿಸಿದೆ.</p>.<p>ಕಾರ್ಯಾಚರಣೆಯಲ್ಲಿ ಕಿರುಗಾವಲು ಪೊಲೀಸ್ ಠಾಣೆಯ ಕಾನ್ಸ್ಟೆಬಲ್ ಎಚ್.ವಿ.ಶ್ರೀನಿವಾಸ್ ಗಾಯಗೊಂಡಿದ್ದಾರೆ. ಗಾಯಾಳು ಆರೋಪಿ ಹಾಗೂ ಶ್ರೀನಿವಾಸ್ ಅವರಿಗೆ ಮಂಡ್ಯದ ಮಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. </p>.<p>ಆ.17ರಂದು ಬೆಳಗಿನ ಜಾವ ಕಿರುಗಾವಲು ಗ್ರಾಮದ ಮುಖ್ಯರಸ್ತೆಯ ಮಹಾಲಕ್ಷ್ಮಿ ಜ್ಯುವೆಲರ್ಸ್ ಅಂಡ್ ಬ್ಯಾಂಕರ್ಸ್ನ ಶಟರ್ ಅನ್ನು ಗ್ಯಾಸ್ ಕಟರ್ನಿಂದ ತುಂಡರಿಸಿದ ಐವರ ದರೋಡೆಕೋರರ ತಂಡ 110 ಗ್ರಾಂ ಚಿನ್ನಾಭರಣ ಹಾಗೂ 2 ಕೆ.ಜಿ. ಬೆಳ್ಳಿಯ ವಸ್ತುಗಳನ್ನು ದೋಚಿತ್ತು. ಕೃತ್ಯವನ್ನು ನೋಡಿದ ಪಕ್ಕದ ಮಹದೇಶ್ವರ ಹೋಟೆಲ್ ಮಾಲೀಕ ಮಾದಪ್ಪ (67) ಅವರನ್ನು ದರೋಡೆಕೋರರ ತಂಡ ಹಲ್ಲೆ ನಡೆಸಿ, ಕತ್ತು ಹಿಸುಕಿ ಕೊಲೆ ಮಾಡಿತ್ತು.</p>.<p>ಪ್ರಕರಣ ದಾಖಲಿಸಿಕೊಂಡಿದ್ದ ಕಿರುಗಾವಲು ಪೊಲೀಸರು ಹಲಗೂರು ಸಿಪಿಐ ಬಿ.ಎಸ್.ಶ್ರೀಧರ್ ಹಾಗೂ ಪಿಎಸ್ಐ ಡಿ.ರವಿಕುಮಾರ್ ನೇತೃತ್ವದಲ್ಲಿ ಆರೋಪಿಗಳಾದ ಕೊತ್ತತ್ತಿ ಗ್ರಾಮದ ಕೆ.ಎಂ.ಆನಂದ್ (30), ಈಚಗೆರೆ ಗ್ರಾಮದ ಕೆ.ಶರತ್ ಕುಮಾರ್ (29), ಹಟ್ಣ ಗ್ರಾಮದ ಎಚ್.ಟಿ.ಶ್ರೀನಿವಾಸ (22), ಕೀಲಾರ ಗ್ರಾಮದ ಕೃಷ್ಣಾಚಾರಿ(40) ಅನ್ನು ಬಂಧಿಸಿದ್ದರು.</p>.<p>ಪ್ರಕರಣದ ಪ್ರಮುಖ ಆರೋಪಿ ಈಚಗೆರೆಯ ಇ.ಎಸ್.ಕಿರಣ್ ತಾಲ್ಲೂಕಿನ ಭೀಮನಹಳ್ಳಿ ಗ್ರಾಮದಲ್ಲಿ ತಲೆಮರೆಸಿಕೊಂಡಿದ್ದ ಬಗ್ಗೆ ಮಾಹಿತಿ ಪಡೆದ ತಂಡ ಗುರುವಾರ ರಾತ್ರಿ ಪೊಲೀಸರು ಬಂಧಿಸಲು ತೆರಳಿದ್ದರು. ಈ ವೇಳೆ ಕಿರಣ್ ಪೊಲೀಸ್ ಕಾನ್ಸ್ಟೆಬಲ್ ಎಚ್.ವಿ.ಶ್ರೀನಿವಾಸ್ ಅವರ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದಾಗ ಸಿಪಿಐ ಬಿ.ಎಸ್.ಶ್ರೀಧರ್ ಆರೋಪಿ ಕಾಲಿಗೆ ಗುಂಡು ಹಾರಿಸಿ ಬಂಧಿಸಿದ್ದಾರೆ.</p>.<p>ಮಂಡ್ಯದ ಮಿಮ್ಸ್ ಆಸ್ಪತ್ರೆಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಳವಳ್ಳಿ</strong>: ತಾಲ್ಲೂಕಿನ ಕಿರುಗಾವಲು ಗ್ರಾಮದಲ್ಲಿ ನಡೆದಿದ್ದ ಚಿನ್ನದಂಗಡಿ ದರೋಡೆ ಮತ್ತು ಹೋಟೆಲ್ ಮಾಲೀಕನ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಇ.ಎಸ್.ಕಿರಣ್ (25) ಎಂಬಾತನ ಮೇಲೆ ಹಲಗೂರು ಸಿಪಿಐ ಬಿ.ಎಸ್.ಶ್ರೀಧರ್ ನೇತೃತ್ವದ ತಂಡ ಗುರುವಾರ ಮಧ್ಯರಾತ್ರಿ ಗುಂಡು ಹಾರಿಸಿ ಬಂಧಿಸಿದೆ.</p>.<p>ಕಾರ್ಯಾಚರಣೆಯಲ್ಲಿ ಕಿರುಗಾವಲು ಪೊಲೀಸ್ ಠಾಣೆಯ ಕಾನ್ಸ್ಟೆಬಲ್ ಎಚ್.ವಿ.ಶ್ರೀನಿವಾಸ್ ಗಾಯಗೊಂಡಿದ್ದಾರೆ. ಗಾಯಾಳು ಆರೋಪಿ ಹಾಗೂ ಶ್ರೀನಿವಾಸ್ ಅವರಿಗೆ ಮಂಡ್ಯದ ಮಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. </p>.<p>ಆ.17ರಂದು ಬೆಳಗಿನ ಜಾವ ಕಿರುಗಾವಲು ಗ್ರಾಮದ ಮುಖ್ಯರಸ್ತೆಯ ಮಹಾಲಕ್ಷ್ಮಿ ಜ್ಯುವೆಲರ್ಸ್ ಅಂಡ್ ಬ್ಯಾಂಕರ್ಸ್ನ ಶಟರ್ ಅನ್ನು ಗ್ಯಾಸ್ ಕಟರ್ನಿಂದ ತುಂಡರಿಸಿದ ಐವರ ದರೋಡೆಕೋರರ ತಂಡ 110 ಗ್ರಾಂ ಚಿನ್ನಾಭರಣ ಹಾಗೂ 2 ಕೆ.ಜಿ. ಬೆಳ್ಳಿಯ ವಸ್ತುಗಳನ್ನು ದೋಚಿತ್ತು. ಕೃತ್ಯವನ್ನು ನೋಡಿದ ಪಕ್ಕದ ಮಹದೇಶ್ವರ ಹೋಟೆಲ್ ಮಾಲೀಕ ಮಾದಪ್ಪ (67) ಅವರನ್ನು ದರೋಡೆಕೋರರ ತಂಡ ಹಲ್ಲೆ ನಡೆಸಿ, ಕತ್ತು ಹಿಸುಕಿ ಕೊಲೆ ಮಾಡಿತ್ತು.</p>.<p>ಪ್ರಕರಣ ದಾಖಲಿಸಿಕೊಂಡಿದ್ದ ಕಿರುಗಾವಲು ಪೊಲೀಸರು ಹಲಗೂರು ಸಿಪಿಐ ಬಿ.ಎಸ್.ಶ್ರೀಧರ್ ಹಾಗೂ ಪಿಎಸ್ಐ ಡಿ.ರವಿಕುಮಾರ್ ನೇತೃತ್ವದಲ್ಲಿ ಆರೋಪಿಗಳಾದ ಕೊತ್ತತ್ತಿ ಗ್ರಾಮದ ಕೆ.ಎಂ.ಆನಂದ್ (30), ಈಚಗೆರೆ ಗ್ರಾಮದ ಕೆ.ಶರತ್ ಕುಮಾರ್ (29), ಹಟ್ಣ ಗ್ರಾಮದ ಎಚ್.ಟಿ.ಶ್ರೀನಿವಾಸ (22), ಕೀಲಾರ ಗ್ರಾಮದ ಕೃಷ್ಣಾಚಾರಿ(40) ಅನ್ನು ಬಂಧಿಸಿದ್ದರು.</p>.<p>ಪ್ರಕರಣದ ಪ್ರಮುಖ ಆರೋಪಿ ಈಚಗೆರೆಯ ಇ.ಎಸ್.ಕಿರಣ್ ತಾಲ್ಲೂಕಿನ ಭೀಮನಹಳ್ಳಿ ಗ್ರಾಮದಲ್ಲಿ ತಲೆಮರೆಸಿಕೊಂಡಿದ್ದ ಬಗ್ಗೆ ಮಾಹಿತಿ ಪಡೆದ ತಂಡ ಗುರುವಾರ ರಾತ್ರಿ ಪೊಲೀಸರು ಬಂಧಿಸಲು ತೆರಳಿದ್ದರು. ಈ ವೇಳೆ ಕಿರಣ್ ಪೊಲೀಸ್ ಕಾನ್ಸ್ಟೆಬಲ್ ಎಚ್.ವಿ.ಶ್ರೀನಿವಾಸ್ ಅವರ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದಾಗ ಸಿಪಿಐ ಬಿ.ಎಸ್.ಶ್ರೀಧರ್ ಆರೋಪಿ ಕಾಲಿಗೆ ಗುಂಡು ಹಾರಿಸಿ ಬಂಧಿಸಿದ್ದಾರೆ.</p>.<p>ಮಂಡ್ಯದ ಮಿಮ್ಸ್ ಆಸ್ಪತ್ರೆಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>