<p><strong>ಮಂಡ್ಯ:</strong> ಹಿರಿಯ ಮುತ್ಸದ್ಧಿ ಎಚ್.ಡಿ.ಚೌಡಯ್ಯ ಅವರ ನಿಧನ ಅತೀವ ದುಃಖದ ಸಂಗತಿ.94 ವರ್ಷದ ಹಿರಿಯರಾಗಿದ್ದ ಮಾಜಿ ಶಾಸಕರು ಹಾಗೂ ಜನಮುಖಿ ಮುತ್ಸದ್ಧಿ ರಾಜಕಾರಣಿ ಆಗಿದ್ದ ಇವರಿಗೆ ವಯೋ ಸಹಜ ಆರೋಗ್ಯ ಸಮಸ್ಯೆಗಳಿದ್ದವು. ಪತ್ನಿಯವರ ಅಗಲಿಕೆ ಬಳಿಕ ಬಹಳ ನೊಂದಿದ್ದರು. ಈ ನೋವು ಇವರ ಆರೋಗ್ಯವನ್ನು ಹದಗೆಡಿಸಿತ್ತು. ಶತಾಯುಷಿ ಆಗುತ್ತಾರೆ ಎನ್ನುವ ನನ್ನ ನಿರೀಕ್ಷೆಯನ್ನು ನಿರಾಸೆಗೊಳಿಸಿ ನಮ್ಮನ್ನು ಅಗಲಿದ್ದಾರೆ.</p>.<p>ಇವರ ಅಗಲಿಕೆಯನ್ನು ಸಹಿಸಿಕೊಳ್ಳುವ ಶಕ್ತಿಯನ್ನು ಕುಟುಂಬ ವರ್ಗ ಮತ್ತು ಬಂಧುಗಳಿಗೆ ನೀಡಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದು ಮಾಜಿ ಸಿಎಂ, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಸಂತಾಪ ವ್ಯಕ್ತಪಡಿಸಿದರು.</p>.<p>ಪಿಇಎಸ್ ಟ್ರಸ್ಟ್ ನ ಮಾಜಿ ಅಧ್ಯಕ್ಷರಾಗಿ, ಹಿರಿಯ ಸಹಕಾರಿ ಧುರೀಣರಾಗಿ, ಕಾವೇರಿ ಹೋರಾಟದ ಮುಂಚೂಣಿ ನಾಯಕರಾಗಿದ್ದವರು ಚೌಡಯ್ಯ ಅವರು.4 ಬಾರಿ ಕೆರಗೋಡು ಕ್ಷೇತ್ರದ ಶಾಸಕರಾಗಿ, ಪರಿಷತ್ ಸದಸ್ಯರಾಗಿ ಸೇವೆ ಸಲ್ಲಿಸಿ ಮಂಡ್ಯದ ಪ್ರತಿಷ್ಠಿತ ಪಿಇಟಿ ಅಧ್ಯಕ್ಷರಾಗಿ 31 ವರ್ಷಗಳ ಸುಧೀರ್ಘ ಸೇವೆ ಸಲ್ಲಿಸಿದ್ದರು.</p>.<p><a href="https://www.prajavani.net/district/mandya/keragodu-assembly-constituency-ex-mla-h-d-chowdaiah-died-at-94-911430.html" itemprop="url">ಮಾಜಿ ಶಾಸಕ ಡಾ.ಎಚ್.ಡಿ.ಚೌಡಯ್ಯ ಇನ್ನಿಲ್ಲ </a></p>.<p>ಚೌಡಯ್ಯನವರು ಮಂಡ್ಯದ ಸ್ವಾಭಿಮಾನಿ ರಾಜಕಾರಣದ ಪ್ರತೀಕವಾಗಿದ್ದರು. ಇವರ ಅಗಲಿಕೆಯಿಂದ ನನ್ನ ಸಹೃದಯಿ ಹಿತೈಷಿಯೊಬ್ಬರನ್ನು ಕಳೆದುಕೊಂಡಿದ್ದೀನಿ ಎಂದು ಸಿದ್ದರಾಮಯ್ಯ ಕಂಬನಿ ಮಿಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಡ್ಯ:</strong> ಹಿರಿಯ ಮುತ್ಸದ್ಧಿ ಎಚ್.ಡಿ.ಚೌಡಯ್ಯ ಅವರ ನಿಧನ ಅತೀವ ದುಃಖದ ಸಂಗತಿ.94 ವರ್ಷದ ಹಿರಿಯರಾಗಿದ್ದ ಮಾಜಿ ಶಾಸಕರು ಹಾಗೂ ಜನಮುಖಿ ಮುತ್ಸದ್ಧಿ ರಾಜಕಾರಣಿ ಆಗಿದ್ದ ಇವರಿಗೆ ವಯೋ ಸಹಜ ಆರೋಗ್ಯ ಸಮಸ್ಯೆಗಳಿದ್ದವು. ಪತ್ನಿಯವರ ಅಗಲಿಕೆ ಬಳಿಕ ಬಹಳ ನೊಂದಿದ್ದರು. ಈ ನೋವು ಇವರ ಆರೋಗ್ಯವನ್ನು ಹದಗೆಡಿಸಿತ್ತು. ಶತಾಯುಷಿ ಆಗುತ್ತಾರೆ ಎನ್ನುವ ನನ್ನ ನಿರೀಕ್ಷೆಯನ್ನು ನಿರಾಸೆಗೊಳಿಸಿ ನಮ್ಮನ್ನು ಅಗಲಿದ್ದಾರೆ.</p>.<p>ಇವರ ಅಗಲಿಕೆಯನ್ನು ಸಹಿಸಿಕೊಳ್ಳುವ ಶಕ್ತಿಯನ್ನು ಕುಟುಂಬ ವರ್ಗ ಮತ್ತು ಬಂಧುಗಳಿಗೆ ನೀಡಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದು ಮಾಜಿ ಸಿಎಂ, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಸಂತಾಪ ವ್ಯಕ್ತಪಡಿಸಿದರು.</p>.<p>ಪಿಇಎಸ್ ಟ್ರಸ್ಟ್ ನ ಮಾಜಿ ಅಧ್ಯಕ್ಷರಾಗಿ, ಹಿರಿಯ ಸಹಕಾರಿ ಧುರೀಣರಾಗಿ, ಕಾವೇರಿ ಹೋರಾಟದ ಮುಂಚೂಣಿ ನಾಯಕರಾಗಿದ್ದವರು ಚೌಡಯ್ಯ ಅವರು.4 ಬಾರಿ ಕೆರಗೋಡು ಕ್ಷೇತ್ರದ ಶಾಸಕರಾಗಿ, ಪರಿಷತ್ ಸದಸ್ಯರಾಗಿ ಸೇವೆ ಸಲ್ಲಿಸಿ ಮಂಡ್ಯದ ಪ್ರತಿಷ್ಠಿತ ಪಿಇಟಿ ಅಧ್ಯಕ್ಷರಾಗಿ 31 ವರ್ಷಗಳ ಸುಧೀರ್ಘ ಸೇವೆ ಸಲ್ಲಿಸಿದ್ದರು.</p>.<p><a href="https://www.prajavani.net/district/mandya/keragodu-assembly-constituency-ex-mla-h-d-chowdaiah-died-at-94-911430.html" itemprop="url">ಮಾಜಿ ಶಾಸಕ ಡಾ.ಎಚ್.ಡಿ.ಚೌಡಯ್ಯ ಇನ್ನಿಲ್ಲ </a></p>.<p>ಚೌಡಯ್ಯನವರು ಮಂಡ್ಯದ ಸ್ವಾಭಿಮಾನಿ ರಾಜಕಾರಣದ ಪ್ರತೀಕವಾಗಿದ್ದರು. ಇವರ ಅಗಲಿಕೆಯಿಂದ ನನ್ನ ಸಹೃದಯಿ ಹಿತೈಷಿಯೊಬ್ಬರನ್ನು ಕಳೆದುಕೊಂಡಿದ್ದೀನಿ ಎಂದು ಸಿದ್ದರಾಮಯ್ಯ ಕಂಬನಿ ಮಿಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>