<p><strong>ಹಲಗೂರು:</strong> ವ್ಯಕ್ತಿಯೊಬ್ಬನನ್ನು ಅಪಹರಣ ಮಾಡಿದ ಪ್ರಕರಣದಲ್ಲಿ ಏಳು ಆರೋಪಿಗಳನ್ನು ಕೃತ್ಯ ನಡೆದ 12 ತಾಸುಗಳಲ್ಲಿ ಬಂಧಿಸುವಲ್ಲಿ ಹಲಗೂರು ಪೊಲೀಸರು ಯಶಸ್ವಿಯಾಗಿದ್ದಾರೆ.</p>.<p>ಬೆಂಗಳೂರಿನ ಸೋನು ಪ್ರಿಯಾ, ಅನಿತಾ, ಜಯಮ್ಮ, ಚಿಕ್ಕತಾಯಮ್ಮ, ಸುನೀಲ್, ರಾಜು, ಸಂದೇಶ್ ಬಂಧಿತ ಆರೋಪಿಗಳು.</p>.<p>ಸಮೀಪದ ಕೊನ್ನಾಪುರ ಗ್ರಾಮದ ನಿವಾಸಿ ಗೋವರ್ಧನ್ ಮತ್ತು ಬೆಂಗಳೂರಿನಲ್ಲಿದ್ದ ಪತ್ನಿ ಸೋನು ಪ್ರಿಯಾ ನಡುವೆ ಗುರುವಾರ ರಾತ್ರಿ ಮೊಬೈಲ್ನಲ್ಲಿ ಮಾತಿನ ಚಕಮಕಿ ನಡೆದಿದೆ. ಕುಪಿತಗೊಂಡ ಸೋನು ಪ್ರಿಯಾ ಮತ್ತವರ ಸಹಚರರು ಮಧ್ಯ ರಾತ್ರಿ 2 ಗಂಟೆಯ ಸಮಯದಲ್ಲಿ ಕೊನ್ನಾಪುರಕ್ಕೆ ಟೆಂಪೊ ಟ್ರಾವೆಲರ್ನಲ್ಲಿ ಬಂದು, ಮನೆಯಲ್ಲಿ ಮಲಗಿದ್ದ ಗೋವರ್ಧನ್ ಮೇಲೆ ಹಲ್ಲೆ ನಡೆಸಿ, ಅಪಹರಣ ಮಾಡಿ, ಬೆಂಗಳೂರಿನ ರಾಜ ರಾಜೇಶ್ವರಿ ನಗರದ ಚನ್ನಸಂದ್ರ ಬಡಾವಣೆಯಲ್ಲಿರುವ ಜಯಮ್ಮ ಅವರ ಮನೆಯಲ್ಲಿ ಗೋವರ್ಧನನ್ನು ಕೂಡಿಹಾಕಿದ್ದರು. </p>.<p>ಹಲಗೂರು ವೃತ್ತದ ಸರ್ಕಲ್ ಇನ್ಸ್ಪೆಕ್ಟರ್ ಬಿ.ಎಸ್.ಶ್ರೀಧರ್ ಮಾರ್ಗದರ್ಶನದಲ್ಲಿ ಪಿಎಸ್ಐ ಲೋಕೇಶ ನೇತೃತ್ವದ ತಂಡ ಬೆಂಗಳೂರಿನಲ್ಲಿ ಗೃಹಬಂಧನದಲ್ಲಿಟ್ಟಿದ್ದ ಗೋವರ್ಧನ್ ಅವರನ್ನು ಶುಕ್ರವಾರ ಪತ್ತೆಹಚ್ಚಿದ್ದಾರೆ. ಗೋವರ್ಧನ್ ಗಾಯಗೊಂಡಿದ್ದು, ಮಳವಳ್ಳಿ ತಾಲ್ಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.</p>.<p>ಏಳು ಆರೋಪಿಗಳನ್ನು ಶನಿವಾರ ಸಂಜೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಯಿತು. ಆರೋಪಿ ಪಟ್ಟಿಯಲ್ಲಿರುವ, ಕಾನೂನು ಸಂಘರ್ಷಕ್ಕೆ ಸಿಲುಕಿರುವ ಬಾಲಕನೊಬ್ಬನನ್ನು ಮಂಡ್ಯದ ಬಾಲ ಮಂದಿರಕ್ಕೆ ಕಲುಹಿಸಲಾಯಿತು. ಹಲಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಲಗೂರು:</strong> ವ್ಯಕ್ತಿಯೊಬ್ಬನನ್ನು ಅಪಹರಣ ಮಾಡಿದ ಪ್ರಕರಣದಲ್ಲಿ ಏಳು ಆರೋಪಿಗಳನ್ನು ಕೃತ್ಯ ನಡೆದ 12 ತಾಸುಗಳಲ್ಲಿ ಬಂಧಿಸುವಲ್ಲಿ ಹಲಗೂರು ಪೊಲೀಸರು ಯಶಸ್ವಿಯಾಗಿದ್ದಾರೆ.</p>.<p>ಬೆಂಗಳೂರಿನ ಸೋನು ಪ್ರಿಯಾ, ಅನಿತಾ, ಜಯಮ್ಮ, ಚಿಕ್ಕತಾಯಮ್ಮ, ಸುನೀಲ್, ರಾಜು, ಸಂದೇಶ್ ಬಂಧಿತ ಆರೋಪಿಗಳು.</p>.<p>ಸಮೀಪದ ಕೊನ್ನಾಪುರ ಗ್ರಾಮದ ನಿವಾಸಿ ಗೋವರ್ಧನ್ ಮತ್ತು ಬೆಂಗಳೂರಿನಲ್ಲಿದ್ದ ಪತ್ನಿ ಸೋನು ಪ್ರಿಯಾ ನಡುವೆ ಗುರುವಾರ ರಾತ್ರಿ ಮೊಬೈಲ್ನಲ್ಲಿ ಮಾತಿನ ಚಕಮಕಿ ನಡೆದಿದೆ. ಕುಪಿತಗೊಂಡ ಸೋನು ಪ್ರಿಯಾ ಮತ್ತವರ ಸಹಚರರು ಮಧ್ಯ ರಾತ್ರಿ 2 ಗಂಟೆಯ ಸಮಯದಲ್ಲಿ ಕೊನ್ನಾಪುರಕ್ಕೆ ಟೆಂಪೊ ಟ್ರಾವೆಲರ್ನಲ್ಲಿ ಬಂದು, ಮನೆಯಲ್ಲಿ ಮಲಗಿದ್ದ ಗೋವರ್ಧನ್ ಮೇಲೆ ಹಲ್ಲೆ ನಡೆಸಿ, ಅಪಹರಣ ಮಾಡಿ, ಬೆಂಗಳೂರಿನ ರಾಜ ರಾಜೇಶ್ವರಿ ನಗರದ ಚನ್ನಸಂದ್ರ ಬಡಾವಣೆಯಲ್ಲಿರುವ ಜಯಮ್ಮ ಅವರ ಮನೆಯಲ್ಲಿ ಗೋವರ್ಧನನ್ನು ಕೂಡಿಹಾಕಿದ್ದರು. </p>.<p>ಹಲಗೂರು ವೃತ್ತದ ಸರ್ಕಲ್ ಇನ್ಸ್ಪೆಕ್ಟರ್ ಬಿ.ಎಸ್.ಶ್ರೀಧರ್ ಮಾರ್ಗದರ್ಶನದಲ್ಲಿ ಪಿಎಸ್ಐ ಲೋಕೇಶ ನೇತೃತ್ವದ ತಂಡ ಬೆಂಗಳೂರಿನಲ್ಲಿ ಗೃಹಬಂಧನದಲ್ಲಿಟ್ಟಿದ್ದ ಗೋವರ್ಧನ್ ಅವರನ್ನು ಶುಕ್ರವಾರ ಪತ್ತೆಹಚ್ಚಿದ್ದಾರೆ. ಗೋವರ್ಧನ್ ಗಾಯಗೊಂಡಿದ್ದು, ಮಳವಳ್ಳಿ ತಾಲ್ಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.</p>.<p>ಏಳು ಆರೋಪಿಗಳನ್ನು ಶನಿವಾರ ಸಂಜೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಯಿತು. ಆರೋಪಿ ಪಟ್ಟಿಯಲ್ಲಿರುವ, ಕಾನೂನು ಸಂಘರ್ಷಕ್ಕೆ ಸಿಲುಕಿರುವ ಬಾಲಕನೊಬ್ಬನನ್ನು ಮಂಡ್ಯದ ಬಾಲ ಮಂದಿರಕ್ಕೆ ಕಲುಹಿಸಲಾಯಿತು. ಹಲಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>