<p><strong>ಹಲಗೂರು</strong>: ಇಲ್ಲಿನ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕಾಯಂ ವೈದ್ಯರ ಸೇವೆ ಲಭ್ಯವಿಲ್ಲದ ಪರಿಣಾಮ ರೋಗಿಗಳು ಸಕಾಲದಲ್ಲಿ ಚಿಕಿತ್ಸೆ ಸಿಗದೆ ಪರದಾಡುವಂತಾಗಿದೆ.</p>.<p>ಮಳವಳ್ಳಿ ತಾಲ್ಲೂಕಿನ ಅತಿ ದೊಡ್ಡ ಹೋಬಳಿ ಕೇಂದ್ರವಾಗಿರುವ ಹಲಗೂರು ದಾಖಲೆಗಳಲ್ಲಿ ಗ್ರಾಮವಾಗಿದ್ದರೂ, ಜನಸಂಖ್ಯೆ ಏರಿಕೆಯಿಂದಾಗಿ ಪಟ್ಟಣದ ರೂಪ ಪಡೆದಿದೆ. ಗ್ರಾಮೀಣ ಪ್ರದೇಶದ ಜನಸಾಮಾನ್ಯರು, ಬಡವರು, ವಿವಿಧ ಕ್ಷೇತ್ರಗಳಲ್ಲಿ ಕೆಲಸ ಮಾಡುತ್ತಿರುವ ನೂರಾರು ಕೂಲಿ ಕಾರ್ಮಿಕರು ಸರ್ಕಾರಿ ಆಸ್ಪತ್ರೆಯನ್ನೇ ಚಿಕಿತ್ಸೆಗೆ ಅವಲಂಬಿಸಿದ್ದಾರೆ.</p>.<p>ಹಲಗೂರು ಪ್ರಾಥಮಿಕ ಆರೋಗ್ಯ ಕೇಂದ್ರ ಸುಸಜ್ಜಿತ ಕಟ್ಟಡ ಹೊಂದಿದ್ದರೂ ಈ ಹಿಂದೆ ವೈದ್ಯರಾಗಿ ಸೇವೆ ಸಲ್ಲಿಸಿತ್ತಿದ್ದ ಡಾ.ಸೌಮ್ಯಶ್ರೀ ಉನ್ನತ ಶಿಕ್ಷಣಕ್ಕಾಗಿ ತೆರಳಿದ್ದರಿಂದಾಗಿ ಇಲ್ಲಿನ ವೈದ್ಯರ ಸ್ಥಾನ ಹಲವು ದಿನಗಳಿಂದ ಖಾಲಿ ಉಳಿದಿದೆ. ವೈದ್ಯರು ಇಲ್ಲದ ಪರಿಣಾಮ ರೋಗಿಗಳು ಮಳವಳ್ಳಿ ಸೇರಿದಂತೆ ಸುತ್ತಮುತ್ತಲಿನ ಆಸ್ಪತ್ರೆಗಳಿಗೆ ತೆರಳಬೇಕಾದ ಸಂಕಷ್ಟ ಎದುರಾಗಿದೆ.</p>.<p>ಹುಸ್ಕೂರು, ದಳವಾಯಿ ಕೋಡಿಹಳ್ಳಿ ಕೇಂದ್ರಗಳ ವೈದ್ಯರು ಹಲಗೂರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪ್ರಭಾರ ಸೇವೆ ಮೇಲೆ ಹಂಚಿಕೆ ಅಧಾರದಲ್ಲಿ ಕಾರ್ಯ ನಿರ್ವಹಿಸುತ್ತಿದ್ದರೂ, ದಳವಾಯಿ ಕೋಡಿಹಳ್ಳಿ ಮತ್ತು ಹುಸ್ಕೂರು ಕೇಂದ್ರಗಳಲ್ಲಿ ರೋಗಿಗಳು ಸಮಸ್ಯೆ ಬಗೆಹರಿಸಲು ಹೆಚ್ಚುವರಿ ವೈದ್ಯರ ಅಗತ್ಯತೆ ಎದುರಾಗಿದೆ.</p>.<p>ಪ್ರವಾಸಿ ತಾಣ ಮುತ್ತತ್ತಿ ಮತ್ತು ರಾಷ್ಟ್ರೀಯ ಹೆದ್ದಾರಿ -948 ಸಹ ಹಲಗೂರು ನಡುವೆ ಹಾದು ಹೋಗಿದ್ದು, ರಸ್ತೆ ಅಪಘಾತ ಸಂಭವಿಸಿದರೆ ತುರ್ತು ಚಿಕಿತ್ಸೆ ಪಡೆಯಲು ಮಳವಳ್ಳಿಗೆ ತೆರಳಬೇಕಿದೆ. ಕೂಡಲೇ ನಿಟ್ಟೂರು ಮತ್ತು ಹಲಗೂರು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಕಾಯಂ ವೈದ್ಯರನ್ನು ನೇಮಿಸಬೇಕೆಂಬುದು ಈ ಭಾಗದ ನಿವಾಸಿಗಳ ಒತ್ತಾಯ.</p>.<p>‘ಸುಮಾರು 20 ಸಾವಿರ ಜನಸಂಖ್ಯೆಯುಳ್ಳ ಗ್ರಾಮದಲ್ಲಿ ಆರೋಗ್ಯ ಕೇಂದ್ರಕ್ಕೆ ಕಾಯಂ ವೈದ್ಯರ ನೇಮಕ ಮಾಡದಿರುವುದು ದುಃಖದ ವಿಷಯ. ಆರೋಗ್ಯ ಸೇವೆಗೆ ಸರ್ಕಾರ ಪ್ರಥಮ ಆದ್ಯತೆ ನೀಡಬೇಕು’ ಎಂದು ಹಲಗೂರು ನಿವಾಸಿ ಅಭಿಜಿತ್ ಬಸವರಾಜು ಮನವಿ ಮಾಡಿದ್ದಾರೆ. </p>.<div><blockquote>ಸರ್ಕಾರದ ಮಟ್ಟದಲ್ಲಿ ವರ್ಗಾವಣೆ ಪ್ರಕ್ರಿಯೆ ಚಾಲ್ತಿಯಲ್ಲಿದೆ. ಹಲಗೂರು ಕೇಂದ್ರಕ್ಕೆ ಡಿಎಚ್ಒ ಅದೇಶದ ಮೇರೆಗೆ ತಾತ್ಕಾಲಿಕವಾಗಿ ವೈದ್ಯರನ್ನು ನಿಯೋಜಿಸಲಾಗಿದೆ</blockquote><span class="attribution">ಡಾ.ಪಿ. ವೀರಭದ್ರಪ್ಪ ತಾಲ್ಲೂಕು ಆರೋಗ್ಯ ಅಧಿಕಾರಿ ಮಳವಳ್ಳಿ</span></div>.<div><blockquote>ಕೇಂದ್ರದಲ್ಲಿ ಕಾಯಂ ವೈದ್ಯರಿಲ್ಲದೇ ಹಿರಿಯ ನಾಗರಿಕರು ಮಕ್ಕಳು ಚಿಕಿತ್ಸೆಗಾಗಿ ಪರದಾಡುವಂತಾಗಿದೆ. ಇಬ್ಬರು ತಜ್ಞ ವೈದ್ಯರನ್ನು ಕೂಡಲೇ ನೇಮಿಸಬೇಕು </blockquote><span class="attribution">ಕೆ.ಜಿ.ಸಿದ್ದಲಿಂಗಮೂರ್ತಿ ಕೊನ್ನಾಪುರ ನಿವಾಸಿ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಲಗೂರು</strong>: ಇಲ್ಲಿನ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕಾಯಂ ವೈದ್ಯರ ಸೇವೆ ಲಭ್ಯವಿಲ್ಲದ ಪರಿಣಾಮ ರೋಗಿಗಳು ಸಕಾಲದಲ್ಲಿ ಚಿಕಿತ್ಸೆ ಸಿಗದೆ ಪರದಾಡುವಂತಾಗಿದೆ.</p>.<p>ಮಳವಳ್ಳಿ ತಾಲ್ಲೂಕಿನ ಅತಿ ದೊಡ್ಡ ಹೋಬಳಿ ಕೇಂದ್ರವಾಗಿರುವ ಹಲಗೂರು ದಾಖಲೆಗಳಲ್ಲಿ ಗ್ರಾಮವಾಗಿದ್ದರೂ, ಜನಸಂಖ್ಯೆ ಏರಿಕೆಯಿಂದಾಗಿ ಪಟ್ಟಣದ ರೂಪ ಪಡೆದಿದೆ. ಗ್ರಾಮೀಣ ಪ್ರದೇಶದ ಜನಸಾಮಾನ್ಯರು, ಬಡವರು, ವಿವಿಧ ಕ್ಷೇತ್ರಗಳಲ್ಲಿ ಕೆಲಸ ಮಾಡುತ್ತಿರುವ ನೂರಾರು ಕೂಲಿ ಕಾರ್ಮಿಕರು ಸರ್ಕಾರಿ ಆಸ್ಪತ್ರೆಯನ್ನೇ ಚಿಕಿತ್ಸೆಗೆ ಅವಲಂಬಿಸಿದ್ದಾರೆ.</p>.<p>ಹಲಗೂರು ಪ್ರಾಥಮಿಕ ಆರೋಗ್ಯ ಕೇಂದ್ರ ಸುಸಜ್ಜಿತ ಕಟ್ಟಡ ಹೊಂದಿದ್ದರೂ ಈ ಹಿಂದೆ ವೈದ್ಯರಾಗಿ ಸೇವೆ ಸಲ್ಲಿಸಿತ್ತಿದ್ದ ಡಾ.ಸೌಮ್ಯಶ್ರೀ ಉನ್ನತ ಶಿಕ್ಷಣಕ್ಕಾಗಿ ತೆರಳಿದ್ದರಿಂದಾಗಿ ಇಲ್ಲಿನ ವೈದ್ಯರ ಸ್ಥಾನ ಹಲವು ದಿನಗಳಿಂದ ಖಾಲಿ ಉಳಿದಿದೆ. ವೈದ್ಯರು ಇಲ್ಲದ ಪರಿಣಾಮ ರೋಗಿಗಳು ಮಳವಳ್ಳಿ ಸೇರಿದಂತೆ ಸುತ್ತಮುತ್ತಲಿನ ಆಸ್ಪತ್ರೆಗಳಿಗೆ ತೆರಳಬೇಕಾದ ಸಂಕಷ್ಟ ಎದುರಾಗಿದೆ.</p>.<p>ಹುಸ್ಕೂರು, ದಳವಾಯಿ ಕೋಡಿಹಳ್ಳಿ ಕೇಂದ್ರಗಳ ವೈದ್ಯರು ಹಲಗೂರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪ್ರಭಾರ ಸೇವೆ ಮೇಲೆ ಹಂಚಿಕೆ ಅಧಾರದಲ್ಲಿ ಕಾರ್ಯ ನಿರ್ವಹಿಸುತ್ತಿದ್ದರೂ, ದಳವಾಯಿ ಕೋಡಿಹಳ್ಳಿ ಮತ್ತು ಹುಸ್ಕೂರು ಕೇಂದ್ರಗಳಲ್ಲಿ ರೋಗಿಗಳು ಸಮಸ್ಯೆ ಬಗೆಹರಿಸಲು ಹೆಚ್ಚುವರಿ ವೈದ್ಯರ ಅಗತ್ಯತೆ ಎದುರಾಗಿದೆ.</p>.<p>ಪ್ರವಾಸಿ ತಾಣ ಮುತ್ತತ್ತಿ ಮತ್ತು ರಾಷ್ಟ್ರೀಯ ಹೆದ್ದಾರಿ -948 ಸಹ ಹಲಗೂರು ನಡುವೆ ಹಾದು ಹೋಗಿದ್ದು, ರಸ್ತೆ ಅಪಘಾತ ಸಂಭವಿಸಿದರೆ ತುರ್ತು ಚಿಕಿತ್ಸೆ ಪಡೆಯಲು ಮಳವಳ್ಳಿಗೆ ತೆರಳಬೇಕಿದೆ. ಕೂಡಲೇ ನಿಟ್ಟೂರು ಮತ್ತು ಹಲಗೂರು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಕಾಯಂ ವೈದ್ಯರನ್ನು ನೇಮಿಸಬೇಕೆಂಬುದು ಈ ಭಾಗದ ನಿವಾಸಿಗಳ ಒತ್ತಾಯ.</p>.<p>‘ಸುಮಾರು 20 ಸಾವಿರ ಜನಸಂಖ್ಯೆಯುಳ್ಳ ಗ್ರಾಮದಲ್ಲಿ ಆರೋಗ್ಯ ಕೇಂದ್ರಕ್ಕೆ ಕಾಯಂ ವೈದ್ಯರ ನೇಮಕ ಮಾಡದಿರುವುದು ದುಃಖದ ವಿಷಯ. ಆರೋಗ್ಯ ಸೇವೆಗೆ ಸರ್ಕಾರ ಪ್ರಥಮ ಆದ್ಯತೆ ನೀಡಬೇಕು’ ಎಂದು ಹಲಗೂರು ನಿವಾಸಿ ಅಭಿಜಿತ್ ಬಸವರಾಜು ಮನವಿ ಮಾಡಿದ್ದಾರೆ. </p>.<div><blockquote>ಸರ್ಕಾರದ ಮಟ್ಟದಲ್ಲಿ ವರ್ಗಾವಣೆ ಪ್ರಕ್ರಿಯೆ ಚಾಲ್ತಿಯಲ್ಲಿದೆ. ಹಲಗೂರು ಕೇಂದ್ರಕ್ಕೆ ಡಿಎಚ್ಒ ಅದೇಶದ ಮೇರೆಗೆ ತಾತ್ಕಾಲಿಕವಾಗಿ ವೈದ್ಯರನ್ನು ನಿಯೋಜಿಸಲಾಗಿದೆ</blockquote><span class="attribution">ಡಾ.ಪಿ. ವೀರಭದ್ರಪ್ಪ ತಾಲ್ಲೂಕು ಆರೋಗ್ಯ ಅಧಿಕಾರಿ ಮಳವಳ್ಳಿ</span></div>.<div><blockquote>ಕೇಂದ್ರದಲ್ಲಿ ಕಾಯಂ ವೈದ್ಯರಿಲ್ಲದೇ ಹಿರಿಯ ನಾಗರಿಕರು ಮಕ್ಕಳು ಚಿಕಿತ್ಸೆಗಾಗಿ ಪರದಾಡುವಂತಾಗಿದೆ. ಇಬ್ಬರು ತಜ್ಞ ವೈದ್ಯರನ್ನು ಕೂಡಲೇ ನೇಮಿಸಬೇಕು </blockquote><span class="attribution">ಕೆ.ಜಿ.ಸಿದ್ದಲಿಂಗಮೂರ್ತಿ ಕೊನ್ನಾಪುರ ನಿವಾಸಿ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>