<p><strong>ಮಂಡ್ಯ</strong>: ‘ಸರ್ಕಾರಿ ಸ್ವಾಮ್ಯದ ಮೈಸೂರು ಸಕ್ಕರೆ ಕಾರ್ಖಾನೆಯನ್ನು (ಮೈಷುಗರ್) ಖಾಸಗೀಕರಣಗೊಳಿಸುವ ಉದ್ದೇಶ ನಮ್ಮ ಸರ್ಕಾರಕ್ಕಿಲ್ಲ. ಹೀಗಾಗಿ ರೈತ ಬಾಂಧವರು ಆತಂಕ ಪಡುವ ಅಗತ್ಯವಿಲ್ಲ’ ಎಂದು ಮೈಷುಗರ್ ಅಧ್ಯಕ್ಷ ಸಿ.ಡಿ. ಗಂಗಾಧರ್ ಸ್ಪಷ್ಟನೆ ನೀಡಿದರು. </p><p>ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ‘ತನಿಖೆ ಹೆಸರಿನಲ್ಲಿ ಖಾಸಗೀಕರಣದ ಹುನ್ನಾರ ನಡೆಯುತ್ತಿದೆ’ ಎಂದು ರೈತ ಹೋರಾಟಗಾರ್ತಿ ಸುನಂದಾ ಜಯರಾಂ ಆರೋಪಿಸಿದ್ದರು. ಇದು ಸತ್ಯಕ್ಕೆ ದೂರವಾದುದು. ನಮ್ಮ ಸರ್ಕಾರ ಬಂದ ನಂತರ ಮೈಷುಗರ್ ಅಭಿವೃದ್ಧಿಗೆ ₹113 ಕೋಟಿ ಆರ್ಥಿಕ ನೆರವು ನೀಡಿ, ಶಕ್ತಿ ತುಂಬಿದೆ ಎಂದರು. </p><p>2026–27ನೇ ಸಾಲಿನ ಹಂಗಾಮಿಗೆ ಈಗಾಗಲೇ ಬಾಯ್ಲಿಂಗ್ ಹೌಸ್, ಬಾಯ್ಲರ್ ದುರಸ್ತಿ, ಕಾಕಂಬಿ ಟ್ಯಾಂಕ್ ನಿರ್ಮಾಣಕ್ಕೆ ಸುಮಾರು ₹74 ಕೋಟಿ ಅಂದಾಜು ಪಟ್ಟಿಯನ್ನು ಸರ್ಕಾರದ ಅನುಮೋದನೆ ಹಂತದಲ್ಲಿದೆ. ಸಿಎಂ ಮತ್ತು ಜಿಲ್ಲಾ ಉಸ್ತುವಾರಿ ಸಚಿವರ ಸಮರ್ಥವಾಗಿ ಕಾರ್ಖಾನೆ ನಡೆಸಲು ಸಹಕಾರ ನೀಡುತ್ತಿದ್ದಾರೆ ಎಂದು ಹೇಳಿದರು. </p><p>2 ವರ್ಷಗಳಿಂದ ಮೈಷುಗರ್ ಕಾರ್ಖಾನೆಯನ್ನು ಸ್ವಾವಲಂಬಿಯಾಗುವ ನಿಟ್ಟಿನಲ್ಲಿ ದಾಪುಗಾಲು ಇಡುತ್ತಿದ್ದೇವೆ. ಸ್ವಂತ ಸಾಮರ್ಥ್ಯದಿಂದ ಕೋಜನ್ ಪ್ರಾರಂಭಿಸಿ ₹16 ಕೋಟಿ ಮೊತ್ತದ ವಿದ್ಯುತ್ ಉತ್ಪಾದನೆ ಮಾಡಲಾಗಿದ್ದು, ಈ ಹಿಂದೆ ನನೆಗುದಿಗೆ ಬಿದ್ದಿರುವ ₹270 ಕೋಟಿಯನ್ನು ಮೈಷುಗರ್ಗೆ ನೀಡಿ ಆರ್ಥಿಕ ಶಕ್ತಿ ತುಂಬಲಾಗಿದೆ ಎಂದರು. </p><p><strong>ತನಿಖೆಗೆ ಸಹಕಾರ</strong></p><p>ಮೈಷುಗರ್ನಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರ ಕುರಿತ ತನಿಖೆಗೆ ಸಂಪೂರ್ಣ ಸಹಕಾರ ನೀಡುತ್ತೇವೆ. ನಾವು ಮತ್ತು ಎಂ.ಡಿ. ತನಿಖೆಯ ಭಾಗವಾಗಿರದೇ ಹೊರಗಿರುತ್ತೇವೆ. ತನಿಖಾ ತಂಡದಲ್ಲಿ ಮೈಷುಗರ್ ವ್ಯಾಪ್ತಿಯ ರೈತ ಪ್ರತಿನಿಧಿ ಇರಬೇಕು ಎಂಬ ಬೇಡಿಕೆ ಬಂದಿದೆ. ಈ ಬಗ್ಗೆ ಕೂಡಲೇ ಸರ್ಕಾರಕ್ಕೆ ಪತ್ರ ಬರೆಯುತ್ತೇನೆ ಎಂದು ಹೇಳಿದರು. </p><p>ಗೋಷ್ಠಿಯಲ್ಲಿ ಜಿಲ್ಲಾ ಕಾಂಗ್ರೆಸ್ ಕಾರ್ಯಾಧ್ಯಕ್ಷ ಎಂ.ಎಸ್. ಚಿದಂಬರ್, ಮುಖಂಡರಾದ ಸುಂಡಹಳ್ಳಿ ಮಂಜುನಾಥ್, ಕೆ.ಎನ್.ನಾಗರಾಜು, ಕಿರಣ್ಕುಮಾರ್, ದೀಪಕ್, ಸಿ.ಎಂ. ದ್ಯಾವಪ್ಪ, ಚಂದಗಾಲು ವಿಜಯಕುಮಾರ್ ಹಾಜರಿದ್ದರು.</p>.<p><strong>₹127 ಕೋಟಿ ವಸೂಲಾತಿಗೆ ಕ್ರಮ</strong></p><p>ನಾಗರಾಜಪ್ಪ ಅವಧಿಯಲ್ಲಿ ನಡೆದಿರುವ ಭ್ರಷ್ಟಾಚಾರದಿಂದ ₹127 ಕೋಟಿ ನಷ್ಟವಾಗಿದ್ದು, ಅದರ ವಸೂಲಾತಿಗೆ ಈಗಾಗಲೇ ವ್ಯವಸ್ಥಾಪಕ ನಿರ್ದೇಶಕರು ಜಿಲ್ಲಾಧಿಕಾರಿಗೆ ಪತ್ರ ಬರೆದಿದ್ದಾರೆ. ಸರ್ಕಾರದ ಆದೇಶ ಹೊರಡಿಸಲು ಕಾರ್ಯದರ್ಶಿಗೆ ಈಗಾಗಲೇ ಮನವಿ ಮಾಡಲಾಗಿದೆ ಎಂದು ಮೈಷುಗರ್ ಅಧ್ಯಕ್ಷ ಸಿ.ಡಿ.ಗಂಗಾಧರ್ ಪ್ರಶ್ನೆಯೊಂದಕ್ಕೆ ಉತ್ತರಿಸಿದರು. </p><p>2026–27ನೇ ಸಾಲಿಗೆ 5.80 ಲಕ್ಷ ಟನ್ ಕಬ್ಬು ರೈತರಿಂದ ಒಪ್ಪಂದವಾಗಿದೆ. ಆರ್.ಬಿ. ಟೆಕ್ ಕಂಪನಿಯನ್ನು ಹೊರಗಿಟ್ಟು, ಟೆಂಡರ್ ಕರೆಯುತ್ತೇವೆ. ಬಾಯ್ಲಿಂಗ್ ಹೌಸ್ ಪುನಃಶ್ಚೇತನವಾದರೆ, ನಿರಂತರವಾಗಿ ಕಬ್ಬು ಅರೆಯಲು ಅನುಕೂಲವಾಗುತ್ತದೆ. ಉತ್ತಮ ಇಳುವರಿಯೂ ಸಿಗಲಿದೆ. ಈ ಮೂಲಕ ನಷ್ಟದಿಂದ ಹೊರಬರಬಹುದು ಎಂದು ಮಾಹಿತಿ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಡ್ಯ</strong>: ‘ಸರ್ಕಾರಿ ಸ್ವಾಮ್ಯದ ಮೈಸೂರು ಸಕ್ಕರೆ ಕಾರ್ಖಾನೆಯನ್ನು (ಮೈಷುಗರ್) ಖಾಸಗೀಕರಣಗೊಳಿಸುವ ಉದ್ದೇಶ ನಮ್ಮ ಸರ್ಕಾರಕ್ಕಿಲ್ಲ. ಹೀಗಾಗಿ ರೈತ ಬಾಂಧವರು ಆತಂಕ ಪಡುವ ಅಗತ್ಯವಿಲ್ಲ’ ಎಂದು ಮೈಷುಗರ್ ಅಧ್ಯಕ್ಷ ಸಿ.ಡಿ. ಗಂಗಾಧರ್ ಸ್ಪಷ್ಟನೆ ನೀಡಿದರು. </p><p>ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ‘ತನಿಖೆ ಹೆಸರಿನಲ್ಲಿ ಖಾಸಗೀಕರಣದ ಹುನ್ನಾರ ನಡೆಯುತ್ತಿದೆ’ ಎಂದು ರೈತ ಹೋರಾಟಗಾರ್ತಿ ಸುನಂದಾ ಜಯರಾಂ ಆರೋಪಿಸಿದ್ದರು. ಇದು ಸತ್ಯಕ್ಕೆ ದೂರವಾದುದು. ನಮ್ಮ ಸರ್ಕಾರ ಬಂದ ನಂತರ ಮೈಷುಗರ್ ಅಭಿವೃದ್ಧಿಗೆ ₹113 ಕೋಟಿ ಆರ್ಥಿಕ ನೆರವು ನೀಡಿ, ಶಕ್ತಿ ತುಂಬಿದೆ ಎಂದರು. </p><p>2026–27ನೇ ಸಾಲಿನ ಹಂಗಾಮಿಗೆ ಈಗಾಗಲೇ ಬಾಯ್ಲಿಂಗ್ ಹೌಸ್, ಬಾಯ್ಲರ್ ದುರಸ್ತಿ, ಕಾಕಂಬಿ ಟ್ಯಾಂಕ್ ನಿರ್ಮಾಣಕ್ಕೆ ಸುಮಾರು ₹74 ಕೋಟಿ ಅಂದಾಜು ಪಟ್ಟಿಯನ್ನು ಸರ್ಕಾರದ ಅನುಮೋದನೆ ಹಂತದಲ್ಲಿದೆ. ಸಿಎಂ ಮತ್ತು ಜಿಲ್ಲಾ ಉಸ್ತುವಾರಿ ಸಚಿವರ ಸಮರ್ಥವಾಗಿ ಕಾರ್ಖಾನೆ ನಡೆಸಲು ಸಹಕಾರ ನೀಡುತ್ತಿದ್ದಾರೆ ಎಂದು ಹೇಳಿದರು. </p><p>2 ವರ್ಷಗಳಿಂದ ಮೈಷುಗರ್ ಕಾರ್ಖಾನೆಯನ್ನು ಸ್ವಾವಲಂಬಿಯಾಗುವ ನಿಟ್ಟಿನಲ್ಲಿ ದಾಪುಗಾಲು ಇಡುತ್ತಿದ್ದೇವೆ. ಸ್ವಂತ ಸಾಮರ್ಥ್ಯದಿಂದ ಕೋಜನ್ ಪ್ರಾರಂಭಿಸಿ ₹16 ಕೋಟಿ ಮೊತ್ತದ ವಿದ್ಯುತ್ ಉತ್ಪಾದನೆ ಮಾಡಲಾಗಿದ್ದು, ಈ ಹಿಂದೆ ನನೆಗುದಿಗೆ ಬಿದ್ದಿರುವ ₹270 ಕೋಟಿಯನ್ನು ಮೈಷುಗರ್ಗೆ ನೀಡಿ ಆರ್ಥಿಕ ಶಕ್ತಿ ತುಂಬಲಾಗಿದೆ ಎಂದರು. </p><p><strong>ತನಿಖೆಗೆ ಸಹಕಾರ</strong></p><p>ಮೈಷುಗರ್ನಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರ ಕುರಿತ ತನಿಖೆಗೆ ಸಂಪೂರ್ಣ ಸಹಕಾರ ನೀಡುತ್ತೇವೆ. ನಾವು ಮತ್ತು ಎಂ.ಡಿ. ತನಿಖೆಯ ಭಾಗವಾಗಿರದೇ ಹೊರಗಿರುತ್ತೇವೆ. ತನಿಖಾ ತಂಡದಲ್ಲಿ ಮೈಷುಗರ್ ವ್ಯಾಪ್ತಿಯ ರೈತ ಪ್ರತಿನಿಧಿ ಇರಬೇಕು ಎಂಬ ಬೇಡಿಕೆ ಬಂದಿದೆ. ಈ ಬಗ್ಗೆ ಕೂಡಲೇ ಸರ್ಕಾರಕ್ಕೆ ಪತ್ರ ಬರೆಯುತ್ತೇನೆ ಎಂದು ಹೇಳಿದರು. </p><p>ಗೋಷ್ಠಿಯಲ್ಲಿ ಜಿಲ್ಲಾ ಕಾಂಗ್ರೆಸ್ ಕಾರ್ಯಾಧ್ಯಕ್ಷ ಎಂ.ಎಸ್. ಚಿದಂಬರ್, ಮುಖಂಡರಾದ ಸುಂಡಹಳ್ಳಿ ಮಂಜುನಾಥ್, ಕೆ.ಎನ್.ನಾಗರಾಜು, ಕಿರಣ್ಕುಮಾರ್, ದೀಪಕ್, ಸಿ.ಎಂ. ದ್ಯಾವಪ್ಪ, ಚಂದಗಾಲು ವಿಜಯಕುಮಾರ್ ಹಾಜರಿದ್ದರು.</p>.<p><strong>₹127 ಕೋಟಿ ವಸೂಲಾತಿಗೆ ಕ್ರಮ</strong></p><p>ನಾಗರಾಜಪ್ಪ ಅವಧಿಯಲ್ಲಿ ನಡೆದಿರುವ ಭ್ರಷ್ಟಾಚಾರದಿಂದ ₹127 ಕೋಟಿ ನಷ್ಟವಾಗಿದ್ದು, ಅದರ ವಸೂಲಾತಿಗೆ ಈಗಾಗಲೇ ವ್ಯವಸ್ಥಾಪಕ ನಿರ್ದೇಶಕರು ಜಿಲ್ಲಾಧಿಕಾರಿಗೆ ಪತ್ರ ಬರೆದಿದ್ದಾರೆ. ಸರ್ಕಾರದ ಆದೇಶ ಹೊರಡಿಸಲು ಕಾರ್ಯದರ್ಶಿಗೆ ಈಗಾಗಲೇ ಮನವಿ ಮಾಡಲಾಗಿದೆ ಎಂದು ಮೈಷುಗರ್ ಅಧ್ಯಕ್ಷ ಸಿ.ಡಿ.ಗಂಗಾಧರ್ ಪ್ರಶ್ನೆಯೊಂದಕ್ಕೆ ಉತ್ತರಿಸಿದರು. </p><p>2026–27ನೇ ಸಾಲಿಗೆ 5.80 ಲಕ್ಷ ಟನ್ ಕಬ್ಬು ರೈತರಿಂದ ಒಪ್ಪಂದವಾಗಿದೆ. ಆರ್.ಬಿ. ಟೆಕ್ ಕಂಪನಿಯನ್ನು ಹೊರಗಿಟ್ಟು, ಟೆಂಡರ್ ಕರೆಯುತ್ತೇವೆ. ಬಾಯ್ಲಿಂಗ್ ಹೌಸ್ ಪುನಃಶ್ಚೇತನವಾದರೆ, ನಿರಂತರವಾಗಿ ಕಬ್ಬು ಅರೆಯಲು ಅನುಕೂಲವಾಗುತ್ತದೆ. ಉತ್ತಮ ಇಳುವರಿಯೂ ಸಿಗಲಿದೆ. ಈ ಮೂಲಕ ನಷ್ಟದಿಂದ ಹೊರಬರಬಹುದು ಎಂದು ಮಾಹಿತಿ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>