<p><strong>ಹಲಗೂರು</strong>: ಮೈಸೂರು ಕುವೆಂಪು ನಗರ ನಿವಾಸಿ ರಂಗಸ್ವಾಮಿ ಅವರ ಪುತ್ರ ರಮೇಶ್ (31) ಅವರ ತಲೆಯ ಮೇಲೆ ಕಲ್ಲು ಎತ್ತಿಹಾಕಿ ಕೊಲೆ ಮಾಡಿರುವ ಘಟನೆ ಹಲಗೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಅವರಣದಲ್ಲಿ ಶುಕ್ರವಾರ ರಾತ್ರಿ ನಡೆದಿದೆ.</p>.<p>ಐದಾರು ವರ್ಷಗಳ ಹಿಂದೆ ಗಾರೆ ಕೆಲಸಕ್ಕಾಗಿ ಹಲಗೂರಿಗೆ ಬಂದಿದ್ದ ರಮೇಶ, ಇಲ್ಲಿಯೇ ಚಿಂದಿ ಆಯ್ದುಕೊಂಡು ಜೀವನ ನಡೆಸುತ್ತಿದ್ದರು.</p>.<p>ಶುಕ್ರವಾರ ರಾತ್ರಿ ಶಾಲಾ ಕೊಠಡಿಯ ಆವರಣದಲ್ಲಿ ಮಲಗಿದ್ದಾಗ ರಮೇಶ್ ಅವರ ತಲೆಯ ಮೇಲೆ ಯಾರೋ ದುಷ್ಕರ್ಮಿಗಳು ಕಲ್ಲು ಎತ್ತಿ ಹಾಕಿದ್ದಾರೆ. ಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಬೆಳಿಗ್ಗೆ ಶಾಲೆ ತೆರೆಯಲು ಹೋದಾಗ ಪ್ರಕರಣ ಬೆಳಕಿಗೆ ಬಂದಿದೆ.</p>.<p>ಘಟನಾ ಸ್ಥಳದಲ್ಲಿ ಶ್ವಾನದಳ ಮತ್ತು ವಿಧಿ ವಿಜ್ಞಾನ ಸಾಕ್ಷ್ಯ ಸಂಗ್ರಹಿಸುವ (ಸೋಕೋ) ತಂಡ ಭೇಟಿ ನೀಡಿತು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಡಿವೈಎಸ್ಪಿ ಕೃಷ್ಣಪ್ಪ, ಹಲಗೂರು ಸರ್ಕಲ್ ಇನ್ಸ್ಪೆಕ್ಟರ್ ಬಿ.ಎಸ್.ಶ್ರೀಧರ್, ಪಿಎಸ್ಐ ಲೋಕೇಶ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.</p>.<p>ಹಲಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಲಗೂರು</strong>: ಮೈಸೂರು ಕುವೆಂಪು ನಗರ ನಿವಾಸಿ ರಂಗಸ್ವಾಮಿ ಅವರ ಪುತ್ರ ರಮೇಶ್ (31) ಅವರ ತಲೆಯ ಮೇಲೆ ಕಲ್ಲು ಎತ್ತಿಹಾಕಿ ಕೊಲೆ ಮಾಡಿರುವ ಘಟನೆ ಹಲಗೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಅವರಣದಲ್ಲಿ ಶುಕ್ರವಾರ ರಾತ್ರಿ ನಡೆದಿದೆ.</p>.<p>ಐದಾರು ವರ್ಷಗಳ ಹಿಂದೆ ಗಾರೆ ಕೆಲಸಕ್ಕಾಗಿ ಹಲಗೂರಿಗೆ ಬಂದಿದ್ದ ರಮೇಶ, ಇಲ್ಲಿಯೇ ಚಿಂದಿ ಆಯ್ದುಕೊಂಡು ಜೀವನ ನಡೆಸುತ್ತಿದ್ದರು.</p>.<p>ಶುಕ್ರವಾರ ರಾತ್ರಿ ಶಾಲಾ ಕೊಠಡಿಯ ಆವರಣದಲ್ಲಿ ಮಲಗಿದ್ದಾಗ ರಮೇಶ್ ಅವರ ತಲೆಯ ಮೇಲೆ ಯಾರೋ ದುಷ್ಕರ್ಮಿಗಳು ಕಲ್ಲು ಎತ್ತಿ ಹಾಕಿದ್ದಾರೆ. ಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಬೆಳಿಗ್ಗೆ ಶಾಲೆ ತೆರೆಯಲು ಹೋದಾಗ ಪ್ರಕರಣ ಬೆಳಕಿಗೆ ಬಂದಿದೆ.</p>.<p>ಘಟನಾ ಸ್ಥಳದಲ್ಲಿ ಶ್ವಾನದಳ ಮತ್ತು ವಿಧಿ ವಿಜ್ಞಾನ ಸಾಕ್ಷ್ಯ ಸಂಗ್ರಹಿಸುವ (ಸೋಕೋ) ತಂಡ ಭೇಟಿ ನೀಡಿತು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಡಿವೈಎಸ್ಪಿ ಕೃಷ್ಣಪ್ಪ, ಹಲಗೂರು ಸರ್ಕಲ್ ಇನ್ಸ್ಪೆಕ್ಟರ್ ಬಿ.ಎಸ್.ಶ್ರೀಧರ್, ಪಿಎಸ್ಐ ಲೋಕೇಶ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.</p>.<p>ಹಲಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>