<p><strong>ಶ್ರೀರಂಗಪಟ್ಟಣ</strong>: ತಾಲ್ಲೂಕಿನ ಮುಂಡುಗದೊರೆ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಎಂ.ಎಂ. ಸೋಮಣ್ಣ ಗುರುವಾರ ಅವಿರೋಧವಾಗಿ ಆಯ್ಕೆಯಾದರು.</p>.<p> ಸಾಮಾನ್ಯ ವರ್ಗಕ್ಕೆ ಮೀಸಲಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ಸೋಮಣ್ಣ ಮಾತ್ರ ನಾಮಪತ್ರ ಸಲ್ಲಿಸದ್ದು, ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಜಿಲ್ಲಾ ಪಂಚಾಯಿತಿ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ರಾಮಕೃಷ್ಣೇಗೌಡ ಪ್ರಕಟಿಸಿದರು. ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ವೇಳೆ 18 ಸದಸ್ಯರ ಪೈಕಿ 13 ಮಂದಿ ಹಾಜರಿದ್ದರು. </p>.<p>‘ ಗ್ರಾಮಗಳಿಗೆ ಶುದ್ಧ ಹಾಗೂ ಸಮರ್ಪಕ ಕುಡಿಯುವ ನೀರು ಪೂರೈಕೆ, ಸ್ವಚ್ಛತೆಗೆ ಆದ್ಯತೆ ನೀಡಲಾಗುವುದು. ಪಂಚಾಯಿತಿ, ಶಾಸಕರು, ವಿಧಾನ ಪರಿಷತ್ ಸದಸ್ಯರ ಅನುದಾನ ಮತ್ತು ಇತರ ಹಣಕಾಸು ಬಳಸಿಕೊಂಡು ಅಭಿವೃದ್ಧಿ ಕಾರ್ಯ ಕೈಗೊಳ್ಳಲಾಗುವುದು’ ಎಂದು ಸೋಮಣ್ಣ ತಿಳಿಸಿದರು.</p>.<p> ಉಪಾಧ್ಯಕ್ಷೆ ಪಿ. ಸುಗುಣ, ಸದಸ್ಯರಾದ ಬಿ.ಎನ್. ಗಾಯತ್ರಿ, ಬಿ. ಚುಂಚಶೆಟ್ಟಿ, ಡಿ. ಧನಂಜಯ, ಡಿ.ಕೆ. ನಾಗರಾಜು, ಪದ್ಮಾ ಸೋಮೇಶ್, ಸುನಂದಾ, ಮಹಾಲಕ್ಷ್ಮಿ, ವಿ.ಟಿ. ಗೋವಿಂದರಾಜು, ಜಿ.ಕೆ. ರಘುರಾಜ್, ಭವ್ಯಾ ಮತ್ತು ಕಾಂಗ್ರೆಸ್ ಮುಖಂಡರು ಸೋಮಣ್ಣ ಅವರನ್ನು ಅಭಿನಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶ್ರೀರಂಗಪಟ್ಟಣ</strong>: ತಾಲ್ಲೂಕಿನ ಮುಂಡುಗದೊರೆ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಎಂ.ಎಂ. ಸೋಮಣ್ಣ ಗುರುವಾರ ಅವಿರೋಧವಾಗಿ ಆಯ್ಕೆಯಾದರು.</p>.<p> ಸಾಮಾನ್ಯ ವರ್ಗಕ್ಕೆ ಮೀಸಲಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ಸೋಮಣ್ಣ ಮಾತ್ರ ನಾಮಪತ್ರ ಸಲ್ಲಿಸದ್ದು, ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಜಿಲ್ಲಾ ಪಂಚಾಯಿತಿ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ರಾಮಕೃಷ್ಣೇಗೌಡ ಪ್ರಕಟಿಸಿದರು. ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ವೇಳೆ 18 ಸದಸ್ಯರ ಪೈಕಿ 13 ಮಂದಿ ಹಾಜರಿದ್ದರು. </p>.<p>‘ ಗ್ರಾಮಗಳಿಗೆ ಶುದ್ಧ ಹಾಗೂ ಸಮರ್ಪಕ ಕುಡಿಯುವ ನೀರು ಪೂರೈಕೆ, ಸ್ವಚ್ಛತೆಗೆ ಆದ್ಯತೆ ನೀಡಲಾಗುವುದು. ಪಂಚಾಯಿತಿ, ಶಾಸಕರು, ವಿಧಾನ ಪರಿಷತ್ ಸದಸ್ಯರ ಅನುದಾನ ಮತ್ತು ಇತರ ಹಣಕಾಸು ಬಳಸಿಕೊಂಡು ಅಭಿವೃದ್ಧಿ ಕಾರ್ಯ ಕೈಗೊಳ್ಳಲಾಗುವುದು’ ಎಂದು ಸೋಮಣ್ಣ ತಿಳಿಸಿದರು.</p>.<p> ಉಪಾಧ್ಯಕ್ಷೆ ಪಿ. ಸುಗುಣ, ಸದಸ್ಯರಾದ ಬಿ.ಎನ್. ಗಾಯತ್ರಿ, ಬಿ. ಚುಂಚಶೆಟ್ಟಿ, ಡಿ. ಧನಂಜಯ, ಡಿ.ಕೆ. ನಾಗರಾಜು, ಪದ್ಮಾ ಸೋಮೇಶ್, ಸುನಂದಾ, ಮಹಾಲಕ್ಷ್ಮಿ, ವಿ.ಟಿ. ಗೋವಿಂದರಾಜು, ಜಿ.ಕೆ. ರಘುರಾಜ್, ಭವ್ಯಾ ಮತ್ತು ಕಾಂಗ್ರೆಸ್ ಮುಖಂಡರು ಸೋಮಣ್ಣ ಅವರನ್ನು ಅಭಿನಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>