ಇಲ್ಲಿ ಸುದ್ದಿಗಾರರ ಜೊತೆ ಭಾನುವಾರ ಮಾತನಾಡಿದ ಅವರು, ‘ಮಂಡ್ಯಕ್ಕೆ ಸಂಬಂಧವೇ ಇಲ್ಲದವರು ಇಲ್ಲಿಯ ಜನರಿಗೆ ವಿಷ ಹಾಕಿದ್ದಾರೆ. ಮನೆಗಳಿಗೆ ಬೆಂಕಿ ಬಿದ್ದರೆ ಅವರಾರೂ ಆರಿಸಲು ಬರುವುದಿಲ್ಲ. ನಿಮ್ಮ ಕೈಮುಗಿದು ಬೇಡಿಕೊಳ್ಳುತ್ತೇನೆ ಶಾಂತವಾಗಿರಿ. ಮಂಡ್ಯ ಕ್ಷೇತ್ರದ ಶಾಂತಿ, ಸಾಮರಸ್ಯ ಹಾಳಾಗಲು ಬಿಡುವುದಿಲ್ಲ’ ಎಂದರು.