<p><strong>ಮಂಡ್ಯ</strong>: ‘ರಾಜ್ಯಪಾಲ ಥಾವರಚಂದ್ ಗೆಹಲೋತ್ ಅವರ ಬಗ್ಗೆ ಹಗುರವಾಗಿ ಮಾತನಾಡಿರುವ ಮಳವಳ್ಳಿ ಶಾಸಕ ಪಿ.ಎಂ. ನರೇಂದ್ರಸ್ವಾಮಿ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು’ ಎಂದು ಒತ್ತಾಯಿಸಿ ಬಿಜೆಪಿ ಕಾರ್ಯಕರ್ತರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಅವರಿಗೆ ಸೋಮವಾರ ದೂರು ನೀಡಿದರು.</p>.<p>‘ಸದನದಲ್ಲಿ ಶಾಸಕರಿಗೆ ಕನ್ನಡ ವ್ಯಾಕರಣದ ಬಗ್ಗೆ ಪಾಠ ಮಾಡುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಅವರ ಪಕ್ಷದ ಶಾಸಕ ನರೇಂದ್ರಸ್ವಾಮಿಗೆ ಏಕವಚನ, ಬಹುವಚನದ ಪಾಠ ಹೇಳಿಕೊಡಬೇಕು’ ಎಂದು ಒತ್ತಾಯಿಸಿದರು.</p>.<p>‘ರಾಜ್ಯಪಾಲರು ಸಂವಿಧಾನ ರಕ್ಷಣೆಯ ಹೊಣೆ ಹೊತ್ತಿದ್ದಾರೆ. ಅಂಥ ಗೌರವಾನ್ವಿತ ಹುದ್ದೆಯಲ್ಲಿರುವವರ ಬಗ್ಗೆ ಶಾಸಕರು ಏಕವಚನದಲ್ಲಿ ಮಾತನಾಡಿ ಸಂವಿಧಾನಕ್ಕೆ ಅಗೌರವ ತಂದಿದ್ದಾರೆ. ಮಾಜಿ ಸಚಿವೆ ಶಶಿಕಲಾ ಜೊಲ್ಲೆಯವರ ಬಗ್ಗೆಯೂ ಕೀಳುಮಟ್ಟದ ಭಾಷೆ ಬಳಿಸಿದ್ದಾರೆ’ ಎಂದು ಆರೋಪಿಸಿದರು.</p>.<p>ಬಿಜೆಪಿ ಜಿಲ್ಲಾ ವಕ್ತಾರ ಸಿ.ಟಿ. ಮಂಜುನಾಥ್, ಹೊಸಹಳ್ಳಿ ಶಿವು, ಶಿವಲಿಂಗಯ್ಯ, ನಾಗಾನಂದ್, ಶಿವಕುಮಾರ್, ಹನುಮಂತು, ಪ್ರಸನ್ನ, ಚಂದ್ರು ಇದ್ದರು.</p>.<div><blockquote>ನಾವು ಆರ್ಎಸ್ಎಸ್ ಚಡ್ಡಿಗೆ ಹೆದರುವವರಲ್ಲ. ನೂರು ದೂರು ಕೊಟ್ಟರೂ ತಲೆಕೆಡಿಸಿಕೊಳ್ಳಲ್ಲ. ನೀರಿಗಾಗಿ ಹೋರಾಟ ಮಾಡಿದಾಗಲೂ ಕೇಸ್ ಹಾಕಿಸಿದ್ರು. ನ್ಯಾಯಾಲಯದಲ್ಲಿ ಹೋರಾಡುತ್ತೇವೆ.</blockquote><span class="attribution">–ಪಿ.ಎಂ. ನರೇಂದ್ರಸ್ವಾಮಿ, ಶಾಸಕ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಡ್ಯ</strong>: ‘ರಾಜ್ಯಪಾಲ ಥಾವರಚಂದ್ ಗೆಹಲೋತ್ ಅವರ ಬಗ್ಗೆ ಹಗುರವಾಗಿ ಮಾತನಾಡಿರುವ ಮಳವಳ್ಳಿ ಶಾಸಕ ಪಿ.ಎಂ. ನರೇಂದ್ರಸ್ವಾಮಿ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು’ ಎಂದು ಒತ್ತಾಯಿಸಿ ಬಿಜೆಪಿ ಕಾರ್ಯಕರ್ತರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಅವರಿಗೆ ಸೋಮವಾರ ದೂರು ನೀಡಿದರು.</p>.<p>‘ಸದನದಲ್ಲಿ ಶಾಸಕರಿಗೆ ಕನ್ನಡ ವ್ಯಾಕರಣದ ಬಗ್ಗೆ ಪಾಠ ಮಾಡುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಅವರ ಪಕ್ಷದ ಶಾಸಕ ನರೇಂದ್ರಸ್ವಾಮಿಗೆ ಏಕವಚನ, ಬಹುವಚನದ ಪಾಠ ಹೇಳಿಕೊಡಬೇಕು’ ಎಂದು ಒತ್ತಾಯಿಸಿದರು.</p>.<p>‘ರಾಜ್ಯಪಾಲರು ಸಂವಿಧಾನ ರಕ್ಷಣೆಯ ಹೊಣೆ ಹೊತ್ತಿದ್ದಾರೆ. ಅಂಥ ಗೌರವಾನ್ವಿತ ಹುದ್ದೆಯಲ್ಲಿರುವವರ ಬಗ್ಗೆ ಶಾಸಕರು ಏಕವಚನದಲ್ಲಿ ಮಾತನಾಡಿ ಸಂವಿಧಾನಕ್ಕೆ ಅಗೌರವ ತಂದಿದ್ದಾರೆ. ಮಾಜಿ ಸಚಿವೆ ಶಶಿಕಲಾ ಜೊಲ್ಲೆಯವರ ಬಗ್ಗೆಯೂ ಕೀಳುಮಟ್ಟದ ಭಾಷೆ ಬಳಿಸಿದ್ದಾರೆ’ ಎಂದು ಆರೋಪಿಸಿದರು.</p>.<p>ಬಿಜೆಪಿ ಜಿಲ್ಲಾ ವಕ್ತಾರ ಸಿ.ಟಿ. ಮಂಜುನಾಥ್, ಹೊಸಹಳ್ಳಿ ಶಿವು, ಶಿವಲಿಂಗಯ್ಯ, ನಾಗಾನಂದ್, ಶಿವಕುಮಾರ್, ಹನುಮಂತು, ಪ್ರಸನ್ನ, ಚಂದ್ರು ಇದ್ದರು.</p>.<div><blockquote>ನಾವು ಆರ್ಎಸ್ಎಸ್ ಚಡ್ಡಿಗೆ ಹೆದರುವವರಲ್ಲ. ನೂರು ದೂರು ಕೊಟ್ಟರೂ ತಲೆಕೆಡಿಸಿಕೊಳ್ಳಲ್ಲ. ನೀರಿಗಾಗಿ ಹೋರಾಟ ಮಾಡಿದಾಗಲೂ ಕೇಸ್ ಹಾಕಿಸಿದ್ರು. ನ್ಯಾಯಾಲಯದಲ್ಲಿ ಹೋರಾಡುತ್ತೇವೆ.</blockquote><span class="attribution">–ಪಿ.ಎಂ. ನರೇಂದ್ರಸ್ವಾಮಿ, ಶಾಸಕ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>