<p><strong>ಹಲಗೂರು</strong>: ಕೆಎಸ್ಆರ್ಟಿಸಿ ಬಸ್ ಚಾಲಕನ ಸಮಯ ಪ್ರಜ್ಞೆಯಿಂದಾಗಿ ಮುತ್ತತ್ತಿ ಬಳಿಯ ಕೆಸರಕ್ಕಿ ಹಳ್ಳದ ಬಳಿ ಸಂಭವಿಸಬಹುದಾಗಿದ್ದ ಅವಘಡ ತಪ್ಪಿತು.</p>.<p>ಕನಕಪುರ ಘಟಕಕ್ಕೆ ಸೇರಿದ ಬಸ್ನಲ್ಲಿ 40ಕ್ಕೂ ಹೆಚ್ಚು ಭಕ್ತರು ಶನಿವಾರ ಮಧ್ಯಾಹ್ನ ಮುತ್ತತ್ತಿಗೆ ತೆರಳುತ್ತಿದ್ದರು. ಕೆಸರಕ್ಕಿ ಹಳ್ಳದ ತಿರುವಿನಲ್ಲಿ ಬಸ್ಸಿನ ಬ್ರೆಕ್ ವಿಫಲವಾಯಿತು. ತಕ್ಷಣ ಜಾಗೃತಗೊಂಡ ಚಾಲಕ ಜಯರಾಜ್ ಪ್ರಯಾಣಿಕರಿಗೆ ಬ್ರೇಕ್ ವಿಫಲಗೊಂಡಿರುವ ವಿಷಯ ತಿಳಿಸಿ ಹೆದರದೇ ಗಟ್ಟಿಯಾಗಿ ಹಿಡಿದುಕೊಳ್ಳಲು ಸೂಚಿಸಿದ್ದಾರೆ.</p>.<p>ನಂತರ ಚಾಲಕ ರಸ್ತೆಯ ಬದಿಯಲ್ಲಿದ್ದ ಚಿಕ್ಕ ಕಲ್ಲು ಗುಡ್ಡೆ ಹತ್ತಿಸಿ, ಬಸ್ ನಿಲ್ಲಿಸಿದ್ದಾನೆ. ಅವಘಡದಲ್ಲಿ ಬಸ್ನ ಗಾಜು ಪುಡಿಪುಡಿಯಾಗಿದೆ. ಪ್ರಯಾಣಿಕರಿಗೆ ಹೆಚ್ಚಿನ ನೋವುಗಳು ಸಂಭವಿಸಿಲ್ಲ. ನಿರ್ವಾಹಕಿ ಸೌಜನ್ಯ ಅವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಹಲಗೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಯಿತು.</p>.<p>ಹಲಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಲಗೂರು</strong>: ಕೆಎಸ್ಆರ್ಟಿಸಿ ಬಸ್ ಚಾಲಕನ ಸಮಯ ಪ್ರಜ್ಞೆಯಿಂದಾಗಿ ಮುತ್ತತ್ತಿ ಬಳಿಯ ಕೆಸರಕ್ಕಿ ಹಳ್ಳದ ಬಳಿ ಸಂಭವಿಸಬಹುದಾಗಿದ್ದ ಅವಘಡ ತಪ್ಪಿತು.</p>.<p>ಕನಕಪುರ ಘಟಕಕ್ಕೆ ಸೇರಿದ ಬಸ್ನಲ್ಲಿ 40ಕ್ಕೂ ಹೆಚ್ಚು ಭಕ್ತರು ಶನಿವಾರ ಮಧ್ಯಾಹ್ನ ಮುತ್ತತ್ತಿಗೆ ತೆರಳುತ್ತಿದ್ದರು. ಕೆಸರಕ್ಕಿ ಹಳ್ಳದ ತಿರುವಿನಲ್ಲಿ ಬಸ್ಸಿನ ಬ್ರೆಕ್ ವಿಫಲವಾಯಿತು. ತಕ್ಷಣ ಜಾಗೃತಗೊಂಡ ಚಾಲಕ ಜಯರಾಜ್ ಪ್ರಯಾಣಿಕರಿಗೆ ಬ್ರೇಕ್ ವಿಫಲಗೊಂಡಿರುವ ವಿಷಯ ತಿಳಿಸಿ ಹೆದರದೇ ಗಟ್ಟಿಯಾಗಿ ಹಿಡಿದುಕೊಳ್ಳಲು ಸೂಚಿಸಿದ್ದಾರೆ.</p>.<p>ನಂತರ ಚಾಲಕ ರಸ್ತೆಯ ಬದಿಯಲ್ಲಿದ್ದ ಚಿಕ್ಕ ಕಲ್ಲು ಗುಡ್ಡೆ ಹತ್ತಿಸಿ, ಬಸ್ ನಿಲ್ಲಿಸಿದ್ದಾನೆ. ಅವಘಡದಲ್ಲಿ ಬಸ್ನ ಗಾಜು ಪುಡಿಪುಡಿಯಾಗಿದೆ. ಪ್ರಯಾಣಿಕರಿಗೆ ಹೆಚ್ಚಿನ ನೋವುಗಳು ಸಂಭವಿಸಿಲ್ಲ. ನಿರ್ವಾಹಕಿ ಸೌಜನ್ಯ ಅವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಹಲಗೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಯಿತು.</p>.<p>ಹಲಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>