ಪಾಂಡವಪುರ (ಮಂಡ್ಯ ಜಿಲ್ಲೆ): ‘ಲೋಕಸಭಾ ಚುನಾವಣೆ ಮುಗಿದ ಬಳಿಕ ನರೇಂದ್ರ ಮೋದಿ ಹಾಗೂ ಎಚ್.ಡಿ.ದೇವೇಗೌಡರು ಕಾವೇರಿ ಸಮಸ್ಯೆ ಬಗೆಹರಿಸುವ ಜೊತೆಗೆ ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ಪ್ರಮುಖ ಪಾತ್ರ ವಹಿಸಲಿದ್ದಾರೆ’ ಎಂದು ಜೆಡಿಎಸ್ ಮುಖಂಡ ಸಿ.ಎಸ್.ಪುಟ್ಟರಾಜು ಮಂಗಳವಾರ ಹೇಳಿದರು.
ಜೆಡಿಎಸ್- ಬಿಜೆಪಿ ಸಮನ್ವಯ ಸಭೆಯಲ್ಲಿ ಮಾತನಾಡಿದ ಅವರು ‘ಎಚ್.ಡಿ.ಕುಮಾರಸ್ವಾಮಿ ಕೇಂದ್ರ ಸಚಿವರಾಗಲಿದ್ದಾರೆ. ಈ ನಿಟ್ಟಿನಲ್ಲಿ ಕಾವೇರಿ ವಿವಾದ ಬಗೆಹರಿಯಲಿದ್ದು, ಮೇಕೆದಾಟು ಯೋಜನೆ ಕೂಡ ಅನುಷ್ಠಾನಗೊಳ್ಳಲಿದೆ’ ಎಂದರು.