ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶ್ರೀರಂಗಪಟ್ಟಣ: ವಿದ್ಯಾರ್ಥಿಯ ಮರ್ಮಾಂಗ ಕತ್ತರಿಸಿದ ದುಷ್ಕರ್ಮಿಗಳು

Last Updated 14 ಫೆಬ್ರುವರಿ 2020, 14:24 IST
ಅಕ್ಷರ ಗಾತ್ರ

ಶ್ರೀರಂಗಪಟ್ಟಣ: ಕಾಲೇಜಿಗೆ ಹೋಗಲು ಶುಕ್ರವಾರ ಬೆಳಿಗ್ಗೆ ಬಸ್‌ಗೆ ಕಾಯುತ್ತಿದ್ದ ವಿದ್ಯಾರ್ಥಿಯನ್ನು ಕಾರಿಗೆ ಹತ್ತಿಸಿಕೊಂಡ ದುಷ್ಕರ್ಮಿಗಳು, ಮಾರ್ಗಮಧ್ಯೆ ಇಳಿಸಿ ಆತನ ಮರ್ಮಾಂಗವನ್ನು ಕತ್ತರಿಸಿದ್ದಾರೆ.

ಪಾಂಡವಪುರ ತಾಲ್ಲೂಕಿನ ಗ್ರಾಮವೊಂದರ ಈ ವಿದ್ಯಾರ್ಥಿ ಕೆ.ಆರ್‌.ಪೇಟೆ ಪಾಲಿಟೆಕ್ನಿಕ್‌ಗೆ ತೆರಳಲು ಅರಳಕುಪ್ಪೆ ಗೇಟ್‌ ಬಳಿ ಬಸ್‌ಗಾಗಿ ಕಾಯುತ್ತಿದ್ದ. ಈ ವೇಳೆ ಕಾರಿನಲ್ಲಿ ಬಂದ ಮೂವರು ಕೆ.ಆರ್‌.ಪೇಟೆಗೆ ಹೋಗುತ್ತಿರುವುದಾಗಿ ಹೇಳಿ ಆತನನ್ನು ತಮ್ಮ ಕಾರಿನಲ್ಲಿ ಹತ್ತಿಸಿಕೊಂಡಿದ್ದಾರೆ. ಎಲೆಕೆರೆ ಗ್ರಾಮ ಮತ್ತು ಹ್ಯಾಂಡ್‌ಪೋಸ್ಟ್‌ ನಡುವೆ ವಾಹನ ನಿಲ್ಲಿಸಿ ಮರ್ಮಾಂಗವನ್ನು ಕತ್ತರಿಸಿ ಕೆಳಗೆ ತಳ್ಳಿ ಹೋಗಿದ್ದಾರೆ.

ಗಾಯಾಳು ವಿದ್ಯಾರ್ಥಿಯನ್ನು ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ತೀವ್ರ ನಿಗಾ ಘಟಕದಲ್ಲಿ ಇರಿಸಲಾಗಿದೆ. ಬಿಳಿ ಬಣ್ಣದ ಕಾರಿನಲ್ಲಿ ಬಂದ ಮೂವರು ದುಷ್ಕರ್ಮಿಗಳು ಈ ಕೃತ್ಯ ಎಸಗಿದ್ದಾರೆ ಎಂದು ತಿಳಿದು ಬಂದಿದೆ.

ವಿದ್ಯಾರ್ಥಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾರಣ ಆತನಿಂದ ಯಾವುದೇ ಹೇಳಿಕೆ ಪಡೆಯಲು ಸಾಧ್ಯವಾಗಿಲ್ಲ. ಶನಿವಾರ ಆತನ ಹೇಳಿಕೆ ಪಡೆದು ಕ್ರಮ ಕೈಗೊಳ್ಳಲಾಗುವುದು. ಆರೋಪಿಗಳ ಪತ್ತೆಗೆ ತಂಡ ರಚಿಸಲಾಗಿದೆ ಎಂದು ಗ್ರಾಮಾಂತರ ಠಾಣೆ ಪೊಲೀಸರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT