ತಾಲ್ಲೂಕಿನ ಹರಳಹಳ್ಳಿ ಗ್ರಾಮದಲ್ಲಿ ಶನಿವಾರ ನಡೆದ ಜೆಡಿಎಸ್ ಸಭೆಯಲ್ಲಿ ಮಾತನಾಡಿದ ಅವರು, ‘ಮಂಡ್ಯ ಜಿಲ್ಲೆಯಲ್ಲಿ ಸಚಿವ ನಾರಾಯಣಗೌಡ ದರ್ಪ ತೋರುತ್ತಿದ್ದಾರೆ. ಅಧಿಕಾರಿಗಳನ್ನು ಬಳಸಿಕೊಂಡು ನಮ್ಮ ಕಾರ್ಯಕರ್ತರಿಗೆ ಕಿರುಕುಳ ನೀಡುತ್ತಿದ್ದಾರೆ. ಏನೇನು ತೊಂದರೆಯಾಗಿದೆ ಎಂಬುದನ್ನು ಪಟ್ಟಿ ಮಾಡಲು ಸೂಚಿಸಿದ್ದೇನೆ. ಈ ಕುರಿತು ಪಟ್ಟಣದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಗುವುದು’ ಎಂದು ಎಚ್ಚರಿಸಿದರು.