<p>ಹಲಗೂರು: ನಾಟಕಗಳಲ್ಲಿ ಜೀವನ ಮೌಲ್ಯಗಳು ಅಡಕವಾಗಿದ್ದು, ಜನಸಾಮಾನ್ಯರು ಪೌರಾಣಿಕ ನಾಟಕಗಳ ಮೂಲಕ ಶ್ರದ್ಧೆ ಮತ್ತು ಭಕ್ತಿಯ ಜೊತೆಗೆ ವಿಚಾರಶೀಲತೆ ಬೆಳೆಸಿಕೊಳ್ಳಬೇಕು ಎಂದು ಮಾಜಿ ಶಾಸಕ ಕೆ.ಅನ್ನದಾನಿ ತಿಳಿಸಿದರು.</p>.<p>ಚಿಲ್ಲಾಪುರ ಗ್ರಾಮದ ಸಿದ್ದಪ್ಪಾಜಿ ದೇವಾಲಯದ ಅವರಣದಲ್ಲಿ ಶುಕ್ರವಾರ ರಾತ್ರಿ ಆಯೋಜಿಸಿದ್ದ 'ಶ್ರೀ ಧರೆಗೆ ದೊಡ್ಡವರ ವಚನ ಅಥವ ಸಿದ್ದಪ್ಪಾಜಿ ಪವಾಡ' ನಾಟಕ ಉದ್ಘಾಟಿಸಿ ಅವರು ಮಾತನಾಡಿದರು. ಗ್ರಾಮೀಣ ಪ್ರದೇಶಗಳಲ್ಲಿ ಉಸಿರಾಡುತ್ತಿರುವ ನಾಟಕ ಕಲೆಯನ್ನು ಮುಂದಿನ ತಲೆಮಾರಿಗೆ ಪರಿಚಯಿಸಬೇಕಿದೆ ಎಂದರು.</p>.<p>ಶನಿವಾರ ಬೆಳಿಗ್ಗೆ 6 ಗಂಟೆಯಿಂದ ಪಂಕ್ತಿಸೇವೆ, ಪ್ರಸಾದ ವಿನಿಯೋಗ, ಸ್ವಾಮಿಯ ಜಯಂತ್ಯುತ್ಸವ, ಮುತ್ತಾಂಜನೇಯ ಉತ್ಸವ ಸೇವೆ ಮತ್ತು ಅನ್ನ ಸಂತರ್ಪಣೆ ನಡೆಯಿತು. ಮೂರು ದಿನ ಸಮೀಪದ ಸಾವಿರಾರು ಭಕ್ತಾಧಿಗಳು ಸಿದ್ದಪ್ಪಾಜಿ ಜಾತ್ರೋತ್ಸವದಲ್ಲಿ ಇದ್ದರು.</p>.<p>ವಿಶ್ವಕರ್ಮ ಸೇವಾ ಟ್ರಸ್ಟ್ ಅಧ್ಯಕ್ಷ ಈಶ ಕುಮಾರ್, ಕಾರ್ಯದರ್ಶಿ ರಾಮಚಂದ್ರಚಾರ್, ಪಂಚಾಯಿತಿ ಮಾಜಿ ಸದಸ್ಯ ಎಚ್.ಕೆ.ಮೂರ್ತಿ, ಮುಖಂಡರಾದ ಉಮೇಶ್, ಸಿದ್ದಾಚಾರಿ, ತಮ್ಮಣ್ಣ ಗೌಡ, ನಂದೀಪುರ ನಾಗರಾಜು, ಎನ್.ಕೆ.ಕುಮಾರ್, ಬಸವರಾಜು, ಪುಟ್ಟಸ್ವಾಮಾಚಾರ್, ಮೋದಿ ರವಿ ಭಾಗವಹಿಸಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260405-40-391630844</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹಲಗೂರು: ನಾಟಕಗಳಲ್ಲಿ ಜೀವನ ಮೌಲ್ಯಗಳು ಅಡಕವಾಗಿದ್ದು, ಜನಸಾಮಾನ್ಯರು ಪೌರಾಣಿಕ ನಾಟಕಗಳ ಮೂಲಕ ಶ್ರದ್ಧೆ ಮತ್ತು ಭಕ್ತಿಯ ಜೊತೆಗೆ ವಿಚಾರಶೀಲತೆ ಬೆಳೆಸಿಕೊಳ್ಳಬೇಕು ಎಂದು ಮಾಜಿ ಶಾಸಕ ಕೆ.ಅನ್ನದಾನಿ ತಿಳಿಸಿದರು.</p>.<p>ಚಿಲ್ಲಾಪುರ ಗ್ರಾಮದ ಸಿದ್ದಪ್ಪಾಜಿ ದೇವಾಲಯದ ಅವರಣದಲ್ಲಿ ಶುಕ್ರವಾರ ರಾತ್ರಿ ಆಯೋಜಿಸಿದ್ದ 'ಶ್ರೀ ಧರೆಗೆ ದೊಡ್ಡವರ ವಚನ ಅಥವ ಸಿದ್ದಪ್ಪಾಜಿ ಪವಾಡ' ನಾಟಕ ಉದ್ಘಾಟಿಸಿ ಅವರು ಮಾತನಾಡಿದರು. ಗ್ರಾಮೀಣ ಪ್ರದೇಶಗಳಲ್ಲಿ ಉಸಿರಾಡುತ್ತಿರುವ ನಾಟಕ ಕಲೆಯನ್ನು ಮುಂದಿನ ತಲೆಮಾರಿಗೆ ಪರಿಚಯಿಸಬೇಕಿದೆ ಎಂದರು.</p>.<p>ಶನಿವಾರ ಬೆಳಿಗ್ಗೆ 6 ಗಂಟೆಯಿಂದ ಪಂಕ್ತಿಸೇವೆ, ಪ್ರಸಾದ ವಿನಿಯೋಗ, ಸ್ವಾಮಿಯ ಜಯಂತ್ಯುತ್ಸವ, ಮುತ್ತಾಂಜನೇಯ ಉತ್ಸವ ಸೇವೆ ಮತ್ತು ಅನ್ನ ಸಂತರ್ಪಣೆ ನಡೆಯಿತು. ಮೂರು ದಿನ ಸಮೀಪದ ಸಾವಿರಾರು ಭಕ್ತಾಧಿಗಳು ಸಿದ್ದಪ್ಪಾಜಿ ಜಾತ್ರೋತ್ಸವದಲ್ಲಿ ಇದ್ದರು.</p>.<p>ವಿಶ್ವಕರ್ಮ ಸೇವಾ ಟ್ರಸ್ಟ್ ಅಧ್ಯಕ್ಷ ಈಶ ಕುಮಾರ್, ಕಾರ್ಯದರ್ಶಿ ರಾಮಚಂದ್ರಚಾರ್, ಪಂಚಾಯಿತಿ ಮಾಜಿ ಸದಸ್ಯ ಎಚ್.ಕೆ.ಮೂರ್ತಿ, ಮುಖಂಡರಾದ ಉಮೇಶ್, ಸಿದ್ದಾಚಾರಿ, ತಮ್ಮಣ್ಣ ಗೌಡ, ನಂದೀಪುರ ನಾಗರಾಜು, ಎನ್.ಕೆ.ಕುಮಾರ್, ಬಸವರಾಜು, ಪುಟ್ಟಸ್ವಾಮಾಚಾರ್, ಮೋದಿ ರವಿ ಭಾಗವಹಿಸಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260405-40-391630844</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>