ಮಂಡ್ಯ:ಭಾರಿಮಳೆಯಿಂದ ಒಂದೂವರೆ ತಿಂಗಳ ಹಿಂದಷ್ಟೇ ಒಡೆದಿದ್ದ ತಾಲ್ಲೂಕಿನ ಹಳೇಬೂದನೂರು ಕೆರೆ ಮತ್ತೆ ಒಡೆದಿದೆ. ಶುಕ್ರವಾರ ರಾತ್ರಿ ಸುರಿದ ಮಳೆಗೆ ಕೆರೆ ಏರಿ ಮೊದಲು ಒಡೆದಿದ್ದ ಸ್ಥಳದಲ್ಲೇ ಒಡೆದಿದ್ದು ಬೆಂಗಳೂರು- ಮೈಸೂರು ರಾಷ್ಟ್ರೀಯ ಹೆದ್ದಾರಿಗೆ ನೀರು ನುಗ್ಗಿದೆ.
ಮಂಡ್ಯದಿಂದ ಬೆಂಗಳೂರಿಗೆ ತೆರಳುವ ಮಾರ್ಗ ಸಂಪೂರ್ಣವಾಗಿ ಮುಳುಗಿದೆ. ನಿರ್ಮಾಣ ಹಂತದಲ್ಲಿರುವ ಸೇತುವೆಯೇ ಕೆರೆ ಏರಿಯಂತಾಗಿದೆ. ಇನ್ನೊಂದು ಮಾರ್ಗದಲ್ಲಿ ಎರಡೂ ಕಡೆಯ ವಾಹನಗಳು ಸಂಚರಿಸುತ್ತಿವೆ. ವಾಹನ ದಟ್ಟಣೆ ಹೆಚ್ಚಾಗಿದ್ದು ಟ್ರಾಫಿಕ್ ಜಾಮ್ ಉಂಟಾಗಿದೆ.