<p><strong>ಶ್ರೀರಂಗಪಟ್ಟಣ:</strong> ಹಿಂದೂ ಜಾಗರಣ ವೇದಿಕೆ ಬುಧವಾರ ಆಯೋಜಿಸಿದ್ದ ಮೂಡಲ ಬಾಗಿಲು ಹನುಮಾನ್ ಮಾಲಾಧಾರಿಗಳ ಸಂಕೀರ್ತನಾ ಯಾತ್ರೆಯಿಂದ ಶ್ರೀರಂಗಪಟ್ಟಣ ಕೇಸರಿಮಯವಾಗಿತ್ತು. ಜೈಶ್ರೀರಾಮ್, ಜೈ ಹನುಮಾನ್ ಘೋಷಣೆಗಳು ಮೊಳಗಿದವು.</p><p>ಜ್ಯೋತಿಷಿ ವಿ. ಭಾನುಪ್ರಕಾಶ್ ಶರ್ಮಾ ಯಾತ್ರೆಗೆ ಚಾಲನೆ ನೀಡಿದರು. ಯಾತ್ರೆ ಪ್ರಮುಖ ರಸ್ತೆಗಳಲ್ಲಿ ಸಾಗಿ ಶ್ರೀರಂಗನಾಥಸ್ವಾಮಿ ದೇವಾಲಯ ತಲುಪಿತು. </p><p>ಯಾತ್ರೆಯು ಜಾಮಿಯಾ ಮಸೀದಿ ಬಳಿ ಬರುತ್ತಿದ್ದಂತೆಯೇ ಮಾಲಾಧಾರಿಗಳು, ‘ಮಂದಿರವಲ್ಲೇ ಕಟ್ಟುವೆವು...’ ಎಂದು ಘೋಷಣೆ ಕೂಗಿದರು. ಆಗ ಪೊಲೀಸರು ಮತ್ತು ಮಾಲಾಧಾರಿಗಳ ನಡುವೆ ತಳ್ಳಾಟವೂ ನಡೆಯಿತು. </p><p>ಮಾಲಾಧಾರಿಗಳ ಸಭೆಯಲ್ಲಿ ಮಾತನಾಡಿದ ವೇದಿಕೆಯ ವಿಭಾಗೀಯ ಸಂಚಾಲಕ ಲೋಹಿತರಾಜ್ ಅರಸ್, ‘ಜಾಮಿಯಾ ಮಸೀದಿಯ ಜಾಗದಲ್ಲಿ ಹನುಮನ ಮಂದಿರ ಇದ್ದದ್ದು ನಿಜ. ಮತ್ತೆ ಮಂದಿರ ನಿರ್ಮಿಸಿ ಹನುಮನನ್ನು ಪ್ರತಿಷ್ಠಾಪಿಸುತ್ತೇವೆ’ ಎಂದರು. ಬಿಗಿ ಬಂದೋಬಸ್ತ್ ಕಲ್ಪಿಸಲಾಗಿತ್ತು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶ್ರೀರಂಗಪಟ್ಟಣ:</strong> ಹಿಂದೂ ಜಾಗರಣ ವೇದಿಕೆ ಬುಧವಾರ ಆಯೋಜಿಸಿದ್ದ ಮೂಡಲ ಬಾಗಿಲು ಹನುಮಾನ್ ಮಾಲಾಧಾರಿಗಳ ಸಂಕೀರ್ತನಾ ಯಾತ್ರೆಯಿಂದ ಶ್ರೀರಂಗಪಟ್ಟಣ ಕೇಸರಿಮಯವಾಗಿತ್ತು. ಜೈಶ್ರೀರಾಮ್, ಜೈ ಹನುಮಾನ್ ಘೋಷಣೆಗಳು ಮೊಳಗಿದವು.</p><p>ಜ್ಯೋತಿಷಿ ವಿ. ಭಾನುಪ್ರಕಾಶ್ ಶರ್ಮಾ ಯಾತ್ರೆಗೆ ಚಾಲನೆ ನೀಡಿದರು. ಯಾತ್ರೆ ಪ್ರಮುಖ ರಸ್ತೆಗಳಲ್ಲಿ ಸಾಗಿ ಶ್ರೀರಂಗನಾಥಸ್ವಾಮಿ ದೇವಾಲಯ ತಲುಪಿತು. </p><p>ಯಾತ್ರೆಯು ಜಾಮಿಯಾ ಮಸೀದಿ ಬಳಿ ಬರುತ್ತಿದ್ದಂತೆಯೇ ಮಾಲಾಧಾರಿಗಳು, ‘ಮಂದಿರವಲ್ಲೇ ಕಟ್ಟುವೆವು...’ ಎಂದು ಘೋಷಣೆ ಕೂಗಿದರು. ಆಗ ಪೊಲೀಸರು ಮತ್ತು ಮಾಲಾಧಾರಿಗಳ ನಡುವೆ ತಳ್ಳಾಟವೂ ನಡೆಯಿತು. </p><p>ಮಾಲಾಧಾರಿಗಳ ಸಭೆಯಲ್ಲಿ ಮಾತನಾಡಿದ ವೇದಿಕೆಯ ವಿಭಾಗೀಯ ಸಂಚಾಲಕ ಲೋಹಿತರಾಜ್ ಅರಸ್, ‘ಜಾಮಿಯಾ ಮಸೀದಿಯ ಜಾಗದಲ್ಲಿ ಹನುಮನ ಮಂದಿರ ಇದ್ದದ್ದು ನಿಜ. ಮತ್ತೆ ಮಂದಿರ ನಿರ್ಮಿಸಿ ಹನುಮನನ್ನು ಪ್ರತಿಷ್ಠಾಪಿಸುತ್ತೇವೆ’ ಎಂದರು. ಬಿಗಿ ಬಂದೋಬಸ್ತ್ ಕಲ್ಪಿಸಲಾಗಿತ್ತು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>