<p><strong>ಮಳವಳ್ಳಿ: </strong>ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಸೋತ ಅಭ್ಯರ್ಥಿಯೊಬ್ಬರು ಕೃತಜ್ಞತೆಯ ಕರಪತ್ರ ಮುದ್ರಿಸಿ ಮತದಾರರಿಗೆ ಹಂಚಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.</p>.<p>ತಳಗವಾದಿ ಗ್ರಾಮ ಪಂಚಾಯಿತಿ ಟಿ.ಕಾಗೇಪುರ ಕ್ಷೇತ್ರದ ಅಭ್ಯರ್ಥಿ ಪಿ.ನಾಗರಾಜು ಕರಪತ್ರ ಮುದ್ರಿಸಿರುವ ವ್ಯಕ್ತಿ.</p>.<p>2015ರಲ್ಲಿ ಜೆಡಿಎಸ್ ಬೆಂಬಲಿತ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿ ಸೋತಿದ್ದ ಪಿ.ನಾಗರಾಜು ಈ ಬಾರಿ ಅಧಿಕೃತ ಜೆಡಿಎಸ್ ಬೆಂಬಲಿತ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. 441 ಮತ ಪಡೆದು 53 ಮತಗಳ ಅಂತರದಿಂದ ಸೋತಿದ್ದರು.</p>.<p>ಕೃತಜ್ಞತಾ ಜಾಥಾ ನಡೆಸಿ ಗ್ರಾಮದ ಪ್ರತಿ ಮನೆಗೂ ತೆರಳಿ ಕರಪತ್ರ ಹಂಚಿ ಮತದಾರರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ. ಚುನಾವಣೆಯಲ್ಲಿ ಜಯಗಳಿಸಿದ ಅಭ್ಯರ್ಥಿಗೂ ಅಭಿನಂದನೆ ಸಲ್ಲಿಸಿ ಅಭಿವೃದ್ಧಿಗೆ ಬೇಕಾದ ಸಹಕಾರ, ಸಲಹೆ ನೀಡುವುದಾಗಿ ತಿಳಿಸಿದ್ದಾರೆ.</p>.<p>ಚುನಾವಣೆಯಲ್ಲಿ ಸೋಲು-ಗೆಲುವು ಸಾಮಾನ್ಯ. ಎಚ್.ಡಿ.ದೇವೇಗೌಡ, ಕುಮಾರ ಸ್ವಾಮಿಯಂಥ ರಾಜಕಾರಣಿಗಳೇ ಸೋತಿದ್ದಾರೆ. ಹೀಗಾಗಿ ಮತದಾರರಿಗೆ ಕೃತಜ್ಞತೆ ಸಲ್ಲಿಸಿ ಪಕ್ಷ ಸಂಘಟನೆಗೆ ಮುಂದಾಗುವೆ ಎಂದು ಪಿ.ನಾಗರಾಜು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಳವಳ್ಳಿ: </strong>ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಸೋತ ಅಭ್ಯರ್ಥಿಯೊಬ್ಬರು ಕೃತಜ್ಞತೆಯ ಕರಪತ್ರ ಮುದ್ರಿಸಿ ಮತದಾರರಿಗೆ ಹಂಚಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.</p>.<p>ತಳಗವಾದಿ ಗ್ರಾಮ ಪಂಚಾಯಿತಿ ಟಿ.ಕಾಗೇಪುರ ಕ್ಷೇತ್ರದ ಅಭ್ಯರ್ಥಿ ಪಿ.ನಾಗರಾಜು ಕರಪತ್ರ ಮುದ್ರಿಸಿರುವ ವ್ಯಕ್ತಿ.</p>.<p>2015ರಲ್ಲಿ ಜೆಡಿಎಸ್ ಬೆಂಬಲಿತ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿ ಸೋತಿದ್ದ ಪಿ.ನಾಗರಾಜು ಈ ಬಾರಿ ಅಧಿಕೃತ ಜೆಡಿಎಸ್ ಬೆಂಬಲಿತ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. 441 ಮತ ಪಡೆದು 53 ಮತಗಳ ಅಂತರದಿಂದ ಸೋತಿದ್ದರು.</p>.<p>ಕೃತಜ್ಞತಾ ಜಾಥಾ ನಡೆಸಿ ಗ್ರಾಮದ ಪ್ರತಿ ಮನೆಗೂ ತೆರಳಿ ಕರಪತ್ರ ಹಂಚಿ ಮತದಾರರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ. ಚುನಾವಣೆಯಲ್ಲಿ ಜಯಗಳಿಸಿದ ಅಭ್ಯರ್ಥಿಗೂ ಅಭಿನಂದನೆ ಸಲ್ಲಿಸಿ ಅಭಿವೃದ್ಧಿಗೆ ಬೇಕಾದ ಸಹಕಾರ, ಸಲಹೆ ನೀಡುವುದಾಗಿ ತಿಳಿಸಿದ್ದಾರೆ.</p>.<p>ಚುನಾವಣೆಯಲ್ಲಿ ಸೋಲು-ಗೆಲುವು ಸಾಮಾನ್ಯ. ಎಚ್.ಡಿ.ದೇವೇಗೌಡ, ಕುಮಾರ ಸ್ವಾಮಿಯಂಥ ರಾಜಕಾರಣಿಗಳೇ ಸೋತಿದ್ದಾರೆ. ಹೀಗಾಗಿ ಮತದಾರರಿಗೆ ಕೃತಜ್ಞತೆ ಸಲ್ಲಿಸಿ ಪಕ್ಷ ಸಂಘಟನೆಗೆ ಮುಂದಾಗುವೆ ಎಂದು ಪಿ.ನಾಗರಾಜು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>