<p><strong>ಹಲಗೂರು:</strong> ಕಾಡಿನಿಂದ ನಾಡಿನ ಕಡೆ ಬಂದ ಒಂಟಿ ಸಲಗವೊಂದು ಜನವಸತಿ ಪ್ರದೇಶದಲ್ಲಿ ಪ್ರತ್ಯಕ್ಷವಾಗಿದ್ದು, ಅತಂಕ ಸೃಷ್ಟಿಸಿದ ಘಟನೆ ಭಾನುವಾರ ನಡೆಯಿತು.</p>.<p>ಸಮೀಪದ ಗುಂಡಾಪುರ ಗ್ರಾಮದ ಹೊರವಲಯದಲ್ಲಿರುವ ರವಿ ಎಂಬುವವರ ಬಾಳೆ ತೋಟದಲ್ಲಿ ಭಾನುವಾರ ಬೆಳಗಿನ ಜಾವ ಆನೆ ಪ್ರತ್ಯಕ್ಷವಾಗಿದೆ. ಸಾರ್ವಜನಿಕರು ಮತ್ತು ಗ್ರಾಮಸ್ಥರು ಅರಣ್ಯ ಇಲಾಖೆ ಸಿಬ್ಬಂದಿಗೆ ತಕ್ಷಣ ವಿಷಯ ತಿಳಿಸಿದ್ದಾರೆ.</p>.<p>ಕಾವೇರಿ ವನ್ಯಜೀವಿ ವಲಯದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ನಾಗೇಂದ್ರ ಪ್ರಸಾದ್ ನೇತೃತ್ವದಲ್ಲಿ ಆನೆಯನ್ನು ಕಾಡಿಗೆ ಅಟ್ಟಲು ಕಾರ್ಯ ಯೋಜನೆ ರೂಪಿಸಲಾಗುತ್ತಿತ್ತು. ಕಾರ್ಯಚರಣೆ ಆರಂಭಿಸುವ ಮುನ್ನವೇ ಅರಣ್ಯ ಇಲಾಖೆ ಜೀಪ್ ಚಾಲಕ ಎಸ್.ಚೇತನ್ ಅವರನ್ನು ಅಟ್ಟಾಡಿಸಿದ್ದು, ಅದೃಷ್ಟವಶಾತ್ ಅಲ್ಲಿಂದ ತಪ್ಪಿಸಿಕೊಂಡು ಅಪಾಯದಿಂದ ಪಾರಾಗಿದ್ದಾರೆ.</p>.<p>ಕೆಲವು ದಿನಗಳ ಹಿಂದೆ ಮೂರು ಕಾಡಾನೆಗಳು ಮದ್ದೂರು ತಾಲ್ಲೂಕಿನಲ್ಲಿ ಕಾಣಿಸಿಕೊಂಡಿದ್ದ ಕಾಡಾನೆಗಳು ಬೀಮನಕಂಡಿ ಅರಣ್ಯ ಪ್ರದೇಶದ ಕಡೆಗೆ ಹಿಂದಿರುಗುವಾಗ ಒಂಟಿ ಸಲಗ ಬೇರ್ಪಟ್ಟಿರಬಹುದು ಎಂದು ಅರಣ್ಯ ಇಲಾಖೆ ಅಧಿಕಾರಿಗಳು ಶಂಕೆ ವ್ಯಕ್ತಪಡಿಸಿದ್ದಾರೆ.</p>.<p>ಕಾರ್ಯಾಚಾರಣೆಯಲ್ಲಿ ಕಾವೇರಿ ವನ್ಯಜೀವಿ ವಲಯ ಅರಣ್ಯ ಅಧಿಕಾರಿ ಪ್ರಮೋದ್ ಕುಮಾರ್ ದೇವ್, ಗವಿಯಪ್ಪ, ಹಲಗೂರು ಉಪವಲಯ ಅರಣ್ಯ ವಲಯ ಅಧಿಕಾರಿ ನಿಹಾಲ್, ಶ್ರೀಧರ್, ಸಿದ್ದರಾಮ ಪೂಜಾರಿ ಸಿಬ್ಬಂದಿ ಇದ್ದಾರೆ.</p>.<p>ಸಾರ್ವಜನಿಕರಲ್ಲಿ ಆತಂಕ: ಒಂಟಿ ಸಲಗವನ್ನು ನೋಡಿ ಜನರು ಅತಂಕಗೊಡರು. ಇನ್ನೂ ಬೇರೆ ಆನೆಗಳು ಇರಬಹುದೆಂದು ಈ ಭಾಗದ ರಸ್ತೆಗಳಲ್ಲಿ ಓಡಾಡಲು ರೈತರು ಹಿಂದೇಟು ಹಾಕಿದರು. ಅರಣ್ಯ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿದ ನಂತರ ನಿಟ್ಟುಸಿರು ಬಿಟ್ಟರು.</p>.<div><blockquote>ಆನೆಯು ಸುರಕ್ಷಿತ ಸ್ಥಳದಲ್ಲಿ ಇದ್ದು ಚಲನವಲನದ ಬಗ್ಗೆ ಗಮನ ಹರಿಸಿದ್ದೇವೆ. ಆನೆಯನ್ನು ಸುರಕ್ಷಿತವಾಗಿ ಬಸವನಬೆಟ್ಟ ಅರಣ್ಯ ಪ್ರದೇಶದತ್ತ ಓಡಿಸಲಾಗುವುದು </blockquote><span class="attribution">ನಾಗೇಂದ್ರ ಪ್ರಸಾದ್ ಕನಕಪುರ ಕಾವೇರಿ ವನ್ಯಜೀವಿ ಉಪವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾ ಅಧಿಕಾರಿ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಲಗೂರು:</strong> ಕಾಡಿನಿಂದ ನಾಡಿನ ಕಡೆ ಬಂದ ಒಂಟಿ ಸಲಗವೊಂದು ಜನವಸತಿ ಪ್ರದೇಶದಲ್ಲಿ ಪ್ರತ್ಯಕ್ಷವಾಗಿದ್ದು, ಅತಂಕ ಸೃಷ್ಟಿಸಿದ ಘಟನೆ ಭಾನುವಾರ ನಡೆಯಿತು.</p>.<p>ಸಮೀಪದ ಗುಂಡಾಪುರ ಗ್ರಾಮದ ಹೊರವಲಯದಲ್ಲಿರುವ ರವಿ ಎಂಬುವವರ ಬಾಳೆ ತೋಟದಲ್ಲಿ ಭಾನುವಾರ ಬೆಳಗಿನ ಜಾವ ಆನೆ ಪ್ರತ್ಯಕ್ಷವಾಗಿದೆ. ಸಾರ್ವಜನಿಕರು ಮತ್ತು ಗ್ರಾಮಸ್ಥರು ಅರಣ್ಯ ಇಲಾಖೆ ಸಿಬ್ಬಂದಿಗೆ ತಕ್ಷಣ ವಿಷಯ ತಿಳಿಸಿದ್ದಾರೆ.</p>.<p>ಕಾವೇರಿ ವನ್ಯಜೀವಿ ವಲಯದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ನಾಗೇಂದ್ರ ಪ್ರಸಾದ್ ನೇತೃತ್ವದಲ್ಲಿ ಆನೆಯನ್ನು ಕಾಡಿಗೆ ಅಟ್ಟಲು ಕಾರ್ಯ ಯೋಜನೆ ರೂಪಿಸಲಾಗುತ್ತಿತ್ತು. ಕಾರ್ಯಚರಣೆ ಆರಂಭಿಸುವ ಮುನ್ನವೇ ಅರಣ್ಯ ಇಲಾಖೆ ಜೀಪ್ ಚಾಲಕ ಎಸ್.ಚೇತನ್ ಅವರನ್ನು ಅಟ್ಟಾಡಿಸಿದ್ದು, ಅದೃಷ್ಟವಶಾತ್ ಅಲ್ಲಿಂದ ತಪ್ಪಿಸಿಕೊಂಡು ಅಪಾಯದಿಂದ ಪಾರಾಗಿದ್ದಾರೆ.</p>.<p>ಕೆಲವು ದಿನಗಳ ಹಿಂದೆ ಮೂರು ಕಾಡಾನೆಗಳು ಮದ್ದೂರು ತಾಲ್ಲೂಕಿನಲ್ಲಿ ಕಾಣಿಸಿಕೊಂಡಿದ್ದ ಕಾಡಾನೆಗಳು ಬೀಮನಕಂಡಿ ಅರಣ್ಯ ಪ್ರದೇಶದ ಕಡೆಗೆ ಹಿಂದಿರುಗುವಾಗ ಒಂಟಿ ಸಲಗ ಬೇರ್ಪಟ್ಟಿರಬಹುದು ಎಂದು ಅರಣ್ಯ ಇಲಾಖೆ ಅಧಿಕಾರಿಗಳು ಶಂಕೆ ವ್ಯಕ್ತಪಡಿಸಿದ್ದಾರೆ.</p>.<p>ಕಾರ್ಯಾಚಾರಣೆಯಲ್ಲಿ ಕಾವೇರಿ ವನ್ಯಜೀವಿ ವಲಯ ಅರಣ್ಯ ಅಧಿಕಾರಿ ಪ್ರಮೋದ್ ಕುಮಾರ್ ದೇವ್, ಗವಿಯಪ್ಪ, ಹಲಗೂರು ಉಪವಲಯ ಅರಣ್ಯ ವಲಯ ಅಧಿಕಾರಿ ನಿಹಾಲ್, ಶ್ರೀಧರ್, ಸಿದ್ದರಾಮ ಪೂಜಾರಿ ಸಿಬ್ಬಂದಿ ಇದ್ದಾರೆ.</p>.<p>ಸಾರ್ವಜನಿಕರಲ್ಲಿ ಆತಂಕ: ಒಂಟಿ ಸಲಗವನ್ನು ನೋಡಿ ಜನರು ಅತಂಕಗೊಡರು. ಇನ್ನೂ ಬೇರೆ ಆನೆಗಳು ಇರಬಹುದೆಂದು ಈ ಭಾಗದ ರಸ್ತೆಗಳಲ್ಲಿ ಓಡಾಡಲು ರೈತರು ಹಿಂದೇಟು ಹಾಕಿದರು. ಅರಣ್ಯ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿದ ನಂತರ ನಿಟ್ಟುಸಿರು ಬಿಟ್ಟರು.</p>.<div><blockquote>ಆನೆಯು ಸುರಕ್ಷಿತ ಸ್ಥಳದಲ್ಲಿ ಇದ್ದು ಚಲನವಲನದ ಬಗ್ಗೆ ಗಮನ ಹರಿಸಿದ್ದೇವೆ. ಆನೆಯನ್ನು ಸುರಕ್ಷಿತವಾಗಿ ಬಸವನಬೆಟ್ಟ ಅರಣ್ಯ ಪ್ರದೇಶದತ್ತ ಓಡಿಸಲಾಗುವುದು </blockquote><span class="attribution">ನಾಗೇಂದ್ರ ಪ್ರಸಾದ್ ಕನಕಪುರ ಕಾವೇರಿ ವನ್ಯಜೀವಿ ಉಪವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾ ಅಧಿಕಾರಿ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>