ಆಡಳಿತಾಧಿಕಾರಿ ಡಾ.ಎಂ.ಡಿ.ಸಂಜಯ್ ನೇತೃತ್ವದಲ್ಲಿ ಮಹಿಳೆಯ ಹೊಟ್ಟೆಯಲ್ಲಿನ ಗೆಡ್ಡೆಯ ಪರೀಕ್ಷೆ ನಡೆಸಿ ಶಸ್ತ್ರಚಿಕಿತ್ಸೆ ನಿರ್ಧರಿಸಿದರು. ಮಂಗಳವಾರ ಮಧ್ಯಾಹ್ನ ಸತತ ಎರಡು ಗಂಟೆಗಳ ಕಾಲ ಶಸ್ತ್ರಚಿಕಿತ್ಸೆ ತಜ್ಞ ಡಾ.ಮುರಳೀಧರ್, ಪ್ರಸೂತಿ ತಜ್ಞೆ ಡಾ.ರೇಣುಕಾ ದೇವಿ, ಡಾ.ಜ್ಯೋತಿ, ಅರವಳಿಕೆ ತಜ್ಞ ಡಾ.ಪ್ರಶಾಂತ್, ಡಾ.ಶಿಲ್ಪಾ ನೇತೃತ್ವದ ತಂಡ ಶಸ್ತ್ರಚಿಕಿತ್ಸೆ ನಡೆಸಿ 6 ಕೆ.ಜಿ ತೂಕದ ಗರ್ಭಕೋಶದ ಗಡ್ಡೆಯನ್ನು ಹೊರತೆಗೆದಿದ್ದಾರೆ. ದಾದಿಯರಾದ ವಿದ್ಯಾ, ಸುಂದ್ರರಮ್ಮ ಇದ್ದರು.